Advertisement
MIRROR FOCUS

ಹಲವು ದಿನಗಳ ಕುತೂಹಲಕ್ಕೆ ಬಿತ್ತು ಬ್ರೇಕ್‌ | ಕಾಂತಾರ-1ರ ಫಸ್ಟ್ ಲುಕ್ ರಿಲೀಸ್ | ಭಯಂಕರ ಲುಕ್‌ನಲ್ಲಿ ರಿಷಬ್ ಶೆಟ್ಟಿ

Share

ಕಾಂತರ(Kantara) ಚಿತ್ರ ನೋಡಿದ ಕೋಟ್ಯಾಂತರ ಅಭಿಮಾನಿಗಳಲ್ಲಿ ಮೂಡಿದ ಕಟ್ಟಕಡೆಯ ಪ್ರಶ್ನೆ ಕಾಂತಾರ 2 ಯಾವಾಗ ಬರುತ್ತದೆ ಎಂಬುದು. ಅದಕ್ಕೆ ಚಿತ್ರ ತಂಡ ಬರುತ್ತೆ ಕಾದು ನೋಡಿ ಅಂತ ಹೇಳಿತ್ತು. ಅದರಂತೆ ಅದರ ಕೆಲಸಗಳು ಆರಂಭವಾಗಿದೆ. ಕಥೆ ಬರೆಯುತ್ತಿದ್ದಾರೆ, ಪಂಜುರ್ಲಿ, ಗುಳಿಗನ ಮೊರೆ ಹೋಗಿದ್ದಾರೆ ರಿಷಭ್‌ ಎಂದೆಲ್ಲಾ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಇಂದು ಎಲ್ಲಾ ಅಭಿಮಾನಿಗಳ ಕುತೂಹಲಕ್ಕೆ ಉತ್ತರ ಕೊಟ್ಟಿದ್ದಾರೆ ರಿಷಬ್‌ ಶೆಟ್ಟಿ(Rishab Shetty).

ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸುತ್ತಿರುವ ಕಾಂತಾರ ಅಧ್ಯಾಯ 1 ಫಸ್ಟ್ ಲುಕ್ (First Look) ರಿಲಿಸ್ ಆಗಿದೆ. ಹೊಂಬಾಳೆ ಫಿಲ್ಮಸ್ ಲಾಂಛನದಲ್ಲಿ(Hombale films) ಮೂಡಿ ಬರಲಿರುವ ಚಿತ್ರದ ಫಸ್ಟ್ ಲುಕ್ ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ. ಅಘೋರಿ ಅವತಾರದಲ್ಲಿ ರಿಷಬ್ ಅಚ್ಚರಿ ಮೂಡಿಸುವಷ್ಟು ಕಂಡಿದ್ದಾರೆ. ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಬದಲಾಗಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಜಮದಗ್ನಿ ಕೊಡಲಿಯನ್ನು ಹಿಡಿದುಕೊಂಡಿರುವ ಪೋಸ್ಟರ್ ನಾನಾ ಚರ್ಚೆಗಳನ್ನು ಹುಟ್ಟು ಹಾಕುವಂತಿದೆ.

ಕಾಂತಾರ ಚಿತ್ರದ ಮೊದಲ ಅಧ್ಯಾಯಕ್ಕೆ  (Kantara Chapter 1) ಇಂದು ಮುಹೂರ್ತ ನಡೆದಿದೆ. ಉಡುಪಿ ಜಿಲ್ಲೆ (Udupi) ಕುಂದಾಪುರ ತಾಲೂಕಿನ(Kundapura) ಕುಂಭಾಸಿ ಶ್ರೀ ವಿನಾಯಕ ದೇವಸ್ಥಾನದಲ್ಲಿ(Kumbashi Shri Vinayaka Temple) ಚಿತ್ರತಂಡ ವಿಶೇಷ ಪೂಜೆಯನ್ನ ಮಾಡಿಸಲಿದೆ. ಉದ್ಭವಮೂರ್ತಿ ವಿನಾಯಕ ದೇವರಿಗೆ ಮೂಡು ಗಣಪತಿ ಸೇವೆ, ತ್ರಿಕಾಲ ಸೇವೆ, ಅನ್ನದಾನ ನಡೆಯಲಿದೆ. ದೇಗುಲಕ್ಕೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು ಬಣ್ಣ ಬಣ್ಣದ ಹೂವಿನಿಂದ ಸಿಂಗಾರ ಮಾಡಲಾಗಿದೆ.

ಸಿನಿಮಾ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿವೆ. ಸಿನಿಮಾ ಟೀಮ್ ಅಧಿಕೃತವಾಗಿ ಯಾವುದೇ ಮಾಹಿತಿ ಸಿಗದೇ ಇದ್ದರೂ, ಬಲ್ಲ ಮೂಲಗಳು ಮಾಹಿತಿಯನ್ನು ಹೊರ ಹಾಕುತ್ತಲೇ ಇವೆ. ಕಾಂತಾರ ಸಿನಿಮಾ ಮೊದಲು ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿತ್ತು. ಹಿಟ್ ಆದ ನಂತರ ಹಲವು ಭಾಷೆಗಳಲ್ಲಿ ಅದನ್ನು ಡಬ್ ಮಾಡಲಾಯಿತು. ಆದರೆ, ಕಾಂತಾರ 2 ಬರೋಬ್ಬರಿ ಏಳು ಭಾಷೆಗಳಲ್ಲಿ ನಿರ್ಮಾಣವಾಗಲಿದೆಯಂತೆ. ಹಾಗಾಗಿ ಅದ್ಧೂರಿ ಮೇಕಿಂಗ್ ಕೂಡ ಇರಲಿದೆಯಂತೆ.

ಮೊನ್ನೆಯಷ್ಟೇ ಸಿನಿಮಾ ಮುಹೂರ್ತದ (Muhurta) ಕುರಿತಂತೆ ಪಂಜುರ್ಲಿ (Panjurl) ಮತ್ತು ಗುಳಿಗ ದೈವಕ್ಕೆ ಚಿತ್ರತಂಡ ಮೊರೆ ಹೋಗಿದ್ದು, ದೈವಗಳು ಅಸ್ತು ಎಂದಿವೆ ಎನ್ನುವ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಿನಿಮಾ ತಂಡ ಮುಹೂರ್ತಕ್ಕೆ ಸರ್ವ ಸಿದ್ಧತೆ ಮಾಡಿಕೊಂಡಿದೆ. ಮತ್ತೊಂದು ಸಮಾಚಾರವೆಂದರೆ, ಈ ಸಿನಿಮಾದಲ್ಲಿ 14ನೇ ಶತಮಾನದಿಂದ ಶುರುವಾಗುವ ಕಥೆ ಕೂಡ ಇರಲಿದೆಯಂತೆ. ಈ ಕುರಿತು ಚಿತ್ರತಂಡ ಮಾಹಿತಿ ನೀಡದೇ ಇದ್ದರೂ, ಗಾಂಧಿ ನಗರದ ಗಲ್ಲಿ ಗಲ್ಲಿಗಳಲ್ಲಿ ಕಾಂತರ ಕಥೆ ಹಾಟ್ ಕೇಕ್ ತರಹ ಮಾರಾಟವಾಗುತ್ತಿದೆ.

‘ಕಾಂತಾರ‘ ಸಿನಿಮಾ ವರ್ಲ್ಡ್ ವೈಡ್ ರೀಚ್ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು. ‘ಕಾಂತಾರ‘ ಪಾರ್ಟ್ 2 ಯಾವಾಗ ಎಂದು ಕಾದು ಕುಳಿತ ಫ್ಯಾನ್ಸ್‌ಗೆ ಸಿಹಿಸುದ್ದಿ ಸಿಕ್ಕಿದೆ. ಇದೇ ನವೆಂಬರ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಹೊಂಬಾಳೆ ಸಂಸ್ಥೆ ನಿರ್ಮಾಣದ, ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2′ ಚಿತ್ರದ ಮುಹೂರ್ತ ಇಂದು ಸರಳವಾಗಿ ನಡೆದಿದೆ.

  • ಅಂತರ್ಜಾಲ ಮಾಹಿತಿ
Directed by Rishabh Shetty, the first look of Kantara Chapter 1 has been released. The first look of the film, which will be produced under the banner of Hombale Films, has created intense curiosity. Rishabh looks amazing in Aghori avatar. Rishabh has changed into another form of Shiva's avatar. The poster of Jamadagni holding a trident in one hand and an ax in the other seems to be sparking many debates.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

2 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

2 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

5 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

14 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

15 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

21 hours ago