Advertisement
MIRROR FOCUS

ಬಿಎಸ್‌ಎನ್‌ಎಲ್‌ ನಿಂದ ಭಾರತದ ಮೊದಲ “ಡೈರೆಕ್ಟ್-ಟು-ಡಿವೈಸ್” ಸೇವೆ |

Share

ಬಿಎಸ್‌ಎನ್‌ ಎಲ್‌ ಸೇವೆಯು ತನ್ನ ಸೇವೆಯ ವ್ಯಾಪ್ತಿಯನ್ನು ವಿಸ್ತಾರಗೊಳಿಸುತ್ತಿದೆ. ದೇಶದ ಗ್ರಾಮೀಣ ಭಾಗದವರೆಗೂ ನೆಟ್ವರ್ಕ್‌ ಹೊಂದಿರುವ ಬಿಎಸ್‌ಎನ್‌ಎಲ್‌ ಇಂದಿಗೂ ಇನ್ನಷ್ಟು ಗ್ರಾಮೀಣ ಭಾಗದವರೆಗೂ ತಪುಪಿಲ್ಲ. ಇದೀಗ ಭಾರತದ ಮೊದಲ ಡೈರೆಕ್ಟ್-ಟು-ಡಿವೈಸ್ ಉಪಗ್ರಹ ಸಂಪರ್ಕ ಸೇವೆಯನ್ನು ಪ್ರಾರಂಭಿಸುತ್ತಿದೆ. ಗ್ರಾಮೀಣ ಭಾಗದ ಬಳಕೆದಾರರಿಗೆ ತಡೆರಹಿತ ಸಂವಹನವನ್ನು ನೀಡುತ್ತದೆ, ಇದನ್ನು  ಯುಸ್‌ ಮೂಲದ ಕಂಪನಿ Viasat ಜೊತೆ ಸೇರಿ ತಂತ್ರಜ್ಞಾನ  ಅಭಿವೃದ್ಧಿಪಡಿಸಲಾಗಿದೆ.

ಭಾರತೀಯ ದೂರಸಂಪರ್ಕ ಇಲಾಖೆ (BSNL) ಭಾರತದ ಮೊದಲ ಉಪಗ್ರಹದಿಂದ ಸಂಪರ್ಕ ಸಾಧನದ ಸೇವೆಯನ್ನು ನೀಡಲು ಸಿದ್ಧವಾಗಿದೆ. ಯಾವುದೇ ಸ್ಥಳಗಳಲ್ಲಿ  ಅಡೆತಡೆಯಿಲ್ಲದ ಸಂವಹನವನ್ನು ಒದಗಿಸುವ ಸಾಮರ್ಥ್ಯವನ್ನು ನೀಡಲು ಇಲ್ಲಿ ಸಾಧ್ಯವಿದೆ.  ಕ್ಯಾಲಿಫೋರ್ನಿಯಾ ಮೂಲದ Viasat ಸಹಯೋಗದೊಂದಿಗೆ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ. ಭೌಗೋಳಿಕ ಸವಾಲುಗಳನ್ನು ಲೆಕ್ಕಿಸದೆ ಬಳಕೆದಾರರಿಗೆ ಸಂಪರ್ಕ ಒದಗಿಸಲು ಈ ತಂತ್ರಜ್ಞಾನವನ್ನು ವಿನ್ಯಾಸಗೊಳಿಸಲಾಗಿದೆ.

ಈ ಉಪಗ್ರಹ ಸಂಪರ್ಕ ಸೇವೆಯು  ಕಣಿವೆಯ ಪ್ರದೇಶ, ಹಳ್ಳಿಗಳ ಪ್ರದೇಶದಂತಹ ಕಡೆಗಳಲ್ಲಿ ಯಾವುದೇ ನೆಟ್ವರ್ಕ್‌ ಇಲ್ಲದ ಕಡೆಗಳಲ್ಲಿ ಇರುವ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.  ಉಪಗ್ರಹ ಸಂಪರ್ಕವು ತುರ್ತು ಮತ್ತು ಮಿಲಿಟರಿ ಬಳಕೆಗೆ  ಮಾತ್ರಾ ಲಭ್ಯವಿದ್ದರೂ, ಈ ಸೇವೆಯು ಮೊದಲ ಬಾರಿಗೆ ಜನಸಾಮಾನ್ಯರಿಗೂ ಲಭ್ಯವಾಗುವಂತೆ ಮಾಡಲಾಗುತ್ತಿದೆ.  ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ, ಸೆಲ್ಯುಲಾರ್ ಅಥವಾ ವೈ-ಫೈ ನೆಟ್‌ವರ್ಕ್‌ಗಳು ಲಭ್ಯವಿಲ್ಲದ ಸಂದರ್ಭಗಳಲ್ಲಿ ಬಳಕೆದಾರರು ಸಂಪರ್ಕ ಸಾಧಿಸಲು ಇನ್ನು ಸಾಧ್ಯವಾಗುತ್ತದೆ. ಈ ಸೇವೆಯು ತುರ್ತು ಕರೆ, SoS ಸಂದೇಶ ಕಳುಹಿಸುವಿಕೆ ಮತ್ತು ಇತರ ನೆಟ್‌ವರ್ಕ್‌ಗಳು ತಲುಪದಿರುವಾಗ UPI ಪಾವತಿಗಳನ್ನು ಕೂಡಾ ಮಾಡಲು ಸಾದ್ಯವಾಗುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ.

Viasat  ಸಹಯೋಗದೊಂದಿಗೆ,ಬಿಎಸ್‌ಎನ್‌ಎಲ್  ದ್ವಿಮುಖ ಉಪಗ್ರಹ ಸಂವಹನವನ್ನು ಸಕ್ರಿಯಗೊಳಿಸಿದೆ, 36,000‌ ಕಿಮೀ  ದೂರದಲ್ಲಿರುವ Viasat  ನ  ಎಲ್-ಬ್ಯಾಂಡ್ ಉಪಗ್ರಹಗಳಿಗೆ ಸಂಪರ್ಕಿಸುತ್ತದೆ. ಆದರೆ ಈ ಉಪಗ್ರಹ ಸಂಪರ್ಕ ಸೇವೆಯನ್ನು ಬಳಕೆದಾರರು ಹೇಗೆ ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಇನ್ನೂ ಸ್ಪಷ್ಟವಾಗಿ ಬಿಎಸ್‌ಎನ್‌ಎಲ್‌ ಉಲ್ಲೇಖಿಸಲಿಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

48 minutes ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

2 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

5 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

14 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

15 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

15 hours ago