#RuralIndia | 9 ದಿನಗಳಾಯ್ತು ಗ್ರಾಮೀಣ ಭಾಗ ಬೆಂಡೋಡಿಗೆ ಸಂಪರ್ಕವಿಲ್ಲ….! | ಯಾರಿದ್ದಾರೆ ಗ್ರಾಮೀಣ ಭಾರತದ ರಕ್ಷಕರು…!?

July 28, 2023
1:15 PM
ಸುಳ್ಯ ತಾಲೂಕಿನ ಕೊಲ್ಲಮೊಗ್ರ ಗ್ರಾಮದ ಬೆಂಡೋಡಿ ಎಂಬ ಹಳ್ಳಿಯ ಸಂಪರ್ಕ ಕಡಿತಗೊಂಡು 9 ದಿನಗಳಾದವು. ಯಾವುದೇ ಸೂಕ್ತ ವ್ಯವಸ್ಥೆ ಇದುವರೆಗೂ ಆಗಿಲ್ಲ.

ಭಾರತದ ಆತ್ಮ ಹಳ್ಳಿಗಳು. ಅಂದರೆ ಗ್ರಾಮೀಣ ಭಾರತವೇ ದೇಶದ ಶಕ್ತಿ…!. ಇಲ್ಲಿ ನೋಡಿದರೆ ಒಂದು ಮಳೆಗೆ ಸೇತುವೆ ಕೊಚ್ಚಿ ಹೋಗಿದೆ, ಹಳ್ಳಿಯ ಜನರು 9 ದಿನಗಳಿಂದ ಸಂಪರ್ಕದಿಂದ ವಂಚಿತರಾಗಿದ್ದಾರೆ. ಅಧಿಕಾರಿಗಳೆಲ್ಲಾ ಬಂದಿದ್ದಾರೆ..! ಪ್ರಯೋಜನ ಶೂನ್ಯ…!.

ಬೆಂಡೋಡಿಯಲ್ಲಿ ಕೊಚ್ಚಿ ಹೋದ ಸೇತುವೆ | Photo Credit : Locals

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಎನ್ನುವುದು ತೀರಾ ಗ್ರಾಮೀಣ ಭಾಗ. ಕಳೆದ ವರ್ಷ ಭಾರೀ ಮಳೆ ಹಾಗೂ ಜಲಸ್ಫೋಟದ ಕಾರಣದಿಂದ ಹಲವಾರು ಕಿರು ಸೇತುವೆ, ಸೇತುವೆ, ಕೃಷಿ ಭೂಮಿ ನಾಶವಾಗಿತ್ತು. ಈ ಸಂದರ್ಭ ಬೆಂಡೋಡಿ ಎನ್ನುವ ಪುಟ್ಟ ಹಳ್ಳಿಯನ್ನು ಸಂಪರ್ಕ ಮಾಡುವ ಸೇತುವೆ ಕೊಚ್ಚಿ ಹೋಗಿತ್ತು. ಈ ಪುಟ್ಟ ಹಳ್ಳಿ ಬೆಂಡೋಡಿಯು ಕೊಲ್ಲಮೊಗ್ರ ಹಾಗೂ ಹರಿಹರ ಗ್ರಾಮವನ್ನು ಸಂಪರ್ಕ ಮಾಡಲೇಬೇಕು. ಇಲ್ಲದೇ ಇದ್ದರೆ ಈ ಹಳ್ಳಿಗೆ ಯಾವ ಸಂಪರ್ಕವೂ ಇಲ್ಲವಾಗುತ್ತದೆ. ಜನರು ಪ್ರತೀ ದಿನ ಏನಾದರೂ ಕೆಲಸಕ್ಕೆ ಇಲ್ಲಿಗೆ ಬರಲೇಬೇಕು.

ಕಳೆದ ವರ್ಷ ಜಲಸ್ಫೋಟದ ಕಾರಣದಿಂದ ಹಾನಿಯಾದ ಬಳಿಕ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಉಸ್ತುವಾರಿ ಸಚಿವರು ಈ ಸೇತುವೆ ಕಾಮಗಾರಿ ತಕ್ಷಣವೇ ಮಾಡಿ ಎಂದರು. ಸ್ಥಳೀಯರು ಸೇರಿಕೊಂಡು ಸುಮಾರು 11 ಲಕ್ಷ ರೂಪಾಯಿ ವೆಚ್ಚದಲ್ಲಿ  16 ಮೋರಿಗಳನ್ನು ತಂದು ಮರಳು ಚೀಲ ಇರಿಸಿ ತಾತ್ಕಾಲಿಕ ವ್ಯವಸ್ಥೆ ಮಾಡಿದರು. ಆದರೆ ಇದಕ್ಕೆ ಇದುವರೆಗೂ ಅನುದಾನ ಸಿಕ್ಕಿಲ್ಲ…!. ಅಂತೂ ಒಟ್ಟು ಸುಮಾರು 1.20 ಲಕ್ಷ ಅನುದಾನ ಭಾಗ್ಯ ದೊರೆತದ್ದು ಬಿಟ್ಟರೆ ಬೇರೆ ಯಾವುದೇ ಹಣ ದೊರೆತಿಲ್ಲ. ಹಾಗಿದ್ದೂ ಊರಿನ ಕೆಲಸ ಎಂದು ಕಾಮಗಾರಿ ನಡೆಸಿದರೂ ಸಹಿಸಿಕೊಂಡು ಅನುದಾನದಕ್ಕಾಗಿ ಬೇಡಿಕೆ ಸಲ್ಲಿಸುತ್ತಿದ್ದರು.

ಬೆಂಡೋಡಿಯಲ್ಲಿ ಕೊಚ್ಚಿ ಹೋದ ಸೇತುವೆ

ಈ ಬಾರಿ ಮತ್ತೆ ಸುರಿದ ಭಾರೀ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ. ಸಂಪರ್ಕ ಕಡಿತಗೊಂಡಿದೆ. ಈಗಲೂ ಭೇಟಿ ನೀಡಿದ ಅಧಿಕಾರಿಗಳು, ಜನಪ್ರತಿನಿಧಿಗಳು ಕಾಮಗಾರಿ ಮಾಡಿ ಅನುದಾನ ಒದಗಿಸುವ ಎಂದರೆ ಯಾವೊಬ್ಬ ಗುತ್ತಿಗೆದಾರರೂ ಕೆಲಸಕ್ಕೆ ಬಂದಿಲ್ಲ.  ಮಳೆಹಾನಿಯಲ್ಲಿ ಮಂಜೂರು ಮಾಡುವ ಭರವಸೆ ನೀಡಿದರೂ ಕಳೆದ ವರ್ಷದ ಕಹಿ ಅನುಭವದಲ್ಲಿ ಸ್ಥಳೀಯರು ಕೆಲಸ ಮಾಡುತ್ತಿಲ್ಲ.

ಈಗ ಬೆಂಡೋಡಿ ಪ್ರದೇಶದ ಜನರು ಸಂಕಷ್ಟಲ್ಲಿದ್ದಾರೆ. ಹೊರಜಗತ್ತಿನ ಸಂಪರ್ಕ ಇಲ್ಲದೆ ಪರದಾಟ ನಡೆಸುತ್ತಿದ್ದಾರೆ.  ಈಚೆಗೆ ಸಹಾಯಕ ಕಮೀಶನರ್‌ ಭೇಟಿ ನೀಡಿದರು, ಇಲಾಖೆಯ ಇಂಜಿನಿಯರ್‌ ಭೇಟಿ ನೀಡಿದರು. ಒಟ್ಟು ಈಗಾಗಲೇ 9 ದಿನಗಳು ಕಳೆದು ಹೋದವು. ಜನರು ಮಳೆ ಇದ್ದರೆ ನಡೆದು ಬಾರಲಾಗದ ಸ್ಥಿತಿಯಲ್ಲಿದ್ದಾರೆ.

ಇದೀಗ ಜನರೂ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇಲಾಖೆ, ಸರ್ಕಾರ ಈ ಸೇತುವೆಯನ್ನು ತಾತ್ಕಾಲಿಕ ವ್ಯವಸ್ಥೆಯಾದರೂ ಮಾಡಿಕೊಡಿ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಒಂದು ವೇಳೆ ಇಲಾಖೆಗಳು, ಸರ್ಕಾರ ಮಾಡದೇ ಇದ್ದರೆ ಸ್ವಂತ ಹಣದಿಂದಲಾದರೂ ಮಾಡಲೇಬೇಕಾದ ಅನಿವಾರ್ಯತೆ ಇದೆ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಗ್ರಾಮೀಣ ಭಾರತದ ಅಭಿವೃದ್ಧಿಯ ಕಡೆಗೆ ಗಮನಹರಿಸಬೇಕಾದ ಇಲಾಖೆಗಳು, ಆಡಳಿತವು ಏಕಿಷ್ಟು ನಿರ್ಲಕ್ಷ್ಯ ಮಾಡುತ್ತಿದೆ ?

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!
May 17, 2026
11:53 AM
by: ಸಾಯಿಶೇಖರ್ ಕರಿಕಳ
ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!
May 17, 2026
7:43 AM
by: ಸಮರ್ಥ ಸಮನ್ಯು
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror