Advertisement
ಸುದ್ದಿಗಳು

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

Share

ಗ್ರಾಮೀಣ ಭಾಗದ ಸಂಪರ್ಕವನ್ನು ಬಲಪಡಿಸುವ ದಿಸೆಯಲ್ಲಿ Bharat Sanchar Nigam Limited (BSNL) ಮಹತ್ವದ ಹೆಜ್ಜೆ ಇಟ್ಟಿದ್ದು, ಜೊಯಿಡಾ ತಾಲ್ಲೂಕಿನ ಬಾಳಶೆಟ್ಟಿಕೊಪ್ಪ ಗ್ರಾಮದಲ್ಲಿ ಹೊಸ ಮೊಬೈಲ್ ಟವರ್ ಉದ್ಘಾಟಿಸಲಾಗಿದೆ. ಈ ವೇಳೆ ಮಾತನಾಡಿದ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ , ಬಿಎಸ್‌ಎನ್‌ಎಲ್ ಸುಧಾರಣೆ ಮತ್ತು ಅಭಿವೃದ್ಧಿಗೆ ಕೇಂದ್ರ ಸರ್ಕಾರ ಮೊದಲ ಆದ್ಯತೆ ನೀಡುತ್ತಿದೆ ಎಂದು ಹೇಳಿದರು.

ಟವರ್‌ಗಳಲ್ಲಿ ಬಳಸಲಾಗುತ್ತಿರುವ ತಂತ್ರಜ್ಞಾನವನ್ನು ದೇಶೀಯವಾಗಿ ಅಭಿವೃದ್ಧಿಪಡಿಸಿರುವುದು ವಿಶೇಷವಾಗಿದ್ದು, ಬಿಎಸ್‌ಎನ್‌ಎಲ್ ಈಗ ಖಾಸಗಿ ಕಂಪನಿಗಳೊಂದಿಗೆ ಗುಣಮಟ್ಟದಲ್ಲಿ ಪೈಪೋಟಿ ನೀಡುತ್ತಿದೆ ಎಂದು ಅವರು ತಿಳಿಸಿದರು.

ಗ್ರಾಮೀಣ ಭಾಗಕ್ಕೆ 4G ಸಂಪರ್ಕ :  ಗ್ರಾಮೀಣ ಪ್ರದೇಶಗಳಲ್ಲಿ  ಆನ್‌ಲೈನ್ ಶಿಕ್ಷಣ,  ಬ್ಯಾಂಕಿಂಗ್ ಸೇವೆಗಳು,  ಸರ್ಕಾರಿ ಯೋಜನೆಗಳಿಗೆ ನೋಂದಣಿ  ಇವುಗಳಿಗೆ ಅಗತ್ಯವಾದ ಸ್ಥಿರ 4G ಸಂಪರ್ಕ ಒದಗಿಸುವುದು ಸರ್ಕಾರದ ಗುರಿಯಾಗಿದೆ.

ಜಿಲ್ಲೆಯಲ್ಲಿನ ಅಭಿವೃದ್ಧಿ ವಿವರ

  • ಹಳೆಯ 250 ಟವರ್‌ಗಳಲ್ಲಿ 163 ಟವರ್‌ಗಳು 4Gಗೆ ಅಪ್‌ಗ್ರೇಡ್
  • ಹೊಸದಾಗಿ 199 ಟವರ್‌ಗಳು 4G ಸೇವೆ ನೀಡುತ್ತಿವೆ
  • ಇನ್ನೂ 75 ಹೊಸ ಟವರ್‌ಗಳಿಗೆ ಮಂಜೂರಾತಿ
  • ಸ್ಥಳ ಪರಿಶೀಲನಾ ಕಾರ್ಯ ಪ್ರಗತಿಯಲ್ಲಿದೆ

ಸಮಸ್ಯೆಗಳಿಗೆ ಪರಿಹಾರ : ಜಿಲ್ಲೆಯಲ್ಲಿ ಎದುರಾಗುತ್ತಿರುವ ಬ್ಯಾಟರಿ ಬ್ಯಾಕಪ್ ಸಮಸ್ಯೆಯನ್ನು ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಂಸದರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

BSNL has inaugurated a new 4G mobile tower in Joida, Uttara Kannada. MP Vishweshwar Hegde Kageri stated that the central government is prioritizing BSNL’s development to improve rural connectivity and digital access.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

4 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

4 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

11 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

13 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

22 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

22 hours ago