ಮಡಿಕೇರಿಯ ಸುದರ್ಶನ ಬಡಾವಣೆಯ ನಿವಾಸಿ ಆಶಾ ಅವರು ಅನಾರೋಗ್ಯಕ್ಕೆ ತುತ್ತಾಗಿ ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ಅವರ ಕುಟುಂಬಸ್ಥರು ಅಂಗಾಗ ದಾನ ಮಾಡುವ ಮೂಲಕ 8 ಜನರ ಜೀವ ಉಳಿಸಿದ್ದಾರೆ. ಕಣ್ಣು, ಕಿಡ್ನಿ, ಹೃದಯ, ಲಿವರ್ ದಾನದ ಮೂಲಕ ಸಾರ್ಥಕತೆ ಮೆರೆದಿದ್ದಾರೆ.
18 ವರ್ಷದಿಂದ ಬೇಬಿ ಸಿಟಿಂಗ್ ನಡೆಸುತ್ತಿದ್ದ ಪಂದ್ಯಂಡ ಆಶಾ (53) ಕಳೆದ ಶನಿವಾರ ಬೆಂಗಳೂರಿನಲ್ಲಿರುವ ಪುತ್ರಿ ಮನೆಗೆ ಹೋಗಿದ್ದರು. ಈ ವೇಳೆ ಅನಾರೋಗ್ಯಕ್ಕೆ ತುತ್ತಾದ ಆಶಾ ಅವರ ಮೆದುಳು ಪಾರ್ಶ್ವವಾಯುವಿಗೆ ಒಳಗಾಗಿತ್ತು. ತಕ್ಷಣವೇ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರ ಮೆದುಳು ನಿಷ್ಕ್ರಿಯಗೊಂಡಿರುವುದಾಗಿ ವೈದ್ಯರು ಹೇಳಿದರು. ವೈದ್ಯರ ಸಲಹೆ ಮೇರೆಗೆ ಅಂಗಾಂಗ ದಾನಕ್ಕೆ ಆಶಾ ಅವರ ಪತಿ, ಮಕ್ಕಳ ಒಪ್ಪಿಗೆ ಪಡೆಯಲಾಯಿತು. ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ಅಂಗಾಂಗವನ್ನು ಬೇರ್ಪಡಿಸಿ 8 ಜನರಿಗೆ ಕಸಿ ಮಾಡಲಾಗಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…