Advertisement
ಸುದ್ದಿಗಳು

#RamKathaCambridge | ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ “ರಾಮಕಥೆ” | ಕಾರ್ಯಕ್ರಮಕ್ಕೆ ಭೇಟಿ ನೀಡಿದ ಬ್ರಿಟನ್ ಪ್ರಧಾನಿ ರಿಷಿ ಸುನಕ್ |

Share

ಕೇಂಬ್ರಿಡ್ಜ್‌ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ ನಡೆದ ರಾಮಕಥಾ  ಕಾರ್ಯಕ್ರಮದಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭಾಗವಹಿಸಿದರು. ನಾನು ಪ್ರಧಾನಿಯಾಗಿ ಬಂದಿಲ್ಲ, ಹಿಂದುವಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಹೇಳಿದರು.

ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಆಧ್ಯಾತ್ಮಿಕ ಬೋಧಕ ಮೊರಾರಿ ಬಾಪು ಅವರಿಂದ ರಾಮಕಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಮಕಥೆಯಲ್ಲಿ ಪಾಲ್ಗೊಂಡ ಬ್ರಿಟನ್ ಪ್ರಧಾನಿ ರಿಷಿ ಸುನಕ್, ಕೆಲ ಸಾಧಕರು ಅದೆಷ್ಟೇ ದೊಡ್ಡ ಸ್ಥಾನಕ್ಕೇ ಏರಿದರು ತಮ್ಮ ಧರ್ಮಕ್ಕೆ ಗೌರಯುತವಾಗಿ ನಡೆದುಕೊಳ್ಳುವುದನ್ನು ಮರೆಯುವುದಿಲ್ಲ. ಹಾಗೆ ನಾನು ಪ್ರಧಾನಿಯಾಗಿ ಅಲ್ಲ, ಓರ್ವ ಹಿಂದೂವಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ  ಎಂದು  ಹೇಳಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆಯಂದೇ ರಾಮಕಥಾ ಕಾರ್ಯಕ್ರಮ ನಡೆಯಿತು. ನನ್ನ ನಂಬಿಕೆ ವೈಯಕ್ತಿಕವಾದದ್ದು, ಪ್ರಧಾನಿಯಾಗಿರುವುದು ದೊಡ್ಡ ಗೌರವವಾದರೂ ಈ ಹುದ್ದೆಯನ್ನು ನಿಭಾಯಿಸುವುದು ಅಷ್ಟು ಸುಲಭವಲ್ಲ. ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಕಠಿಣ ಆಯ್ಕೆಗಳನ್ನು ಮಾಡಬೇಕು. ಜನರಲ್ಲಿ ಆತ್ಮವಿಶ್ವಾಸವನ್ನು ತುಂಬಬೇಕು. ನನ್ನ ಧರ್ಮವು ನನಗೆ ಈ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿಯನ್ನು ನೀಡುತ್ತದೆ. ಯಾವುದೇ ಕೆಲಸವನ್ನು ಮಾಡುವ ಮೊದಲು ಸಮಸ್ಯೆಗಳನ್ನು ಆಲಿಸಿ, ಸಮಾಧಾನದಿಂದ ನಿರ್ಧಾರ ತೆಗೆದುಕೊಳ್ಳುವಂತೆ ನನ್ನ ಧರ್ಮವು ಹೇಳುತ್ತದೆ ಎಂದು ರಿಷಿ ಸುನಕ್‌ ಹೇಳಿದರು. ಶ್ರೀರಾಮನು ಯಾವಾಗಲೂ ತನಗೆ ಸ್ಪೂರ್ತಿದಾಯಕ ವ್ಯಕ್ತಿಯಾಗಿರುತ್ತಾನೆ. ರಾಮನು ಯಾವಾಗಲೂ ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ನಮ್ರತೆಯಿಂದ ಆಡಳಿತ ಮಾಡಲು ಮತ್ತು ನಿಸ್ವಾರ್ಥವಾಗಿ ಕೆಲಸ ಮಾಡಲು ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾನೆ, ಎಂದು ಅವರು ಹೇಳಿದರು.

ಮೊರಾರಿ ಬಾಪು ಅವರ ಆಸನದ ಹಿಂದೆ ಹನುಮಂತನ ವಿಗ್ರಹವನ್ನು ಹೇಗೆ ಇರಿಸಲಾಗಿದೆಯೋ ಅದೇ ರೀತಿ ಗಣೇಶನ ವಿಗ್ರಹವನ್ನು ನನ್ನ ಕಚೇರಿಯ ಮೇಜಿನ ಮೇಲೆ ಇರಿಸಲಾಗಿದೆ ಎಂದು ಬ್ರಿಟನ್ ಪ್ರಧಾನಿ ಸುನಕ್ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

16 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

17 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago