ಐಷಾರಾಮಿ ವಾಹನ, ಹೆಚ್ಚು ಆದಾಯ, ಸರ್ಕಾರಿ ನೌಕರಿ, ಹೆಚ್ಚು ಜಾಗ ಮತ್ತು ಭೂಮಿ ಇರುವ ಕುಟುಂಬಗಳ ಕಾರ್ಡ್ಗಳನ್ನೂ ಗುರುತಿಸಿಕೊಂಡು ಆದಾಯ ತೆರಿಗೆ ಇಲಾಖೆಯು ಪ್ರತಿ ವರ್ಷ ತೆರಿಗೆ ಸಲ್ಲಿಸುತ್ತಿರುವವರ ವಿವರಗಳನ್ನು ಆಹಾರ ಇಲಾಖೆಗೆ ಒದಗಿಸುತ್ತಿದೆ. ಈ ಕಾರಣದಿಂದ ಬಿಪಿಎಲ್ಗಳನ್ನು ಅನರ್ಹ ಎಂಬ ಪಟ್ಟಿಯಲ್ಲಿ ರದ್ದುಗೊಳಿಸಲಾಗುತ್ತಿದೆ. ಹೀಗಾಗಿ ಕೆಲವು ಬಿಪಿಎಲ್ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ರಾಜ್ಯಾದ್ಯಂತ ತೀವ್ರಗೊಂಡಿದೆ. ಈಗಾಗಲೇ ಬೆಂಗಳೂರು, ಹಾವೇರಿ, ಧಾರವಾಡ, ಬಳ್ಳಾರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾವಿರಾರು ಕಾರ್ಡ್ಗಳು ರದ್ದಾಗಿವೆ.
ಒಂದು ವೇಳೆ ಬಿಪಿಎಲ್ ಕಾರ್ಡ್ಗಳನ್ನು ಉಳಿಸಿಕೊಳ್ಳಲು ಪ್ರಯತ್ನಗಳನ್ನು ಮಾಡುತ್ತಿರುವವರು ಈ ಷರತ್ತುಗಳನ್ನು ಒಳಗೊಂಡಿರಬೇಕು.
ಸರ್ಕಾರದ ಈ ನಿಯಮಗಳಿಂದ ಕೆಲವೊಮ್ಮೆ ಅನರ್ಹರನ್ನು ತೆಗೆದುಹಾಕೊ ನಿಜವಾದ ಬಡವರ ಕಾರ್ಡ್ ರದ್ದುಗಿಳಿಸಿರುತ್ತದೆ. ಒಂದುವೇಳೆ ಈ ಎಲ್ಲಾ ಷರತ್ತುಗಳು ಒಳಗೊಂಡಿದ್ದರೂ, ಬಿಪಿಎಲ್ ಕಾರ್ಡ್ ಅನರ್ಹ ಎಂದು ರದ್ದಾಗಿದೆ ಎಂದರೆ ಸಮೀಪದ ಆಹಾರ ಇಲಾಖೆ ಕಚೇರಿ ಅಥವಾ ತಾಲೂಕು ಕಚೇರಿಗೆ ದೂರು ಸಲ್ಲಿಸಬಹುದು.
ನಿಮ್ಮ ಕಾರ್ಡ್ ರದ್ದು ಆಗಿದೆಯೇ ಇಲ್ಲವೇ ಎಂಬುದನ್ನು ಪರೀಕ್ಷಿಸಲು ಈ ವಿಧಾನ ನೋಡಿ: https://mahitikanaja.karnataka.gov.in/FCS/MyRationCard ಈ ಲಿಂಕ್ ನಲ್ಲಿ ನಿಮ್ಮ ಜಿಲ್ಲೆಯನ್ನು ಆಯ್ಕೆ ಮಾಡಿ ತದನಂತರ ರೇಷನ್ ಕಾರ್ಡ್ ಸಂಖ್ಯೆಯನ್ನು ಟೈಮ್ ಮಾಡಿ ಕ್ಲಿಕ್ ಮಾಡಿದರೆ ಸಾಕು. ಕಾರ್ಡ್ ಸ್ಥಿತಿ ಆಕ್ಟೀವ್ ಎಂದು ಕಾಣಿಸಿದರೆ ನಿಮ್ಮ ಕಾರ್ಡ್ ಸುರಕ್ಷಿತ, ಇನ್ ಆಕ್ಟೀವ್ ಎಂದು ಕಾಣಿಸಿಕೊಂಡರೆ ರದ್ದು ಆಗಿದೆ ಎಂದು ಅರ್ಥ.
ಮೊಬೈಲ್ ನೆಟ್ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…
ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…
ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…
ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…