MIRROR FOCUS

ಬಿಎಸ್‌ಎನ್‌ಎಲ್‌ ನಿಂದ ಭಾರತದ ಮೊದಲ “ಡೈರೆಕ್ಟ್-ಟು-ಡಿವೈಸ್” ಸೇವೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಎಸ್‌ಎನ್‌ ಎಲ್‌ ಸೇವೆಯು ತನ್ನ ಸೇವೆಯ ವ್ಯಾಪ್ತಿಯನ್ನು ವಿಸ್ತಾರಗೊಳಿಸುತ್ತಿದೆ. ದೇಶದ ಗ್ರಾಮೀಣ ಭಾಗದವರೆಗೂ ನೆಟ್ವರ್ಕ್‌ ಹೊಂದಿರುವ ಬಿಎಸ್‌ಎನ್‌ಎಲ್‌ ಇಂದಿಗೂ ಇನ್ನಷ್ಟು ಗ್ರಾಮೀಣ ಭಾಗದವರೆಗೂ ತಪುಪಿಲ್ಲ. ಇದೀಗ ಭಾರತದ ಮೊದಲ ಡೈರೆಕ್ಟ್-ಟು-ಡಿವೈಸ್ ಉಪಗ್ರಹ ಸಂಪರ್ಕ ಸೇವೆಯನ್ನು ಪ್ರಾರಂಭಿಸುತ್ತಿದೆ. ಗ್ರಾಮೀಣ ಭಾಗದ ಬಳಕೆದಾರರಿಗೆ ತಡೆರಹಿತ ಸಂವಹನವನ್ನು ನೀಡುತ್ತದೆ, ಇದನ್ನು  ಯುಸ್‌ ಮೂಲದ ಕಂಪನಿ Viasat ಜೊತೆ ಸೇರಿ ತಂತ್ರಜ್ಞಾನ  ಅಭಿವೃದ್ಧಿಪಡಿಸಲಾಗಿದೆ.

Advertisement
Advertisement

ಭಾರತೀಯ ದೂರಸಂಪರ್ಕ ಇಲಾಖೆ (BSNL) ಭಾರತದ ಮೊದಲ ಉಪಗ್ರಹದಿಂದ ಸಂಪರ್ಕ ಸಾಧನದ ಸೇವೆಯನ್ನು ನೀಡಲು ಸಿದ್ಧವಾಗಿದೆ. ಯಾವುದೇ ಸ್ಥಳಗಳಲ್ಲಿ  ಅಡೆತಡೆಯಿಲ್ಲದ ಸಂವಹನವನ್ನು ಒದಗಿಸುವ ಸಾಮರ್ಥ್ಯವನ್ನು ನೀಡಲು ಇಲ್ಲಿ ಸಾಧ್ಯವಿದೆ.  ಕ್ಯಾಲಿಫೋರ್ನಿಯಾ ಮೂಲದ Viasat ಸಹಯೋಗದೊಂದಿಗೆ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ. ಭೌಗೋಳಿಕ ಸವಾಲುಗಳನ್ನು ಲೆಕ್ಕಿಸದೆ ಬಳಕೆದಾರರಿಗೆ ಸಂಪರ್ಕ ಒದಗಿಸಲು ಈ ತಂತ್ರಜ್ಞಾನವನ್ನು ವಿನ್ಯಾಸಗೊಳಿಸಲಾಗಿದೆ.

ಈ ಉಪಗ್ರಹ ಸಂಪರ್ಕ ಸೇವೆಯು  ಕಣಿವೆಯ ಪ್ರದೇಶ, ಹಳ್ಳಿಗಳ ಪ್ರದೇಶದಂತಹ ಕಡೆಗಳಲ್ಲಿ ಯಾವುದೇ ನೆಟ್ವರ್ಕ್‌ ಇಲ್ಲದ ಕಡೆಗಳಲ್ಲಿ ಇರುವ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.  ಉಪಗ್ರಹ ಸಂಪರ್ಕವು ತುರ್ತು ಮತ್ತು ಮಿಲಿಟರಿ ಬಳಕೆಗೆ  ಮಾತ್ರಾ ಲಭ್ಯವಿದ್ದರೂ, ಈ ಸೇವೆಯು ಮೊದಲ ಬಾರಿಗೆ ಜನಸಾಮಾನ್ಯರಿಗೂ ಲಭ್ಯವಾಗುವಂತೆ ಮಾಡಲಾಗುತ್ತಿದೆ.  ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ, ಸೆಲ್ಯುಲಾರ್ ಅಥವಾ ವೈ-ಫೈ ನೆಟ್‌ವರ್ಕ್‌ಗಳು ಲಭ್ಯವಿಲ್ಲದ ಸಂದರ್ಭಗಳಲ್ಲಿ ಬಳಕೆದಾರರು ಸಂಪರ್ಕ ಸಾಧಿಸಲು ಇನ್ನು ಸಾಧ್ಯವಾಗುತ್ತದೆ. ಈ ಸೇವೆಯು ತುರ್ತು ಕರೆ, SoS ಸಂದೇಶ ಕಳುಹಿಸುವಿಕೆ ಮತ್ತು ಇತರ ನೆಟ್‌ವರ್ಕ್‌ಗಳು ತಲುಪದಿರುವಾಗ UPI ಪಾವತಿಗಳನ್ನು ಕೂಡಾ ಮಾಡಲು ಸಾದ್ಯವಾಗುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ.

Viasat  ಸಹಯೋಗದೊಂದಿಗೆ,ಬಿಎಸ್‌ಎನ್‌ಎಲ್  ದ್ವಿಮುಖ ಉಪಗ್ರಹ ಸಂವಹನವನ್ನು ಸಕ್ರಿಯಗೊಳಿಸಿದೆ, 36,000‌ ಕಿಮೀ  ದೂರದಲ್ಲಿರುವ Viasat  ನ  ಎಲ್-ಬ್ಯಾಂಡ್ ಉಪಗ್ರಹಗಳಿಗೆ ಸಂಪರ್ಕಿಸುತ್ತದೆ. ಆದರೆ ಈ ಉಪಗ್ರಹ ಸಂಪರ್ಕ ಸೇವೆಯನ್ನು ಬಳಕೆದಾರರು ಹೇಗೆ ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಇನ್ನೂ ಸ್ಪಷ್ಟವಾಗಿ ಬಿಎಸ್‌ಎನ್‌ಎಲ್‌ ಉಲ್ಲೇಖಿಸಲಿಲ್ಲ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

12 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

1 day ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

2 days ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

2 days ago