Advertisement
MIRROR FOCUS

ಬಿಎಸ್ ಎನ್ ಎಲ್ 4ಜಿ ಸೌಲಭ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ | 26,700 ಕ್ಕೂ ಹೆಚ್ಚು ಹಳ್ಳಿಗಳಿಗೆ ಹೈ-ಸ್ಪೀಡ್ ಇಂಟರ್ನೆಟ್

Share
ಬಿಎಸ್ ಎನ್ ಎಲ್ ಅಭಿವೃದ್ಧಿಪಡಿಸಿರುವ 4-ಜಿ ಅಂತರ್ಜಾಲ ಸೌಲಭ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಒಡಿಶಾದ ಝಾರ್ಸುಗುಡದಲ್ಲಿ ಚಾಲನೆ ನೀಡಿದರು. ಇದೇ ವೇಳೆ ಅಮೃತ್ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಹಲವು ರೈಲ್ವೆ ಕಾಮಗಾರಿ ಸೇರಿದಂತೆ, ಉನ್ನತ ಶಿಕ್ಷಣ, ಆರೋಗ್ಯ, ಕೌಶಲ್ಯಾಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಬಿಎಸ್ ಎನ್ ಎಲ್ ನ ಸ್ವದೇಶಿ 4 – ಜಿ ಸೇವೆ ದೇಶಾದ್ಯಂತ ಇಂದಿನಿಂದ ಆರಂಭವಾಗಿದೆ. ವಿವಿಧ ರಾಜ್ಯಗಳಲ್ಲಿರುವ ಐಐಟಿಗಳ ವಿಸ್ತರಣೆ ಕಾರ್ಯವನ್ನು ಆರಂಭಿಸಲಾಗುತ್ತಿದೆ. ಈ ಯೋಜನೆಗಳು ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿವೆ ಎಂದು ಹೇಳಿದರು.  ಒಡಿಶಾ ರಾಜ್ಯಪಾಲ ಹರಿಬಾಬು ಕಂಭಮ್ ಪತಿ, ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಸೇರಿದಂತೆ, ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಕೇಂದ್ರ ಸಚಿವರು ಪಾಲ್ಗೊಂಡರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ.
ಈಗ ಬಿಎಸ್‌ಎನ್‌ಎಲ್‌ 4 ಜಿ ಮೂಲಕ 26,700 ಕ್ಕೂ ಹೆಚ್ಚು ಹಳ್ಳಿಗಳನ್ನು ಹೈ-ಸ್ಪೀಡ್ ಇಂಟರ್ನೆಟ್ ಸಂಪರ್ಕದೊಂದಿಗೆ ಸಂಪರ್ಕಿಸುತ್ತಿದೆ. ಬಿಎಸ್‌ಎನ್‌ಎಲ್‌  ಈ ನೆಟ್‌ವರ್ಕ್ ಅನಾವರಣಗೊಳಿಸಿದೆ, ಇದು ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS), ಸೆಂಟರ್ ಫಾರ್ ಡೆವಲಪ್‌ಮೆಂಟ್ ಆಫ್ ಟೆಲಿಮ್ಯಾಟಿಕ್ಸ್ (C-DOT) ಮತ್ತು ತೇಜಸ್ ನೆಟ್‌ವರ್ಕ್ಸ್ ಲಿಮಿಟೆಡ್ ಸಹಯೋಗದೊಂದಿಗೆ  ಭಾರತದಲ್ಲಿ ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಲಾದ ಆಧುನಿಕ ಮತ್ತು ಸುರಕ್ಷಿತ ನೆಟ್ವರ್ಕ್‌ ವಿಧಾನವಾಗಿದೆ. ಸ್ಥಳೀಯ ಟೆಲಿಕಾಂ ತಂತ್ರಜ್ಞಾನದೊಂದಿಗೆ ಸೇವೆ ನೀಡುತ್ತಿರುವ ವಿಶ್ವದ ಐದನೇ ದೇಶವಾಗಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

45 minutes ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

2 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

5 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

14 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

15 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

15 hours ago