Advertisement
ಧಾರ್ಮಿಕ

#BrahmaMuhurta |ಬ್ರಾಹ್ಮೀ ಮುಹೂರ್ತ ವಿಚಾರ ಧಾರೆ | ರಾತ್ರಿಯ ಅಂತಿಮ ಪ್ರಹರವೇ ಬ್ರಾಹ್ಮೀ ಮುಹೂರ್ತ

Share

ಬ್ರಹ್ಮ ಮುಹೂರ್ತ ಅಥವಾ ಸೂರ್ಯೋದಯದಕ್ಕೆ ಮುಂಚಿನ ರಾತ್ರಿಯ ಕೊನೆಯ ಪಾದದ ಮಹತ್ವವೇನು? ಈ ಸಮಯವು “ಬ್ರಹ್ಮ” ಅಥವಾ ಸೃಷ್ಟಿಕರ್ತನನ್ನಾಗಿಸಿಕೊಳ್ಳುವ ಸಾಧ್ಯತೆಯನ್ನು ನೀಡುತ್ತದೆ ಮತ್ತು ನಿಮ್ಮ ಜೀವನವನ್ನು ನೀವು ಬಯಸಿದ ರೀತಿಯಲ್ಲಿ ನಿರ್ಮಿಸಿಕೊಳ್ಳಬಹುದು.

ಆಯುರ್ವೇದದ ಪ್ರಕಾರ ಮುಂಜಾನೆಯ ನಸುಕಿನ 03:00 ರಿಂದ 06:00 ರವರೆಗಿನ ಸಮಯ. ನಮ್ಮ ಪ್ರಾಚೀನ ಋಷಿಮುನಿಗಳು ಈ ಸಮಯಕ್ಕೆ ವಿಶೇಷವಾದಂತಹ ಸ್ಥಾನಮಾನವನ್ನು ನೀಡಿದ್ದಾರೆ. ಈ ಸಮಯದಲ್ಲಿ ಧ್ಯಾನ, ಯೋಗ, ಜಪ, ಪೂಜೆ ಮುಂತಾದ ಸತ್ಕರ್ಮಗಳನ್ನಾಚರಿಸಿದರೆ ಹೆಚ್ಚು ಫಲಪ್ರದ. ಪ್ರತಿನಿತ್ಯ ಬ್ರಹ್ಮಮುಹೂರ್ತದಲ್ಲಿ ಎದ್ದೇಳುವುದರಿಂದ ಶರೀರದ ಸೌಂದರ್ಯ, ಬಲ, ವಿದ್ಯೆ, ಬುದ್ಧಿ ಹಾಗೂ ಆರೋಗ್ಯಗಳು ವೃದ್ಧಿಸುತ್ತವೆ. ಈ ಸಮಯದಲ್ಲಿ ನಿದ್ರಿಸುವುದು ಶಾಸ್ತ್ರ ನಿಷಿದ್ಧ. ವೈಜ್ಞಾನಿಕ ದೃಷ್ಟಿಯಿಂದಲೂ ಬ್ರಹ್ಮ ಮುಹೂರ್ತಕ್ಕೆ ವಿಶೇಷವಾದ ಮಹತ್ವವಿದೆ.

ಭೂಮಿಯ ಜೊತೆ ಸೂರ್ಯ ಮತ್ತು ಚಂದ್ರನೊಂದಿಗಿನ ಸಂಬಂಧದ ಸ್ವರೂಪ ಹೇಗಿದೆಯೆಂದರೆ ಈ ಸಮಯದಲ್ಲಿ ಮಾನವರಲ್ಲಿ ಕೆಲವು ದೈಹಿಕ ಬದಲಾವಣೆಗಳು ಸಂಭವಿಸುತ್ತವೆ. ನಿಮ್ಮ ದೇಹದಲ್ಲಿನ ತ್ಯಾಜ್ಯ ವಸ್ತುಗಳು, ಉದಾಹರಣೆಗೆ ಮೂತ್ರ ಮುಂತಾದವುಗಳ ಕೆಲವು ಗುಣಗಳು ಆ ಸಮಯದಲ್ಲಿ ಹೊಂದಿರುವ ರೀತಿ ದಿನದ ಬೇರೆ ಯಾವುದೇ ಸಮಯದಲ್ಲಿ ಇರುವುದಿಲ್ಲ ಎಂದು ವೈದ್ಯಕೀಯ ವಿಜ್ಞಾನವು ಕಂಡುಹಿಡಿದಿದೆ.

ಈ ಸಮಯದಲ್ಲಿ ವಾಯುಮಂಡಲ ಮಾಲಿನ್ಯದಿಂದ ವಿಮುಕ್ತವಾಗಿರುತ್ತದೆ. ಆಮ್ಲಜನಕದ ಪ್ರಮಾಣ ಶೇಕಡಾ
೪೧ರಷ್ಟಿರುತ್ತದೆ. ಇದರಿಂದ ನಮ್ಮ ಶ್ವಾಸಕೋಶಗಳು ಶುದ್ಧಿಯಾಗುತ್ತದೆ. ಶುದ್ಧವಾಯುವಿನಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯವಾಗಿರುತ್ತವೆ. ಯಾರು ಬ್ರಹ್ಮ ಮುಹೂರ್ತದಲ್ಲೆದ್ದು ನಡೆಯುತ್ತಾರೋ ಅವರ ಶರೀರದಲ್ಲಿ ಸಂಜೀವಿನೀ ಶಕ್ತಿಯ ಸಂಚಾರವಾಗುತ್ತದೆ ಎಂದು ಆಯುರ್ವೇದ ತಿಳಿಸುತ್ತದೆ.

ಈ ಸಮಯದಲ್ಲಿ ಬೀಸುವ ಗಾಳಿಗೆ ಅಮೃತದಂತಹ ಶಕ್ತಿಯಿರುತ್ತದೆ. ರಾತ್ರಿಯ ವಿಶ್ರಾಂತಿಯ ನಂತರ ಶರೀರ ಹಾಗೂ ಬುದ್ಧಿ ಉಲ್ಲಸಿತವಾಗಿರುತ್ತವೆ. ಬ್ರಾಹ್ಮೀ ಮುಹೂರ್ತದಲ್ಲಿ ಅಧ್ಯಯನ ಮಾಡಿದರೆ ಸುಲಭವಾಗಿ ಮನವರಿಕೆಯಾಗುತ್ತದೆ. ಅಧ್ಯಯನ ಮಾಡಲು ಬ್ರಹ್ಮಮುಹೂರ್ತವೇ ಪ್ರಶಸ್ತ. ಪ್ರಮುಖ ಮಂದಿರಗಳ ಮುಖ್ಯದ್ವಾರ ತೆರೆಯುವುದು ಬ್ರಹ್ಮ ಮುಹೂರ್ತದ ಸಮಯದಲ್ಲೇ. ದೇವರ ಶೃಂಗಾರ ಹಾಗೂ ಪೂಜೆಗಳನ್ನು ಬ್ರಹ್ಮ ಮುಹೂರ್ತದಲ್ಲಿ ನಡೆಸಲಾಗುತ್ತದೆ.

ಬ್ರಹ್ಮ ಮುಹೂರ್ತದಲ್ಲಿ ಭಗವಂತನ ಪೂಜೆ, ಧ್ಯಾನ ಹಾಗೂ ಪವಿತ್ರಕಾರ್ಯಗಳನ್ನು ಮಾಡುವುದರಿಂದ ಆತ್ಮ ಶಕ್ತಿ ಪ್ರಾಪ್ತಿಯಾಗುತ್ತದೆ. ಮನುಷ್ಯನ ಜ್ಞಾನ, ವಿವೇಕ, ಶಾಂತಿ, ಸುಖಮುಂತಾದ ಸದ್ಗುಣಗಳ ವೃದ್ಧಿಯಾಗುತ್ತದೆ. ಭಗವಂತನ ಸ್ಮರಣೆಯ ನಂತರ ಮೊಸರು, ತುಪ್ಪ, ಕನ್ನಡಿ, ಬಿಲ್ವಪತ್ರೆ, ಹೂವಿನ ಮಾಲೆ ಮುಂತಾದ ಪವಿತ್ರ ವಸ್ತುಗಳನ್ನು ನೋಡುವುದರಿಂದ ದಿನ ಶುಭವಾಗಿರುತ್ತದೆ.

ಸೀತೆಯನ್ನು ಹುಡುಕುತ್ತಾ ಸಾಗಿದ ಆಂಜನೇಯ ಬ್ರಹ್ಮ ಮುಹೂರ್ತದಂದೇ ಅಶೋಕವನ ತಲುಪಿದ್ದ. ಅಲ್ಲಿ ವೇದ ಮಂತ್ರಗಳ ಉಚ್ಛಾರಣೆಯನ್ನು ಕೇಳಿದ್ದ, ಮತ್ತು ಯಜ್ಞಾದಿ ಕಾರ್ಯಗಳನ್ನು ನೋಡಿದ್ದನೆಂದು ವಾಲ್ಮೀಕಿ ರಾಮಾಯಣದಲ್ಲಿ ತಿಳಿಸಲಾಗಿದೆ. ರಾತ್ರಿಯ ವಿಶ್ರಾಂತಿಯ ನಂತರ ಮನಸ್ಸು ಶಾಂತ ಹಾಗೂ ಸ್ಥಿರವಾಗಿರುತ್ತದೆ. ವಾತಾವರಣದಲ್ಲಿ ಶುದ್ಧತೆಯೂ ಹೆಚ್ಚಿರುತ್ತದೆ. ಆಗ ದೇವರ ಉಪಾಸನೆ, ಧ್ಯಾನ, ಯೋಗ, ಪೂಜೆಗಳನ್ನು ಮಾಡುವುದರಿಂದ ಮನಸ್ಸು ಹಾಗೂ ಬುದ್ಧಿ ಆರೋಗ್ಯದಿಂದ ಕೂಡಿರುತ್ತವೆ. ಆಲಸ್ಯವನ್ನು ಬಿಟ್ಟು ಬ್ರಹ್ಮ ಮುಹೂರ್ತದಲ್ಲೆದ್ದು ಪುಣ್ಯ ಕರ್ಮಗಳನ್ನು ಮಾಡಿದರೆ ಶ್ರೇಯಸ್ಸು ಸಿಗುವುದರಲ್ಲಿ ಯಾವುದೇ ಅನುಮಾನವಿಲ್ಲ.

ಲೋಕಾಃ ಸಮಸ್ತಾಃ ಸುಖಿನೋ ಭವಂತು
-(ಸಂಗ್ರಹ ಮಾಹಿತಿ)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

10 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

12 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

14 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

15 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago