Advertisement
MIRROR FOCUS

#RuralIndia | 9 ದಿನಗಳಾಯ್ತು ಗ್ರಾಮೀಣ ಭಾಗ ಬೆಂಡೋಡಿಗೆ ಸಂಪರ್ಕವಿಲ್ಲ….! | ಯಾರಿದ್ದಾರೆ ಗ್ರಾಮೀಣ ಭಾರತದ ರಕ್ಷಕರು…!?

Share

ಭಾರತದ ಆತ್ಮ ಹಳ್ಳಿಗಳು. ಅಂದರೆ ಗ್ರಾಮೀಣ ಭಾರತವೇ ದೇಶದ ಶಕ್ತಿ…!. ಇಲ್ಲಿ ನೋಡಿದರೆ ಒಂದು ಮಳೆಗೆ ಸೇತುವೆ ಕೊಚ್ಚಿ ಹೋಗಿದೆ, ಹಳ್ಳಿಯ ಜನರು 9 ದಿನಗಳಿಂದ ಸಂಪರ್ಕದಿಂದ ವಂಚಿತರಾಗಿದ್ದಾರೆ. ಅಧಿಕಾರಿಗಳೆಲ್ಲಾ ಬಂದಿದ್ದಾರೆ..! ಪ್ರಯೋಜನ ಶೂನ್ಯ…!.

Advertisement
Advertisement
ಬೆಂಡೋಡಿಯಲ್ಲಿ ಕೊಚ್ಚಿ ಹೋದ ಸೇತುವೆ | Photo Credit : Locals

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಎನ್ನುವುದು ತೀರಾ ಗ್ರಾಮೀಣ ಭಾಗ. ಕಳೆದ ವರ್ಷ ಭಾರೀ ಮಳೆ ಹಾಗೂ ಜಲಸ್ಫೋಟದ ಕಾರಣದಿಂದ ಹಲವಾರು ಕಿರು ಸೇತುವೆ, ಸೇತುವೆ, ಕೃಷಿ ಭೂಮಿ ನಾಶವಾಗಿತ್ತು. ಈ ಸಂದರ್ಭ ಬೆಂಡೋಡಿ ಎನ್ನುವ ಪುಟ್ಟ ಹಳ್ಳಿಯನ್ನು ಸಂಪರ್ಕ ಮಾಡುವ ಸೇತುವೆ ಕೊಚ್ಚಿ ಹೋಗಿತ್ತು. ಈ ಪುಟ್ಟ ಹಳ್ಳಿ ಬೆಂಡೋಡಿಯು ಕೊಲ್ಲಮೊಗ್ರ ಹಾಗೂ ಹರಿಹರ ಗ್ರಾಮವನ್ನು ಸಂಪರ್ಕ ಮಾಡಲೇಬೇಕು. ಇಲ್ಲದೇ ಇದ್ದರೆ ಈ ಹಳ್ಳಿಗೆ ಯಾವ ಸಂಪರ್ಕವೂ ಇಲ್ಲವಾಗುತ್ತದೆ. ಜನರು ಪ್ರತೀ ದಿನ ಏನಾದರೂ ಕೆಲಸಕ್ಕೆ ಇಲ್ಲಿಗೆ ಬರಲೇಬೇಕು.

Advertisement

ಕಳೆದ ವರ್ಷ ಜಲಸ್ಫೋಟದ ಕಾರಣದಿಂದ ಹಾನಿಯಾದ ಬಳಿಕ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿದಾಗ ಉಸ್ತುವಾರಿ ಸಚಿವರು ಈ ಸೇತುವೆ ಕಾಮಗಾರಿ ತಕ್ಷಣವೇ ಮಾಡಿ ಎಂದರು. ಸ್ಥಳೀಯರು ಸೇರಿಕೊಂಡು ಸುಮಾರು 11 ಲಕ್ಷ ರೂಪಾಯಿ ವೆಚ್ಚದಲ್ಲಿ  16 ಮೋರಿಗಳನ್ನು ತಂದು ಮರಳು ಚೀಲ ಇರಿಸಿ ತಾತ್ಕಾಲಿಕ ವ್ಯವಸ್ಥೆ ಮಾಡಿದರು. ಆದರೆ ಇದಕ್ಕೆ ಇದುವರೆಗೂ ಅನುದಾನ ಸಿಕ್ಕಿಲ್ಲ…!. ಅಂತೂ ಒಟ್ಟು ಸುಮಾರು 1.20 ಲಕ್ಷ ಅನುದಾನ ಭಾಗ್ಯ ದೊರೆತದ್ದು ಬಿಟ್ಟರೆ ಬೇರೆ ಯಾವುದೇ ಹಣ ದೊರೆತಿಲ್ಲ. ಹಾಗಿದ್ದೂ ಊರಿನ ಕೆಲಸ ಎಂದು ಕಾಮಗಾರಿ ನಡೆಸಿದರೂ ಸಹಿಸಿಕೊಂಡು ಅನುದಾನದಕ್ಕಾಗಿ ಬೇಡಿಕೆ ಸಲ್ಲಿಸುತ್ತಿದ್ದರು.

Advertisement
ಬೆಂಡೋಡಿಯಲ್ಲಿ ಕೊಚ್ಚಿ ಹೋದ ಸೇತುವೆ

ಈ ಬಾರಿ ಮತ್ತೆ ಸುರಿದ ಭಾರೀ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ. ಸಂಪರ್ಕ ಕಡಿತಗೊಂಡಿದೆ. ಈಗಲೂ ಭೇಟಿ ನೀಡಿದ ಅಧಿಕಾರಿಗಳು, ಜನಪ್ರತಿನಿಧಿಗಳು ಕಾಮಗಾರಿ ಮಾಡಿ ಅನುದಾನ ಒದಗಿಸುವ ಎಂದರೆ ಯಾವೊಬ್ಬ ಗುತ್ತಿಗೆದಾರರೂ ಕೆಲಸಕ್ಕೆ ಬಂದಿಲ್ಲ.  ಮಳೆಹಾನಿಯಲ್ಲಿ ಮಂಜೂರು ಮಾಡುವ ಭರವಸೆ ನೀಡಿದರೂ ಕಳೆದ ವರ್ಷದ ಕಹಿ ಅನುಭವದಲ್ಲಿ ಸ್ಥಳೀಯರು ಕೆಲಸ ಮಾಡುತ್ತಿಲ್ಲ.

ಈಗ ಬೆಂಡೋಡಿ ಪ್ರದೇಶದ ಜನರು ಸಂಕಷ್ಟಲ್ಲಿದ್ದಾರೆ. ಹೊರಜಗತ್ತಿನ ಸಂಪರ್ಕ ಇಲ್ಲದೆ ಪರದಾಟ ನಡೆಸುತ್ತಿದ್ದಾರೆ.  ಈಚೆಗೆ ಸಹಾಯಕ ಕಮೀಶನರ್‌ ಭೇಟಿ ನೀಡಿದರು, ಇಲಾಖೆಯ ಇಂಜಿನಿಯರ್‌ ಭೇಟಿ ನೀಡಿದರು. ಒಟ್ಟು ಈಗಾಗಲೇ 9 ದಿನಗಳು ಕಳೆದು ಹೋದವು. ಜನರು ಮಳೆ ಇದ್ದರೆ ನಡೆದು ಬಾರಲಾಗದ ಸ್ಥಿತಿಯಲ್ಲಿದ್ದಾರೆ.

Advertisement

ಇದೀಗ ಜನರೂ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಇಲಾಖೆ, ಸರ್ಕಾರ ಈ ಸೇತುವೆಯನ್ನು ತಾತ್ಕಾಲಿಕ ವ್ಯವಸ್ಥೆಯಾದರೂ ಮಾಡಿಕೊಡಿ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಒಂದು ವೇಳೆ ಇಲಾಖೆಗಳು, ಸರ್ಕಾರ ಮಾಡದೇ ಇದ್ದರೆ ಸ್ವಂತ ಹಣದಿಂದಲಾದರೂ ಮಾಡಲೇಬೇಕಾದ ಅನಿವಾರ್ಯತೆ ಇದೆ ಎಂದು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಗ್ರಾಮೀಣ ಭಾರತದ ಅಭಿವೃದ್ಧಿಯ ಕಡೆಗೆ ಗಮನಹರಿಸಬೇಕಾದ ಇಲಾಖೆಗಳು, ಆಡಳಿತವು ಏಕಿಷ್ಟು ನಿರ್ಲಕ್ಷ್ಯ ಮಾಡುತ್ತಿದೆ ?

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ವರ್ಷಗಳ ಹಿಂದೆ ಹೋದ ದೃಷ್ಟಿ ವಾಪಸು ಬಂತು

ಚಿಕ್ಕ ವಯಸ್ಸಿನ ಕುಕನೂರಿನ ಶಿವಾನಂದ ಕ್ರಿಕೆಟ್ ಫೀಲ್ಡಿಂಗ್ ಮಾಡುತ್ತಿದ್ದ. ಚಂಡು ಕಳ್ಳಿಯ ಪೊದೆಯಲ್ಲಿ…

13 hours ago

ಗೇರುಹಣ್ಣಿನ ಮೌಲ್ಯವರ್ಧನೆ : ಕೇರಳ ಕೃಷಿ ವಿವಿ ಸಾಧನೆ

ಬಹುತೇಕ ಕೊಳೆತು ಮಣ್ಣುಪಾಲಾಗುವ ಗೇರುಹಣ್ಣಿಗೂ(Cashew fruit)  ಮೌಲ್ಯವಿದೆ. ಆದರೆ ಮೌಲ್ಯವರ್ಧನೆ(Value addition) ಮಾಡಿದಾಗ ಮಾತ್ರ!…

14 hours ago

ನಿಮಗೆ ಗೊತ್ತೇ ???? ಬಿದಿರಿನ ಬಗೆಗಿನ ಕೆಲವು ಆಸಕ್ತಿದಾಯಕ ಸಂಗತಿಗಳು

ಬಿದಿರು(Bamboo) ನಾನಾರಿಗಲ್ಲದವಳು ಎಂಬ ಸಂತ ಶಿಶುನಾಳ ಶರೀಪರ(Shishunala Sharifa) ಹಾಡನ್ನು ನೀವು ಕೇಳಿರುತ್ತೀರಿ.…

15 hours ago

ಮೊಬೈಲ್ ಫೋನ್ ಅನ್ನು ನಿಮ್ಮ ದಿಂಬಿನ ಪಕ್ಕದಲ್ಲಿ ಇಟ್ಟುಕೊಂಡು ಮಲಗತ್ತೀರಾ..? ಈ ಸಮಸ್ಯೆಗಳನ್ನು ಎದುರಿಸಲು ಸಿದ್ಧರಾಗಿ…..!

ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…

15 hours ago

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ : ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ : ಗ್ರಾಹಕರಿಗೆ ಜೋರಾದ ಖಾರದ ಅನುಭವ

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…

15 hours ago

Karnataka Weather |11-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

18 hours ago