Advertisement
MIRROR FOCUS

#RuralIndia | 9 ದಿನಗಳಾಯ್ತು ಗ್ರಾಮೀಣ ಭಾಗ ಬೆಂಡೋಡಿಗೆ ಸಂಪರ್ಕವಿಲ್ಲ….! | ಯಾರಿದ್ದಾರೆ ಗ್ರಾಮೀಣ ಭಾರತದ ರಕ್ಷಕರು…!?

Share

ಭಾರತದ ಆತ್ಮ ಹಳ್ಳಿಗಳು. ಅಂದರೆ ಗ್ರಾಮೀಣ ಭಾರತವೇ ದೇಶದ ಶಕ್ತಿ…!. ಇಲ್ಲಿ ನೋಡಿದರೆ ಒಂದು ಮಳೆಗೆ ಸೇತುವೆ ಕೊಚ್ಚಿ ಹೋಗಿದೆ, ಹಳ್ಳಿಯ ಜನರು 9 ದಿನಗಳಿಂದ ಸಂಪರ್ಕದಿಂದ ವಂಚಿತರಾಗಿದ್ದಾರೆ. ಅಧಿಕಾರಿಗಳೆಲ್ಲಾ ಬಂದಿದ್ದಾರೆ..! ಪ್ರಯೋಜನ ಶೂನ್ಯ…!.

ಬೆಂಡೋಡಿಯಲ್ಲಿ ಕೊಚ್ಚಿ ಹೋದ ಸೇತುವೆ | Photo Credit : Locals

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಎನ್ನುವುದು ತೀರಾ ಗ್ರಾಮೀಣ ಭಾಗ. ಕಳೆದ ವರ್ಷ ಭಾರೀ ಮಳೆ ಹಾಗೂ ಜಲಸ್ಫೋಟದ ಕಾರಣದಿಂದ ಹಲವಾರು ಕಿರು ಸೇತುವೆ, ಸೇತುವೆ, ಕೃಷಿ ಭೂಮಿ ನಾಶವಾಗಿತ್ತು. ಈ ಸಂದರ್ಭ ಬೆಂಡೋಡಿ ಎನ್ನುವ ಪುಟ್ಟ ಹಳ್ಳಿಯನ್ನು ಸಂಪರ್ಕ ಮಾಡುವ ಸೇತುವೆ ಕೊಚ್ಚಿ ಹೋಗಿತ್ತು. ಈ ಪುಟ್ಟ ಹಳ್ಳಿ ಬೆಂಡೋಡಿಯು ಕೊಲ್ಲಮೊಗ್ರ ಹಾಗೂ ಹರಿಹರ ಗ್ರಾಮವನ್ನು ಸಂಪರ್ಕ ಮಾಡಲೇಬೇಕು. ಇಲ್ಲದೇ ಇದ್ದರೆ ಈ ಹಳ್ಳಿಗೆ ಯಾವ ಸಂಪರ್ಕವೂ ಇಲ್ಲವಾಗುತ್ತದೆ. ಜನರು ಪ್ರತೀ ದಿನ ಏನಾದರೂ ಕೆಲಸಕ್ಕೆ ಇಲ್ಲಿಗೆ ಬರಲೇಬೇಕು.

ಕಳೆದ ವರ್ಷ ಜಲಸ್ಫೋಟದ ಕಾರಣದಿಂದ ಹಾನಿಯಾದ ಬಳಿಕ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಉಸ್ತುವಾರಿ ಸಚಿವರು ಈ ಸೇತುವೆ ಕಾಮಗಾರಿ ತಕ್ಷಣವೇ ಮಾಡಿ ಎಂದರು. ಸ್ಥಳೀಯರು ಸೇರಿಕೊಂಡು ಸುಮಾರು 11 ಲಕ್ಷ ರೂಪಾಯಿ ವೆಚ್ಚದಲ್ಲಿ  16 ಮೋರಿಗಳನ್ನು ತಂದು ಮರಳು ಚೀಲ ಇರಿಸಿ ತಾತ್ಕಾಲಿಕ ವ್ಯವಸ್ಥೆ ಮಾಡಿದರು. ಆದರೆ ಇದಕ್ಕೆ ಇದುವರೆಗೂ ಅನುದಾನ ಸಿಕ್ಕಿಲ್ಲ…!. ಅಂತೂ ಒಟ್ಟು ಸುಮಾರು 1.20 ಲಕ್ಷ ಅನುದಾನ ಭಾಗ್ಯ ದೊರೆತದ್ದು ಬಿಟ್ಟರೆ ಬೇರೆ ಯಾವುದೇ ಹಣ ದೊರೆತಿಲ್ಲ. ಹಾಗಿದ್ದೂ ಊರಿನ ಕೆಲಸ ಎಂದು ಕಾಮಗಾರಿ ನಡೆಸಿದರೂ ಸಹಿಸಿಕೊಂಡು ಅನುದಾನದಕ್ಕಾಗಿ ಬೇಡಿಕೆ ಸಲ್ಲಿಸುತ್ತಿದ್ದರು.

ಬೆಂಡೋಡಿಯಲ್ಲಿ ಕೊಚ್ಚಿ ಹೋದ ಸೇತುವೆ

ಈ ಬಾರಿ ಮತ್ತೆ ಸುರಿದ ಭಾರೀ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ. ಸಂಪರ್ಕ ಕಡಿತಗೊಂಡಿದೆ. ಈಗಲೂ ಭೇಟಿ ನೀಡಿದ ಅಧಿಕಾರಿಗಳು, ಜನಪ್ರತಿನಿಧಿಗಳು ಕಾಮಗಾರಿ ಮಾಡಿ ಅನುದಾನ ಒದಗಿಸುವ ಎಂದರೆ ಯಾವೊಬ್ಬ ಗುತ್ತಿಗೆದಾರರೂ ಕೆಲಸಕ್ಕೆ ಬಂದಿಲ್ಲ.  ಮಳೆಹಾನಿಯಲ್ಲಿ ಮಂಜೂರು ಮಾಡುವ ಭರವಸೆ ನೀಡಿದರೂ ಕಳೆದ ವರ್ಷದ ಕಹಿ ಅನುಭವದಲ್ಲಿ ಸ್ಥಳೀಯರು ಕೆಲಸ ಮಾಡುತ್ತಿಲ್ಲ.

ಈಗ ಬೆಂಡೋಡಿ ಪ್ರದೇಶದ ಜನರು ಸಂಕಷ್ಟಲ್ಲಿದ್ದಾರೆ. ಹೊರಜಗತ್ತಿನ ಸಂಪರ್ಕ ಇಲ್ಲದೆ ಪರದಾಟ ನಡೆಸುತ್ತಿದ್ದಾರೆ.  ಈಚೆಗೆ ಸಹಾಯಕ ಕಮೀಶನರ್‌ ಭೇಟಿ ನೀಡಿದರು, ಇಲಾಖೆಯ ಇಂಜಿನಿಯರ್‌ ಭೇಟಿ ನೀಡಿದರು. ಒಟ್ಟು ಈಗಾಗಲೇ 9 ದಿನಗಳು ಕಳೆದು ಹೋದವು. ಜನರು ಮಳೆ ಇದ್ದರೆ ನಡೆದು ಬಾರಲಾಗದ ಸ್ಥಿತಿಯಲ್ಲಿದ್ದಾರೆ.

ಇದೀಗ ಜನರೂ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇಲಾಖೆ, ಸರ್ಕಾರ ಈ ಸೇತುವೆಯನ್ನು ತಾತ್ಕಾಲಿಕ ವ್ಯವಸ್ಥೆಯಾದರೂ ಮಾಡಿಕೊಡಿ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಒಂದು ವೇಳೆ ಇಲಾಖೆಗಳು, ಸರ್ಕಾರ ಮಾಡದೇ ಇದ್ದರೆ ಸ್ವಂತ ಹಣದಿಂದಲಾದರೂ ಮಾಡಲೇಬೇಕಾದ ಅನಿವಾರ್ಯತೆ ಇದೆ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಗ್ರಾಮೀಣ ಭಾರತದ ಅಭಿವೃದ್ಧಿಯ ಕಡೆಗೆ ಗಮನಹರಿಸಬೇಕಾದ ಇಲಾಖೆಗಳು, ಆಡಳಿತವು ಏಕಿಷ್ಟು ನಿರ್ಲಕ್ಷ್ಯ ಮಾಡುತ್ತಿದೆ ?

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

3 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

3 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

12 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

13 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

13 hours ago

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

22 hours ago