ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭಾಗವಹಿಸಿದರು. ನಾನು ಪ್ರಧಾನಿಯಾಗಿ ಬಂದಿಲ್ಲ, ಹಿಂದುವಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಹೇಳಿದರು.
ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಆಧ್ಯಾತ್ಮಿಕ ಬೋಧಕ ಮೊರಾರಿ ಬಾಪು ಅವರಿಂದ ರಾಮಕಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಮಕಥೆಯಲ್ಲಿ ಪಾಲ್ಗೊಂಡ ಬ್ರಿಟನ್ ಪ್ರಧಾನಿ ರಿಷಿ ಸುನಕ್, ಕೆಲ ಸಾಧಕರು ಅದೆಷ್ಟೇ ದೊಡ್ಡ ಸ್ಥಾನಕ್ಕೇ ಏರಿದರು ತಮ್ಮ ಧರ್ಮಕ್ಕೆ ಗೌರಯುತವಾಗಿ ನಡೆದುಕೊಳ್ಳುವುದನ್ನು ಮರೆಯುವುದಿಲ್ಲ. ಹಾಗೆ ನಾನು ಪ್ರಧಾನಿಯಾಗಿ ಅಲ್ಲ, ಓರ್ವ ಹಿಂದೂವಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯಂದೇ ರಾಮಕಥಾ ಕಾರ್ಯಕ್ರಮ ನಡೆಯಿತು. ನನ್ನ ನಂಬಿಕೆ ವೈಯಕ್ತಿಕವಾದದ್ದು, ಪ್ರಧಾನಿಯಾಗಿರುವುದು ದೊಡ್ಡ ಗೌರವವಾದರೂ ಈ ಹುದ್ದೆಯನ್ನು ನಿಭಾಯಿಸುವುದು ಅಷ್ಟು ಸುಲಭವಲ್ಲ. ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಕಠಿಣ ಆಯ್ಕೆಗಳನ್ನು ಮಾಡಬೇಕು. ಜನರಲ್ಲಿ ಆತ್ಮವಿಶ್ವಾಸವನ್ನು ತುಂಬಬೇಕು. ನನ್ನ ಧರ್ಮವು ನನಗೆ ಈ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿಯನ್ನು ನೀಡುತ್ತದೆ. ಯಾವುದೇ ಕೆಲಸವನ್ನು ಮಾಡುವ ಮೊದಲು ಸಮಸ್ಯೆಗಳನ್ನು ಆಲಿಸಿ, ಸಮಾಧಾನದಿಂದ ನಿರ್ಧಾರ ತೆಗೆದುಕೊಳ್ಳುವಂತೆ ನನ್ನ ಧರ್ಮವು ಹೇಳುತ್ತದೆ ಎಂದು ರಿಷಿ ಸುನಕ್ ಹೇಳಿದರು. ಶ್ರೀರಾಮನು ಯಾವಾಗಲೂ ತನಗೆ ಸ್ಪೂರ್ತಿದಾಯಕ ವ್ಯಕ್ತಿಯಾಗಿರುತ್ತಾನೆ. ರಾಮನು ಯಾವಾಗಲೂ ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ನಮ್ರತೆಯಿಂದ ಆಡಳಿತ ಮಾಡಲು ಮತ್ತು ನಿಸ್ವಾರ್ಥವಾಗಿ ಕೆಲಸ ಮಾಡಲು ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾನೆ, ಎಂದು ಅವರು ಹೇಳಿದರು.
ಮೊರಾರಿ ಬಾಪು ಅವರ ಆಸನದ ಹಿಂದೆ ಹನುಮಂತನ ವಿಗ್ರಹವನ್ನು ಹೇಗೆ ಇರಿಸಲಾಗಿದೆಯೋ ಅದೇ ರೀತಿ ಗಣೇಶನ ವಿಗ್ರಹವನ್ನು ನನ್ನ ಕಚೇರಿಯ ಮೇಜಿನ ಮೇಲೆ ಇರಿಸಲಾಗಿದೆ ಎಂದು ಬ್ರಿಟನ್ ಪ್ರಧಾನಿ ಸುನಕ್ ಹೇಳಿದರು.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…