ಸುದ್ದಿಗಳು

#RamKathaCambridge | ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ “ರಾಮಕಥೆ” | ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ ನಡೆದ ರಾಮಕಥಾ  ಕಾರ್ಯಕ್ರಮದಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭಾಗವಹಿಸಿದರು. ನಾನು ಪ್ರಧಾನಿಯಾಗಿ ಬಂದಿಲ್ಲ, ಹಿಂದುವಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಹೇಳಿದರು.

Advertisement
Advertisement

ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಆಧ್ಯಾತ್ಮಿಕ ಬೋಧಕ ಮೊರಾರಿ ಬಾಪು ಅವರಿಂದ ರಾಮಕಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಮಕಥೆಯಲ್ಲಿ ಪಾಲ್ಗೊಂಡ ಬ್ರಿಟನ್ ಪ್ರಧಾನಿ ರಿಷಿ ಸುನಕ್, ಕೆಲ ಸಾಧಕರು ಅದೆಷ್ಟೇ ದೊಡ್ಡ ಸ್ಥಾನಕ್ಕೇ ಏರಿದರು ತಮ್ಮ ಧರ್ಮಕ್ಕೆ ಗೌರಯುತವಾಗಿ ನಡೆದುಕೊಳ್ಳುವುದನ್ನು ಮರೆಯುವುದಿಲ್ಲ. ಹಾಗೆ ನಾನು ಪ್ರಧಾನಿಯಾಗಿ ಅಲ್ಲ, ಓರ್ವ ಹಿಂದೂವಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ  ಎಂದು  ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯಂದೇ ರಾಮಕಥಾ ಕಾರ್ಯಕ್ರಮ ನಡೆಯಿತು. ನನ್ನ ನಂಬಿಕೆ ವೈಯಕ್ತಿಕವಾದದ್ದು, ಪ್ರಧಾನಿಯಾಗಿರುವುದು ದೊಡ್ಡ ಗೌರವವಾದರೂ ಈ ಹುದ್ದೆಯನ್ನು ನಿಭಾಯಿಸುವುದು ಅಷ್ಟು ಸುಲಭವಲ್ಲ. ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಕಠಿಣ ಆಯ್ಕೆಗಳನ್ನು ಮಾಡಬೇಕು. ಜನರಲ್ಲಿ ಆತ್ಮವಿಶ್ವಾಸವನ್ನು ತುಂಬಬೇಕು. ನನ್ನ ಧರ್ಮವು ನನಗೆ ಈ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿಯನ್ನು ನೀಡುತ್ತದೆ. ಯಾವುದೇ ಕೆಲಸವನ್ನು ಮಾಡುವ ಮೊದಲು ಸಮಸ್ಯೆಗಳನ್ನು ಆಲಿಸಿ, ಸಮಾಧಾನದಿಂದ ನಿರ್ಧಾರ ತೆಗೆದುಕೊಳ್ಳುವಂತೆ ನನ್ನ ಧರ್ಮವು ಹೇಳುತ್ತದೆ ಎಂದು ರಿಷಿ ಸುನಕ್‌ ಹೇಳಿದರು. ಶ್ರೀರಾಮನು ಯಾವಾಗಲೂ ತನಗೆ ಸ್ಪೂರ್ತಿದಾಯಕ ವ್ಯಕ್ತಿಯಾಗಿರುತ್ತಾನೆ. ರಾಮನು ಯಾವಾಗಲೂ ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ನಮ್ರತೆಯಿಂದ ಆಡಳಿತ ಮಾಡಲು ಮತ್ತು ನಿಸ್ವಾರ್ಥವಾಗಿ ಕೆಲಸ ಮಾಡಲು ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾನೆ, ಎಂದು ಅವರು ಹೇಳಿದರು.

ಮೊರಾರಿ ಬಾಪು ಅವರ ಆಸನದ ಹಿಂದೆ ಹನುಮಂತನ ವಿಗ್ರಹವನ್ನು ಹೇಗೆ ಇರಿಸಲಾಗಿದೆಯೋ ಅದೇ ರೀತಿ ಗಣೇಶನ ವಿಗ್ರಹವನ್ನು ನನ್ನ ಕಚೇರಿಯ ಮೇಜಿನ ಮೇಲೆ ಇರಿಸಲಾಗಿದೆ ಎಂದು ಬ್ರಿಟನ್ ಪ್ರಧಾನಿ ಸುನಕ್ ಹೇಳಿದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಅರಿವಿನ ಹರಿವಿನ ಪ್ರಸಂಗ ‘ಪನಸೋಪಾಖ್ಯಾನ’ | ಪರಿಸರ ಉಳಿಸುವ ಸಂದೇಶ ಸಾರಿದ ತಾಳಮದ್ದಳೆ |

 ‘ಪನಸೋಪಾಖ್ಯಾನ’ ಪ್ರಸಂಗವು ತಾಳಮದ್ದಳೆ ರೂಪದಲ್ಲಿ ಪ್ರಸ್ತುತವಾಯಿತು. ಇದು ಕಾಲ್ಪನಿಕ ಕಥಾಭಾಗವನ್ನು ಹೊಂದಿರುವ ಪ್ರಸಂಗ.…

4 hours ago

ಹವಾಮಾನ ವರದಿ | 14-06-2025 | ಜೂನ್.‌18 ರಿಂದ ಮಳೆಯ ಪ್ರಮಾಣ ಕಡಿಮೆ ನಿರೀಕ್ಷೆ

ಜೂನ್ 18 ರಿಂದ ಮುಂಗಾರು ಮತ್ತೆ ದುರ್ಬಲಗೊಂಡು ಮಳೆ ಕಡಿಮೆಯಾಗುವ ಸೂಚನೆಗಳಿವೆ.

5 hours ago

ಅಡಿಕೆ ಜಗಿಯುವ ಪ್ರವೃತ್ತಿ ಎಲ್ಲೆಲ್ಲಿ ಇದೆ ?

ತಾಂಬೂಲ ಸೇವನೆಗೆ ಅದರದ್ದೇ ಆದ ಇತಿಹಾಸ ಇದೆ. ಜಗತ್ತಿನ ಅಭಿವೃದ್ಧಿ ಹೊಂದಿದ ಮತ್ತು…

6 hours ago

ಮಕ್ಕಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪರಿಚಯ ಮೂಡಿಸಬೇಕಿದೆ

ಮಕ್ಕಳಲ್ಲಿ ಬೌದ್ಧಿಕ ಸಾಮರ್ಥ್ಯ ಗಣಿತ ಹಾಗೂ ಭಾಷಾ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಕಲಿಕಾ ಮಾದರಿ…

9 hours ago

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

13 hours ago