Advertisement
MIRROR FOCUS

ಬಿಎಸ್‌ಎನ್‌ಎಲ್‌ ನಿಂದ ಭಾರತದ ಮೊದಲ “ಡೈರೆಕ್ಟ್-ಟು-ಡಿವೈಸ್” ಸೇವೆ |

Share

ಬಿಎಸ್‌ಎನ್‌ ಎಲ್‌ ಸೇವೆಯು ತನ್ನ ಸೇವೆಯ ವ್ಯಾಪ್ತಿಯನ್ನು ವಿಸ್ತಾರಗೊಳಿಸುತ್ತಿದೆ. ದೇಶದ ಗ್ರಾಮೀಣ ಭಾಗದವರೆಗೂ ನೆಟ್ವರ್ಕ್‌ ಹೊಂದಿರುವ ಬಿಎಸ್‌ಎನ್‌ಎಲ್‌ ಇಂದಿಗೂ ಇನ್ನಷ್ಟು ಗ್ರಾಮೀಣ ಭಾಗದವರೆಗೂ ತಪುಪಿಲ್ಲ. ಇದೀಗ ಭಾರತದ ಮೊದಲ ಡೈರೆಕ್ಟ್-ಟು-ಡಿವೈಸ್ ಉಪಗ್ರಹ ಸಂಪರ್ಕ ಸೇವೆಯನ್ನು ಪ್ರಾರಂಭಿಸುತ್ತಿದೆ. ಗ್ರಾಮೀಣ ಭಾಗದ ಬಳಕೆದಾರರಿಗೆ ತಡೆರಹಿತ ಸಂವಹನವನ್ನು ನೀಡುತ್ತದೆ, ಇದನ್ನು  ಯುಸ್‌ ಮೂಲದ ಕಂಪನಿ Viasat ಜೊತೆ ಸೇರಿ ತಂತ್ರಜ್ಞಾನ  ಅಭಿವೃದ್ಧಿಪಡಿಸಲಾಗಿದೆ.

ಭಾರತೀಯ ದೂರಸಂಪರ್ಕ ಇಲಾಖೆ (BSNL) ಭಾರತದ ಮೊದಲ ಉಪಗ್ರಹದಿಂದ ಸಂಪರ್ಕ ಸಾಧನದ ಸೇವೆಯನ್ನು ನೀಡಲು ಸಿದ್ಧವಾಗಿದೆ. ಯಾವುದೇ ಸ್ಥಳಗಳಲ್ಲಿ  ಅಡೆತಡೆಯಿಲ್ಲದ ಸಂವಹನವನ್ನು ಒದಗಿಸುವ ಸಾಮರ್ಥ್ಯವನ್ನು ನೀಡಲು ಇಲ್ಲಿ ಸಾಧ್ಯವಿದೆ.  ಕ್ಯಾಲಿಫೋರ್ನಿಯಾ ಮೂಲದ Viasat ಸಹಯೋಗದೊಂದಿಗೆ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ. ಭೌಗೋಳಿಕ ಸವಾಲುಗಳನ್ನು ಲೆಕ್ಕಿಸದೆ ಬಳಕೆದಾರರಿಗೆ ಸಂಪರ್ಕ ಒದಗಿಸಲು ಈ ತಂತ್ರಜ್ಞಾನವನ್ನು ವಿನ್ಯಾಸಗೊಳಿಸಲಾಗಿದೆ.

ಈ ಉಪಗ್ರಹ ಸಂಪರ್ಕ ಸೇವೆಯು  ಕಣಿವೆಯ ಪ್ರದೇಶ, ಹಳ್ಳಿಗಳ ಪ್ರದೇಶದಂತಹ ಕಡೆಗಳಲ್ಲಿ ಯಾವುದೇ ನೆಟ್ವರ್ಕ್‌ ಇಲ್ಲದ ಕಡೆಗಳಲ್ಲಿ ಇರುವ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.  ಉಪಗ್ರಹ ಸಂಪರ್ಕವು ತುರ್ತು ಮತ್ತು ಮಿಲಿಟರಿ ಬಳಕೆಗೆ  ಮಾತ್ರಾ ಲಭ್ಯವಿದ್ದರೂ, ಈ ಸೇವೆಯು ಮೊದಲ ಬಾರಿಗೆ ಜನಸಾಮಾನ್ಯರಿಗೂ ಲಭ್ಯವಾಗುವಂತೆ ಮಾಡಲಾಗುತ್ತಿದೆ.  ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ, ಸೆಲ್ಯುಲಾರ್ ಅಥವಾ ವೈ-ಫೈ ನೆಟ್‌ವರ್ಕ್‌ಗಳು ಲಭ್ಯವಿಲ್ಲದ ಸಂದರ್ಭಗಳಲ್ಲಿ ಬಳಕೆದಾರರು ಸಂಪರ್ಕ ಸಾಧಿಸಲು ಇನ್ನು ಸಾಧ್ಯವಾಗುತ್ತದೆ. ಈ ಸೇವೆಯು ತುರ್ತು ಕರೆ, SoS ಸಂದೇಶ ಕಳುಹಿಸುವಿಕೆ ಮತ್ತು ಇತರ ನೆಟ್‌ವರ್ಕ್‌ಗಳು ತಲುಪದಿರುವಾಗ UPI ಪಾವತಿಗಳನ್ನು ಕೂಡಾ ಮಾಡಲು ಸಾದ್ಯವಾಗುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ.

Viasat  ಸಹಯೋಗದೊಂದಿಗೆ,ಬಿಎಸ್‌ಎನ್‌ಎಲ್  ದ್ವಿಮುಖ ಉಪಗ್ರಹ ಸಂವಹನವನ್ನು ಸಕ್ರಿಯಗೊಳಿಸಿದೆ, 36,000‌ ಕಿಮೀ  ದೂರದಲ್ಲಿರುವ Viasat  ನ  ಎಲ್-ಬ್ಯಾಂಡ್ ಉಪಗ್ರಹಗಳಿಗೆ ಸಂಪರ್ಕಿಸುತ್ತದೆ. ಆದರೆ ಈ ಉಪಗ್ರಹ ಸಂಪರ್ಕ ಸೇವೆಯನ್ನು ಬಳಕೆದಾರರು ಹೇಗೆ ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಇನ್ನೂ ಸ್ಪಷ್ಟವಾಗಿ ಬಿಎಸ್‌ಎನ್‌ಎಲ್‌ ಉಲ್ಲೇಖಿಸಲಿಲ್ಲ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

17 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

23 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago