Advertisement
MIRROR FOCUS

ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿ

Share

ಶಿರಾಡಿ ಘಾಟಿ ಹೆದ್ದಾರಿ ಅಭಿವೃದ್ಧಿ, ಮಂಗಳೂರು ನಗರಕ್ಕೆ ಹೊರ ವರ್ತುಲ ರಸ್ತೆ ನಿರ್ಮಾಣ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದಕ್ಕೆ ಬಾಕಿಯಿರುವ ವಿಸ್ತೃತ ಯೋಜನಾ ವರದಿ(ಡಿಪಿಆರ್) ತಯಾರಿ ಪ್ರಕ್ರಿಯೆಗಳನ್ನು ಚುರುಕುಗೊಳಿಸಿ ಆದಷ್ಟು ಬೇಗ ಅವುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಒತ್ತಾಯಿಸಿದ್ದಾರೆ.

ದ ಕ ಜಿಲ್ಲೆಗೆ ಸಂಬಂಧಿಸಿದಂತೆ ಸಚಿವರೊಂದಿಗೆ ನಡೆದ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡ ಕ್ಯಾ. ಚೌಟ ಅವರು, ಹಲವು ಅಭಿವೃದ್ಧಿ ಯೋಜನೆಗಳ ಡಿಪಿಆರ್ ತಯಾರಿ ಬಾಕಿ ವಿಚಾರ ಹಾಗೂ ಹೊಸ ಪ್ರಸ್ತಾಪಿತ ಯೋಜನೆಗಳ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಕೋರಿದ್ದಾರೆ.

ಪಶ್ಚಿಮ ಘಟ್ಟದ ವ್ಯಾಪ್ತಿಯಲ್ಲಿ ಬರುವ ಶಿರಾಡಿ ಘಾಟಿಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ ಇನ್ನು ಕೂಡ ಡಿಪಿಆರ್ ಸಿದ್ಧಗೊಂಡಿಲ್ಲ. ಅಲ್ಲದೆ ಈ ರಸ್ತೆ ಅಗಲೀಕರಣಕ್ಕೆ ಅರಣ್ಯ ಇಲಾಖೆಯ ಒಪ್ಪಿಗೆ ಪಡೆಯುವುದು ಕೂಡ ಬಾಕಿಯಿದೆ. ಹೀಗಾಗಿ, ಶಿರಾಡಿ ಫಾಟಿ ರಸ್ತೆ ಅಭಿವೃದ್ಧಿಯ ಸಾಧ್ಯತೆಗಳ ಬಗ್ಗೆ ಆದಷ್ಟು ಬೇಗ ಯೋಜನಾ ವರದಿ ಸಿದ್ಧಪಡಿಸಬೇಕು. ಈ ಪ್ರಸ್ತಾವಿತ ಯೋಜನೆ ಬಗ್ಗೆ ನಾನು ಹೆದ್ದಾರಿ ಇಲಾಖೆ ಜತೆಗೆ ನಿರಂತರ ಸಂಪರ್ಕದಲ್ಲಿದ್ದು, ಯೋಜನಾ ವರದಿ ಸಿದ್ಧಪಡಿಸುವುದು ವಿಳಂಬವಾದಷ್ಟು ಈ ಹೆದ್ದಾರಿ ಅಭಿವೃದ್ಧಿ ಯೋಜನೆ ಜಾರಿಗೂ ಹಿನ್ನಡೆಯಾಗುತ್ತದೆ. ಅಲ್ಲದೆ, ಈ ಯೋಜನೆಗೆ ಅರಣ್ಯ ಇಲಾಖೆಯಿಂದ ಒಪ್ಪಿಗೆ ಪಡೆಯುವುದಕ್ಕೂ ತಮ್ಮ ಪೂರ್ಣ ಸಹಕಾರ ಹಾಗೂ ಮಧ್ಯಪ್ರವೇಶದ ಅಗತ್ಯವಿದೆ. ಆ ಮೂಲಕ ಈ ಹೆದ್ದಾರಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವುದಕ್ಕೆ ಆದಷ್ಟು ಬೇಗ ಪೂರಕ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

 

Brijesh Chauta’s appeal to expedite the DPR process for the Shiradi Ghat highway development highlights the critical need for infrastructure improvements along the Mangalore-Bangalore route. The potential benefits of this project are far-reaching, promising to enhance regional connectivity and economic growth. As stakeholders work collaboratively to overcome existing challenges, the successful execution of this project could set a precedent for future infrastructure endeavors in the region.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

8 minutes ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

1 hour ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

11 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

11 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

11 hours ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

16 hours ago