ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಾಣಿಕೆ ನಿರಂತರವಾಗಿ ನಡೆಯುತ್ತಿದೆ. ಈ ಅಡಿಕೆಯನ್ನು ಯಾರು ಸಾಗಾಟ ಮಾಡುತ್ತಿದ್ದಾರೆ ? ಎಲ್ಲಿಗೆ ಸಾಗಾಟ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಇದುವರೆಗೂ ಸಮಗ್ರವಾದ ತನಿಖೆ ಆಗಿಲ್ಲ. ಬುಧವಾರ ಕೂಡಾ ಸುಮಾರು 1.20 ಕೋಟಿ ರೂಪಾಯಿ ಮೌಲ್ಯದ ಅಡಿಕೆ ಕಳ್ಳಸಾಗಾಣಿಕೆ ಬೆಳಕಿಗೆ ಬಂದಿದೆ.
ಅಡಿಕೆ ಕಳ್ಳಸಾಗಾಣಿಕೆಯ ಖಚಿತ ಮಾಹಿತಿ ಮೇರೆಗೆ 172 ಬಿಎನ್ ಬಿಎಸ್ಎಫ್ ಮೇಘಾಲಯದ ಸೈನಿಕರು ಉಮ್ಕಿಯಾಂಗ್ ಪ್ರದೇಶದಿಂದ ಬೃಹತ್ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡುತ್ತಿದ್ದ ಟ್ರಕ್ ಅನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಟ್ರಕ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಅಡಿಕೆಯು ಮ್ಯಾನ್ಮಾರ್ನಿಂದ ಹೊರಟಿದ್ದು ಅಸ್ಸಾಂನ ಸಿಲ್ಚಾರ್ನಿಂದ ಬರ್ಪೇಟಾಗೆ ಸಾಗಿಸಲಾಗುತ್ತಿದೆ ಎಂದು ಚಾಲಕ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಪ್ರದೇಶದಲ್ಲಿ ಸತತವಾಗಿ 3 ನೇ ಬಾರಿ ಅಧಿಕ ಪ್ರಮಾಣದಲ್ಲಿ ಅಡಿಕೆ ಸಾಗಾಣಿಕೆ ಪತ್ತೆಯಾಗಿದೆ. ಆದರೆ ಯಾರು ಈ ರೀತಿಯಲ್ಲಿ ಅಡಿಕೆ ಸಾಗಾಣಿಕೆ ಮಾಡುತ್ತಿದ್ದಾರೆ ? ಎಲ್ಲಿಗೆ ಸಾಗಾಟವಾಗುತ್ತಿದೆ, ಇದರ ಹಿಂದೆ ಯಾರಿದ್ದಾರೆ ಎನ್ನುವುದು ಇದುವರೆಗೂ ಸಮಗ್ರ ತನಿಖೆಯಾಗಿಲ್ಲ. ಭಾರತದೊಳಕ್ಕೆ ಸತತವಾಗಿ ಈ ಮಾದರಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆಯಾಗುವಾಗಲೂ ಅಧಿಕಾರಿಗಳು, ಸರ್ಕಾರ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎನ್ನುವುದು ಅಡಿಕೆ ಮಾರುಕಟ್ಟೆ ವಲಯದ ಪ್ರಶ್ನೆಯಾಗಿದೆ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…