Advertisement
MIRROR FOCUS

ಬಿಎಸ್‌ಎನ್‌ಎಲ್‌ ನಿಂದ ಭಾರತದ ಮೊದಲ “ಡೈರೆಕ್ಟ್-ಟು-ಡಿವೈಸ್” ಸೇವೆ |

Share

ಬಿಎಸ್‌ಎನ್‌ ಎಲ್‌ ಸೇವೆಯು ತನ್ನ ಸೇವೆಯ ವ್ಯಾಪ್ತಿಯನ್ನು ವಿಸ್ತಾರಗೊಳಿಸುತ್ತಿದೆ. ದೇಶದ ಗ್ರಾಮೀಣ ಭಾಗದವರೆಗೂ ನೆಟ್ವರ್ಕ್‌ ಹೊಂದಿರುವ ಬಿಎಸ್‌ಎನ್‌ಎಲ್‌ ಇಂದಿಗೂ ಇನ್ನಷ್ಟು ಗ್ರಾಮೀಣ ಭಾಗದವರೆಗೂ ತಪುಪಿಲ್ಲ. ಇದೀಗ ಭಾರತದ ಮೊದಲ ಡೈರೆಕ್ಟ್-ಟು-ಡಿವೈಸ್ ಉಪಗ್ರಹ ಸಂಪರ್ಕ ಸೇವೆಯನ್ನು ಪ್ರಾರಂಭಿಸುತ್ತಿದೆ. ಗ್ರಾಮೀಣ ಭಾಗದ ಬಳಕೆದಾರರಿಗೆ ತಡೆರಹಿತ ಸಂವಹನವನ್ನು ನೀಡುತ್ತದೆ, ಇದನ್ನು  ಯುಸ್‌ ಮೂಲದ ಕಂಪನಿ Viasat ಜೊತೆ ಸೇರಿ ತಂತ್ರಜ್ಞಾನ  ಅಭಿವೃದ್ಧಿಪಡಿಸಲಾಗಿದೆ.

ಭಾರತೀಯ ದೂರಸಂಪರ್ಕ ಇಲಾಖೆ (BSNL) ಭಾರತದ ಮೊದಲ ಉಪಗ್ರಹದಿಂದ ಸಂಪರ್ಕ ಸಾಧನದ ಸೇವೆಯನ್ನು ನೀಡಲು ಸಿದ್ಧವಾಗಿದೆ. ಯಾವುದೇ ಸ್ಥಳಗಳಲ್ಲಿ  ಅಡೆತಡೆಯಿಲ್ಲದ ಸಂವಹನವನ್ನು ಒದಗಿಸುವ ಸಾಮರ್ಥ್ಯವನ್ನು ನೀಡಲು ಇಲ್ಲಿ ಸಾಧ್ಯವಿದೆ.  ಕ್ಯಾಲಿಫೋರ್ನಿಯಾ ಮೂಲದ Viasat ಸಹಯೋಗದೊಂದಿಗೆ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ. ಭೌಗೋಳಿಕ ಸವಾಲುಗಳನ್ನು ಲೆಕ್ಕಿಸದೆ ಬಳಕೆದಾರರಿಗೆ ಸಂಪರ್ಕ ಒದಗಿಸಲು ಈ ತಂತ್ರಜ್ಞಾನವನ್ನು ವಿನ್ಯಾಸಗೊಳಿಸಲಾಗಿದೆ.

Advertisement

ಈ ಉಪಗ್ರಹ ಸಂಪರ್ಕ ಸೇವೆಯು  ಕಣಿವೆಯ ಪ್ರದೇಶ, ಹಳ್ಳಿಗಳ ಪ್ರದೇಶದಂತಹ ಕಡೆಗಳಲ್ಲಿ ಯಾವುದೇ ನೆಟ್ವರ್ಕ್‌ ಇಲ್ಲದ ಕಡೆಗಳಲ್ಲಿ ಇರುವ ಜನರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.  ಉಪಗ್ರಹ ಸಂಪರ್ಕವು ತುರ್ತು ಮತ್ತು ಮಿಲಿಟರಿ ಬಳಕೆಗೆ  ಮಾತ್ರಾ ಲಭ್ಯವಿದ್ದರೂ, ಈ ಸೇವೆಯು ಮೊದಲ ಬಾರಿಗೆ ಜನಸಾಮಾನ್ಯರಿಗೂ ಲಭ್ಯವಾಗುವಂತೆ ಮಾಡಲಾಗುತ್ತಿದೆ.  ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ, ಸೆಲ್ಯುಲಾರ್ ಅಥವಾ ವೈ-ಫೈ ನೆಟ್‌ವರ್ಕ್‌ಗಳು ಲಭ್ಯವಿಲ್ಲದ ಸಂದರ್ಭಗಳಲ್ಲಿ ಬಳಕೆದಾರರು ಸಂಪರ್ಕ ಸಾಧಿಸಲು ಇನ್ನು ಸಾಧ್ಯವಾಗುತ್ತದೆ. ಈ ಸೇವೆಯು ತುರ್ತು ಕರೆ, SoS ಸಂದೇಶ ಕಳುಹಿಸುವಿಕೆ ಮತ್ತು ಇತರ ನೆಟ್‌ವರ್ಕ್‌ಗಳು ತಲುಪದಿರುವಾಗ UPI ಪಾವತಿಗಳನ್ನು ಕೂಡಾ ಮಾಡಲು ಸಾದ್ಯವಾಗುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ.

Viasat  ಸಹಯೋಗದೊಂದಿಗೆ,ಬಿಎಸ್‌ಎನ್‌ಎಲ್  ದ್ವಿಮುಖ ಉಪಗ್ರಹ ಸಂವಹನವನ್ನು ಸಕ್ರಿಯಗೊಳಿಸಿದೆ, 36,000‌ ಕಿಮೀ  ದೂರದಲ್ಲಿರುವ Viasat  ನ  ಎಲ್-ಬ್ಯಾಂಡ್ ಉಪಗ್ರಹಗಳಿಗೆ ಸಂಪರ್ಕಿಸುತ್ತದೆ. ಆದರೆ ಈ ಉಪಗ್ರಹ ಸಂಪರ್ಕ ಸೇವೆಯನ್ನು ಬಳಕೆದಾರರು ಹೇಗೆ ಪಡೆದುಕೊಳ್ಳಬಹುದು ಎಂಬುದರ ಬಗ್ಗೆ ಇನ್ನೂ ಸ್ಪಷ್ಟವಾಗಿ ಬಿಎಸ್‌ಎನ್‌ಎಲ್‌ ಉಲ್ಲೇಖಿಸಲಿಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

53 minutes ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

1 hour ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

17 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

18 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

1 day ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago