ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಮೊರಾರಿ ಬಾಪು ಅವರಿಂದ ನಡೆದ ರಾಮಕಥಾ ಕಾರ್ಯಕ್ರಮದಲ್ಲಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಭಾಗವಹಿಸಿದರು. ನಾನು ಪ್ರಧಾನಿಯಾಗಿ ಬಂದಿಲ್ಲ, ಹಿಂದುವಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಹೇಳಿದರು.
ಕೇಂಬ್ರಿಡ್ಜ್ ವಿಶ್ವವಿದ್ಯಾಲಯದ ಕ್ಯಾಂಪಸ್ನಲ್ಲಿ ಆಧ್ಯಾತ್ಮಿಕ ಬೋಧಕ ಮೊರಾರಿ ಬಾಪು ಅವರಿಂದ ರಾಮಕಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ರಾಮಕಥೆಯಲ್ಲಿ ಪಾಲ್ಗೊಂಡ ಬ್ರಿಟನ್ ಪ್ರಧಾನಿ ರಿಷಿ ಸುನಕ್, ಕೆಲ ಸಾಧಕರು ಅದೆಷ್ಟೇ ದೊಡ್ಡ ಸ್ಥಾನಕ್ಕೇ ಏರಿದರು ತಮ್ಮ ಧರ್ಮಕ್ಕೆ ಗೌರಯುತವಾಗಿ ನಡೆದುಕೊಳ್ಳುವುದನ್ನು ಮರೆಯುವುದಿಲ್ಲ. ಹಾಗೆ ನಾನು ಪ್ರಧಾನಿಯಾಗಿ ಅಲ್ಲ, ಓರ್ವ ಹಿಂದೂವಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆಯಂದೇ ರಾಮಕಥಾ ಕಾರ್ಯಕ್ರಮ ನಡೆಯಿತು. ನನ್ನ ನಂಬಿಕೆ ವೈಯಕ್ತಿಕವಾದದ್ದು, ಪ್ರಧಾನಿಯಾಗಿರುವುದು ದೊಡ್ಡ ಗೌರವವಾದರೂ ಈ ಹುದ್ದೆಯನ್ನು ನಿಭಾಯಿಸುವುದು ಅಷ್ಟು ಸುಲಭವಲ್ಲ. ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು, ಕಠಿಣ ಆಯ್ಕೆಗಳನ್ನು ಮಾಡಬೇಕು. ಜನರಲ್ಲಿ ಆತ್ಮವಿಶ್ವಾಸವನ್ನು ತುಂಬಬೇಕು. ನನ್ನ ಧರ್ಮವು ನನಗೆ ಈ ನಿರ್ಧಾರಗಳನ್ನು ತೆಗೆದುಕೊಳ್ಳುವ ಶಕ್ತಿಯನ್ನು ನೀಡುತ್ತದೆ. ಯಾವುದೇ ಕೆಲಸವನ್ನು ಮಾಡುವ ಮೊದಲು ಸಮಸ್ಯೆಗಳನ್ನು ಆಲಿಸಿ, ಸಮಾಧಾನದಿಂದ ನಿರ್ಧಾರ ತೆಗೆದುಕೊಳ್ಳುವಂತೆ ನನ್ನ ಧರ್ಮವು ಹೇಳುತ್ತದೆ ಎಂದು ರಿಷಿ ಸುನಕ್ ಹೇಳಿದರು. ಶ್ರೀರಾಮನು ಯಾವಾಗಲೂ ತನಗೆ ಸ್ಪೂರ್ತಿದಾಯಕ ವ್ಯಕ್ತಿಯಾಗಿರುತ್ತಾನೆ. ರಾಮನು ಯಾವಾಗಲೂ ಜೀವನದ ಸವಾಲುಗಳನ್ನು ಧೈರ್ಯದಿಂದ ಎದುರಿಸಲು, ನಮ್ರತೆಯಿಂದ ಆಡಳಿತ ಮಾಡಲು ಮತ್ತು ನಿಸ್ವಾರ್ಥವಾಗಿ ಕೆಲಸ ಮಾಡಲು ಸ್ಪೂರ್ತಿದಾಯಕ ವ್ಯಕ್ತಿಯಾಗಿದ್ದಾನೆ, ಎಂದು ಅವರು ಹೇಳಿದರು.
ಮೊರಾರಿ ಬಾಪು ಅವರ ಆಸನದ ಹಿಂದೆ ಹನುಮಂತನ ವಿಗ್ರಹವನ್ನು ಹೇಗೆ ಇರಿಸಲಾಗಿದೆಯೋ ಅದೇ ರೀತಿ ಗಣೇಶನ ವಿಗ್ರಹವನ್ನು ನನ್ನ ಕಚೇರಿಯ ಮೇಜಿನ ಮೇಲೆ ಇರಿಸಲಾಗಿದೆ ಎಂದು ಬ್ರಿಟನ್ ಪ್ರಧಾನಿ ಸುನಕ್ ಹೇಳಿದರು.
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…