Advertisement
MIRROR FOCUS

#RuralIndia | 9 ದಿನಗಳಾಯ್ತು ಗ್ರಾಮೀಣ ಭಾಗ ಬೆಂಡೋಡಿಗೆ ಸಂಪರ್ಕವಿಲ್ಲ….! | ಯಾರಿದ್ದಾರೆ ಗ್ರಾಮೀಣ ಭಾರತದ ರಕ್ಷಕರು…!?

Share

ಭಾರತದ ಆತ್ಮ ಹಳ್ಳಿಗಳು. ಅಂದರೆ ಗ್ರಾಮೀಣ ಭಾರತವೇ ದೇಶದ ಶಕ್ತಿ…!. ಇಲ್ಲಿ ನೋಡಿದರೆ ಒಂದು ಮಳೆಗೆ ಸೇತುವೆ ಕೊಚ್ಚಿ ಹೋಗಿದೆ, ಹಳ್ಳಿಯ ಜನರು 9 ದಿನಗಳಿಂದ ಸಂಪರ್ಕದಿಂದ ವಂಚಿತರಾಗಿದ್ದಾರೆ. ಅಧಿಕಾರಿಗಳೆಲ್ಲಾ ಬಂದಿದ್ದಾರೆ..! ಪ್ರಯೋಜನ ಶೂನ್ಯ…!.

ಬೆಂಡೋಡಿಯಲ್ಲಿ ಕೊಚ್ಚಿ ಹೋದ ಸೇತುವೆ | Photo Credit : Locals

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಎನ್ನುವುದು ತೀರಾ ಗ್ರಾಮೀಣ ಭಾಗ. ಕಳೆದ ವರ್ಷ ಭಾರೀ ಮಳೆ ಹಾಗೂ ಜಲಸ್ಫೋಟದ ಕಾರಣದಿಂದ ಹಲವಾರು ಕಿರು ಸೇತುವೆ, ಸೇತುವೆ, ಕೃಷಿ ಭೂಮಿ ನಾಶವಾಗಿತ್ತು. ಈ ಸಂದರ್ಭ ಬೆಂಡೋಡಿ ಎನ್ನುವ ಪುಟ್ಟ ಹಳ್ಳಿಯನ್ನು ಸಂಪರ್ಕ ಮಾಡುವ ಸೇತುವೆ ಕೊಚ್ಚಿ ಹೋಗಿತ್ತು. ಈ ಪುಟ್ಟ ಹಳ್ಳಿ ಬೆಂಡೋಡಿಯು ಕೊಲ್ಲಮೊಗ್ರ ಹಾಗೂ ಹರಿಹರ ಗ್ರಾಮವನ್ನು ಸಂಪರ್ಕ ಮಾಡಲೇಬೇಕು. ಇಲ್ಲದೇ ಇದ್ದರೆ ಈ ಹಳ್ಳಿಗೆ ಯಾವ ಸಂಪರ್ಕವೂ ಇಲ್ಲವಾಗುತ್ತದೆ. ಜನರು ಪ್ರತೀ ದಿನ ಏನಾದರೂ ಕೆಲಸಕ್ಕೆ ಇಲ್ಲಿಗೆ ಬರಲೇಬೇಕು.

ಕಳೆದ ವರ್ಷ ಜಲಸ್ಫೋಟದ ಕಾರಣದಿಂದ ಹಾನಿಯಾದ ಬಳಿಕ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಉಸ್ತುವಾರಿ ಸಚಿವರು ಈ ಸೇತುವೆ ಕಾಮಗಾರಿ ತಕ್ಷಣವೇ ಮಾಡಿ ಎಂದರು. ಸ್ಥಳೀಯರು ಸೇರಿಕೊಂಡು ಸುಮಾರು 11 ಲಕ್ಷ ರೂಪಾಯಿ ವೆಚ್ಚದಲ್ಲಿ  16 ಮೋರಿಗಳನ್ನು ತಂದು ಮರಳು ಚೀಲ ಇರಿಸಿ ತಾತ್ಕಾಲಿಕ ವ್ಯವಸ್ಥೆ ಮಾಡಿದರು. ಆದರೆ ಇದಕ್ಕೆ ಇದುವರೆಗೂ ಅನುದಾನ ಸಿಕ್ಕಿಲ್ಲ…!. ಅಂತೂ ಒಟ್ಟು ಸುಮಾರು 1.20 ಲಕ್ಷ ಅನುದಾನ ಭಾಗ್ಯ ದೊರೆತದ್ದು ಬಿಟ್ಟರೆ ಬೇರೆ ಯಾವುದೇ ಹಣ ದೊರೆತಿಲ್ಲ. ಹಾಗಿದ್ದೂ ಊರಿನ ಕೆಲಸ ಎಂದು ಕಾಮಗಾರಿ ನಡೆಸಿದರೂ ಸಹಿಸಿಕೊಂಡು ಅನುದಾನದಕ್ಕಾಗಿ ಬೇಡಿಕೆ ಸಲ್ಲಿಸುತ್ತಿದ್ದರು.

ಬೆಂಡೋಡಿಯಲ್ಲಿ ಕೊಚ್ಚಿ ಹೋದ ಸೇತುವೆ

ಈ ಬಾರಿ ಮತ್ತೆ ಸುರಿದ ಭಾರೀ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ. ಸಂಪರ್ಕ ಕಡಿತಗೊಂಡಿದೆ. ಈಗಲೂ ಭೇಟಿ ನೀಡಿದ ಅಧಿಕಾರಿಗಳು, ಜನಪ್ರತಿನಿಧಿಗಳು ಕಾಮಗಾರಿ ಮಾಡಿ ಅನುದಾನ ಒದಗಿಸುವ ಎಂದರೆ ಯಾವೊಬ್ಬ ಗುತ್ತಿಗೆದಾರರೂ ಕೆಲಸಕ್ಕೆ ಬಂದಿಲ್ಲ.  ಮಳೆಹಾನಿಯಲ್ಲಿ ಮಂಜೂರು ಮಾಡುವ ಭರವಸೆ ನೀಡಿದರೂ ಕಳೆದ ವರ್ಷದ ಕಹಿ ಅನುಭವದಲ್ಲಿ ಸ್ಥಳೀಯರು ಕೆಲಸ ಮಾಡುತ್ತಿಲ್ಲ.

ಈಗ ಬೆಂಡೋಡಿ ಪ್ರದೇಶದ ಜನರು ಸಂಕಷ್ಟಲ್ಲಿದ್ದಾರೆ. ಹೊರಜಗತ್ತಿನ ಸಂಪರ್ಕ ಇಲ್ಲದೆ ಪರದಾಟ ನಡೆಸುತ್ತಿದ್ದಾರೆ.  ಈಚೆಗೆ ಸಹಾಯಕ ಕಮೀಶನರ್‌ ಭೇಟಿ ನೀಡಿದರು, ಇಲಾಖೆಯ ಇಂಜಿನಿಯರ್‌ ಭೇಟಿ ನೀಡಿದರು. ಒಟ್ಟು ಈಗಾಗಲೇ 9 ದಿನಗಳು ಕಳೆದು ಹೋದವು. ಜನರು ಮಳೆ ಇದ್ದರೆ ನಡೆದು ಬಾರಲಾಗದ ಸ್ಥಿತಿಯಲ್ಲಿದ್ದಾರೆ.

ಇದೀಗ ಜನರೂ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇಲಾಖೆ, ಸರ್ಕಾರ ಈ ಸೇತುವೆಯನ್ನು ತಾತ್ಕಾಲಿಕ ವ್ಯವಸ್ಥೆಯಾದರೂ ಮಾಡಿಕೊಡಿ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಒಂದು ವೇಳೆ ಇಲಾಖೆಗಳು, ಸರ್ಕಾರ ಮಾಡದೇ ಇದ್ದರೆ ಸ್ವಂತ ಹಣದಿಂದಲಾದರೂ ಮಾಡಲೇಬೇಕಾದ ಅನಿವಾರ್ಯತೆ ಇದೆ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಗ್ರಾಮೀಣ ಭಾರತದ ಅಭಿವೃದ್ಧಿಯ ಕಡೆಗೆ ಗಮನಹರಿಸಬೇಕಾದ ಇಲಾಖೆಗಳು, ಆಡಳಿತವು ಏಕಿಷ್ಟು ನಿರ್ಲಕ್ಷ್ಯ ಮಾಡುತ್ತಿದೆ ?

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

12 hours ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

12 hours ago

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

1 day ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

2 days ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

2 days ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago