ಮಡಿಕೇರಿಯ ಸುದರ್ಶನ ಬಡಾವಣೆಯ ನಿವಾಸಿ ಆಶಾ ಅವರು ಅನಾರೋಗ್ಯಕ್ಕೆ ತುತ್ತಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಅವರ ಕುಟುಂಬಸ್ಥರು ಅಂಗಾಗ ದಾನ ಮಾಡುವ ಮೂಲಕ 8 ಜನರ ಜೀವ ಉಳಿಸಿದ್ದಾರೆ. ಕಣ್ಣು, ಕಿಡ್ನಿ, ಹೃದಯ, ಲಿವರ್ ದಾನದ ಮೂಲಕ ಸಾರ್ಥಕತೆ ಮೆರೆದಿದ್ದಾರೆ.
18 ವರ್ಷದಿಂದ ಬೇಬಿ ಸಿಟಿಂಗ್ ನಡೆಸುತ್ತಿದ್ದ ಪಂದ್ಯಂಡ ಆಶಾ (53) ಕಳೆದ ಶನಿವಾರ ಬೆಂಗಳೂರಿನಲ್ಲಿರುವ ಪುತ್ರಿ ಮನೆಗೆ ಹೋಗಿದ್ದರು. ಈ ವೇಳೆ ಅನಾರೋಗ್ಯಕ್ಕೆ ತುತ್ತಾದ ಆಶಾ ಅವರ ಮೆದುಳು ಪಾರ್ಶ್ವವಾಯುವಿಗೆ ಒಳಗಾಗಿತ್ತು. ತಕ್ಷಣವೇ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಹೇಳಿದರು. ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಆಶಾ ಅವರ ಪತಿ, ಮಕ್ಕಳ ಒಪ್ಪಿಗೆ ಪಡೆಯಲಾಯಿತು. ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ಅಂಗಾಂಗವನ್ನು ಬೇರ್ಪಡಿಸಿ 8 ಜನರಿಗೆ ಕಸಿ ಮಾಡಲಾಗಿದೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…