ಮಡಿಕೇರಿಯ ಸುದರ್ಶನ ಬಡಾವಣೆಯ ನಿವಾಸಿ ಆಶಾ ಅವರು ಅನಾರೋಗ್ಯಕ್ಕೆ ತುತ್ತಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಅವರ ಕುಟುಂಬಸ್ಥರು ಅಂಗಾಗ ದಾನ ಮಾಡುವ ಮೂಲಕ 8 ಜನರ ಜೀವ ಉಳಿಸಿದ್ದಾರೆ. ಕಣ್ಣು, ಕಿಡ್ನಿ, ಹೃದಯ, ಲಿವರ್ ದಾನದ ಮೂಲಕ ಸಾರ್ಥಕತೆ ಮೆರೆದಿದ್ದಾರೆ.
18 ವರ್ಷದಿಂದ ಬೇಬಿ ಸಿಟಿಂಗ್ ನಡೆಸುತ್ತಿದ್ದ ಪಂದ್ಯಂಡ ಆಶಾ (53) ಕಳೆದ ಶನಿವಾರ ಬೆಂಗಳೂರಿನಲ್ಲಿರುವ ಪುತ್ರಿ ಮನೆಗೆ ಹೋಗಿದ್ದರು. ಈ ವೇಳೆ ಅನಾರೋಗ್ಯಕ್ಕೆ ತುತ್ತಾದ ಆಶಾ ಅವರ ಮೆದುಳು ಪಾರ್ಶ್ವವಾಯುವಿಗೆ ಒಳಗಾಗಿತ್ತು. ತಕ್ಷಣವೇ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಹೇಳಿದರು. ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಆಶಾ ಅವರ ಪತಿ, ಮಕ್ಕಳ ಒಪ್ಪಿಗೆ ಪಡೆಯಲಾಯಿತು. ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ಅಂಗಾಂಗವನ್ನು ಬೇರ್ಪಡಿಸಿ 8 ಜನರಿಗೆ ಕಸಿ ಮಾಡಲಾಗಿದೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.