Advertisement
The Rural Mirror ಫಾಲೋಅಪ್

ಈ ಬಿ ಎಸ್‌ ಎನ್‌ ಎಲ್‌ ಯಾವಾಗ ಸರಿ ಆಗ್ತದೆ ಮಾರಾಯ್ರೆ….! | ಕೇಬಲ್‌ ಕಟ್‌ ಆದ್ರೆ ದಂಡವೂ ಇಲ್ವಾ ಮಾರಾಯ್ರೆ ? | ಹೀಗಾದ್ರೆ ಕೇಬಲ್ ಹಾಕಿಸಿದವರ ಕತೆ ಏನು ?

Share

ದೇಶದ ಅತ್ಯಂತ ದೊಡ್ಡ ನೆಟ್ವರ್ಕ್‌ ಬಿ ಎಸ್‌ ಎನ್‌ ಎಲ್.‌ ಸರ್ಕಾರಿ ಸ್ವಾಮ್ಯದ ಈ ನೆಟ್ವರ್ಕ್‌ ನೆಚ್ಚಿಕೊಂಡವರು ಅನೇಕರು. ಕೊಂಚ ಸೇವೆಯ ವ್ಯತ್ಯಯವಾದರೂ ಸರ್ಕಾರಿ ವ್ಯವಸ್ಥೆ ಎಂದು ಸಹಿಸಿಕೊಂಡರು. ಈಚೆಗೆ ಕೇಬಲ್‌ ಮೂಲಕ ಮನೆ ಮನೆಗೂ ವೇಗದ ಇಂಟರ್ನೆಟ್‌ ವ್ಯವಸ್ಥೆಯೂ ಆಯಿತು. ಅನೇಕರು ಸಂತಸ ಪಟ್ಟರು. ಈಗ ಮತ್ತೆ ಕೇಳುತ್ತಾರೆ, ಈ ಬಿ ಎಸ್‌ ಎನ್‌ ಎಲ್‌ ಯಾವಾಗ ಸರಿ ಆಗ್ತದೆ ಮಾರಾಯ್ರೆ…! ಹಳ್ಳಿಗಳು ಉದ್ಧಾರವಾಗುವುದು ಯಾವಾಗ ಮಾರಾಯ್ರೆ.. ? ಹೀಗೆ ಪ್ರಶ್ನೆ ಕೇಳಲೂ ಕಾರಣ ಇದೆ…

Advertisement
Advertisement

ಸರ್ಕಾರಿ ಸ್ವಾಮ್ಯದ ಬಿ ಎಸ್‌ ಎನ್‌ ಎಲ್‌ ಈಗ ಬೆಳೆಯುತ್ತದೆ ಎಂದು ಅನೇಕರು ಭಾವಿಸಿಕೊಂಡರು. ಹಳ್ಳಿ ಹಳ್ಳಿಗೂ ನೆಟ್ವರ್ಕ್‌ ಹೊಂದಿದೆ. ಕೊರೋನಾ ನಂತರ ವೇಗದ ಇಂಟರ್ನೆಟ್‌ ಪ್ರತೀ ಹಳ್ಳಿಗೂ ಅಗತ್ಯ ಇತ್ತು. ಇದಕ್ಕಾಗಿ ಫೈಬರ್‌ ಮೂಲಕ ಅಂದರೆ ಮನೆ ಮನೆಗೂ ಕೇಬಲ್‌ ಮೂಲಕ ವೇಗದ ಇಂಟರ್ನೆಟ್‌ ತಲುಪಿತು. ಕೆಲವು ಕಡೆಗಳಿಗೆ ಏರ್‌ ಫೈಬರ್‌ ಮೂಲಕ ವೇಗದ ಇಂಟರ್ನೆಟ್‌ ತಲುಪಿತು. ಹಳ್ಳಿಗಳಲ್ಲೂ ನೆಟ್ವರ್ಕ್‌ ಹೊಂದಿರುವ ಬಿ ಎಸ್‌ ಎನ್‌ ಎಲ್‌ ಗೆ ಬೆಳೆಯುವುದಕ್ಕೆ ಇದೊಂದು ಅವಕಾಶವೂ ಆಗಿತ್ತು. ಈ ನೆಟ್ವರ್ಕ್‌ ತಲಪಿಸಲು ಸಾಕಷ್ಟು ಪ್ರಾಂಚೈಸಿಯವರಿಗೆ ಅವಕಾಶ ನೀಡಿದರು. ಹೀಗಾಗಿ ಬಿ ಎಸ್‌ ಎನ್‌ ಎಲ್‌ ಗೆ ಕಡಿಮೆ ಸಿಬಂದಿಗಳ ಮೂಲಕ ಪ್ರಾಂಚೈಸಿ ವತಿಯಿಂದ ಗ್ರಾಮೀಣ ಭಾಗಕ್ಕೂ ಸೇವೆ ನೀಡಲು ಸಾಧ್ಯವಾಯಿತು. ಎಲ್ಲಾ ಫ್ರಾಂಚೈಸಿಗಳೂ ಉತ್ತಮ ಸೇವೆ ನೀಡಲು ಬದ್ಧರಾದರು ಹಾಗೂ  ಹಳ್ಳಿಯಲ್ಲೂ ಉತ್ತಮ ಸೇವೆ ನೀಡಿದರು. ಆದರೆ ಬಿ ಎಸ್‌ ಎನ್‌ ಎಲ್‌ ಮಾತ್ರಾ ಇನ್ನೂ ಎಚ್ಚೆತ್ತುಕೊಂಡಂತೆ ಕಾಣುತ್ತಿಲ್ಲ., ಸರ್ಕಾರವೂ ಇದನ್ನೆಲ್ಲಾ ಗಮನಿಸಿದಂತೆ ಕಾಣುತ್ತಿಲ್ಲ. ಅಲ್ಲಿನ ಸಿಬಂದಿಗಳ ಲೋಪವೋ ಅಥವಾ ಅಧಿಕಾರಿಗಳ ಲೋಪವೂ, ನಿರ್ಲಕ್ಷ್ಯದ ಕಾರಣದಿಂದಲೋ ಅಥವಾ ಸೂಕ್ತ ವ್ಯವಸ್ಥೆ ಇನ್ನೂ ಲಭ್ಯವಾಗದ ಕಾರಣದಿಂದಲೋ ಬಿ ಎಸ್‌ ಎನ್‌ ಎಲ್‌ ಬೆಳೆಯುತ್ತಿಲ್ಲ…!. ಎಷ್ಟೆಂದರೆ ಕೇಬಲ್‌ ತುಂಡಾದರೆ ತಕ್ಷಣವೇ ಸೇರಿಸುವ ವ್ಯವಸ್ಥೆಯೂ ಬಿ ಎಸ್‌ ಎನ್‌ ಎಲ್‌ ಬಳಿ ಇಲ್ಲವಾಗಿದೆ.

Advertisement

ಸೋಮವಾರ ಮುಖ್ಯ ಕೇಬಲ್‌ ತುಂಡಾದ ಕಾರಣದಿಂದ ಅನೇಕ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಇಂಟರ್ನೆಟ್‌ ಸೇವೆ ವ್ಯತ್ಯಯ ಆಗಿದೆ. ಬಿ ಎಸ್‌ ಎನ್‌ ಎಲ್‌ ನಂಬಿ ವರ್ಕ್‌ ಫ್ರಂ ಹೋಂ ಮಾಡುವ ಅನೇಕ ಯುವಕರಿಗೆ ಸಮಸ್ಯೆಯಾಯಿತು. ಹಳ್ಳಿ ಅಥವಾ ನಗರದಲ್ಲಿ ಕುಳಿತು ಬಿ ಎಸ್‌ ಎನ್‌ ಎಲ್‌ ನಂಬಿದರೆ ಕತೆ ಗೋವಿಂದ ಎಂಬ ಸ್ಥಿತಿಗೆ ಬಂದಿದೆ ಎಂದರೆ ಬಿ ಎಸ್‌ ಎನ್‌ ಎಲ್‌ ಬೆಳೆಯುವುದು  ಯಾವಾಗ ? ಸರ್ಕಾರ ಪರ್ಯಾಯ ವ್ಯವಸ್ಥೆಯನ್ನು ಮಾಡದೆ ಬಿ ಎಸ್‌ ಎನ್‌ ಎಲ್‌ ಬೆಳೆಯಲೂ ಅವಕಾಶ ನೀಡದಿದ್ದರೆ ಹಳ್ಳಿಗಳು ಉದ್ದಾರವಾಗುವುದು  ಯಾವಾಗ ? ಮುಖ್ಯ ಕೇಬಲ್‌ ಗಳು ತುಂಡಾದರೆ ಅದಕ್ಕೆ ಸೂಕ್ತವಾದ ದಂಡ ವಿಧಿಸುವ, ತಕ್ಷಣವೇ ದುರಸ್ತಿ ಮಾಡುವ ಅವಕಾಶ ಇಲ್ಲವೇ ? ಖಾಸಗಿ ಕಂಪನಿಗಳು ತಕ್ಷಣವೇ ಹೇಗೆ ವ್ಯವಸ್ಥೆ ಮಾಡುತ್ತವೆ  ಎಂಬುದು ಪ್ರಶ್ನೆಯಾಗಿದೆ.

ಈಗ ಮನೆ ಮನೆಗೂ ಫೈಬರ್‌ ಸಂಪರ್ಕ ಪಡೆದ ಎಲ್ಲರೂ ಪ್ರಾಂಚೈಸಿಯ ಸಿಬಂದಿಗಳನ್ನು ಪ್ರಶ್ನೆ ಮಾಡುತ್ತಾರೆ ಸಹಜವಾಗಿಯೇ ಬಿ ಎಸ್‌ ಎನ್‌ ಎಲ್‌ ಕಡೆಗೆ ಆ ಸಿಬಂದಿಗಳು ಕೈ ತೋರಿಸುತ್ತಾರೆ, ಬಿ ಎಸ್‌ ಎನ್‌ ಎಲ್‌ ಸಿಬಂದಿಗಳು ಪ್ರಾಂಚೈಸಿ ಕಡೆಗೆ ಕೈ ತೋರಿಸುತ್ತಾರೆ. ತಕ್ಷಣವೇ ನೆಟ್ವರ್ಕ್‌ ಸಮಸ್ಯೆ ದುರಸ್ತಿಯಾಗದೇ ಇರುವುದರಿಂದ ಅನೇಕರಿಗೆ ಸಮಸ್ಯೆಯಾಗುತ್ತಿದೆ. ವರ್ಕ್‌ ಫ್ರಂ ಹೋಂ ಮಾಡುತ್ತಿರುವ ಯುವಕರಿಗಂತೂ ಪರದಾಟವಾಗಿದೆ. ಸೋಮವಾರವೂ ಅದೇ ಸಮಸ್ಯೆಯಾಗಿದೆ. ಇದು ನಿರುತ್ಸಾಹವೋ ಅಥವಾ ವ್ಯವಸ್ಥೆಯ ಕೊರತೆಯೋ ಎಂಬುದೂ ಅರ್ಥವಾಗದ ಸ್ಥಿತಿ. ಈಗೀಗ ಗ್ರಾಮೀಣ ಭಾಗಕ್ಕೆ ಸೇವೆ ನೀಡಲು ಪ್ರಾಂಚೈಸಿ ಪಡೆದವರೂ ಪರದಾಟ ನಡೆಸಬೇಕಾದ ಸ್ಥಿತಿ ಬಂದಿದೆ. ಗ್ರಾಹಕರಿಗೆ ಉತ್ತರ ನೀಡಿ ಸುಸ್ತಾಗಬೇಕಾದ ಪ್ರಮೇಯ ಬಂದಿದೆ.

Advertisement

ಮುಖ್ಯಕೇಬಲ್‌ ತುಂಡಾದರೆ ತಕ್ಷಣವೇ ಬಿ ಎಸ್‌ ಎನ್‌ ಎಲ್‌ ಪರ್ಯಾಯ ವ್ಯವಸ್ಥೆಗೆ ಮುಂದಾಗಬೇಕು, ಹಳ್ಳಿಗಳಲ್ಲೂ ತಕ್ಷಣವೇ ನೆಟ್ವರ್ಕ್‌ ಸರಿಯಾಗದೇ ಇದ್ದರೆ ವರ್ಕ್‌ ಫ್ರಂ ಹೋಂ ಯುವಕರಿಗೆ ಸಮಸ್ಯೆಯಾಗುತ್ತಿದೆ. ಇಂದು ಹಳ್ಳಿಯಲ್ಲೂ ಇಂಟರ್ನೆಟ್‌ ತೀರಾ ಅಗತ್ಯವಾಗಿದೆ. ಮುಖ್ಯ ಕೇಬಲ್‌ ತುಂಡಾದರೆ ಬಿ ಎಸ್‌ ಎನ್‌ ಎಲ್‌ ನಂಬಿಕೊಂಡಿರುವ ಗ್ರಾಮೀಣ ಭಾಗದ  ಬ್ಯಾಂಕಿಂಗ್‌ ವ್ಯವಸ್ಥೆ , ಅಂಚೆ  ಕಚೇರಿ ಸೇರಿದಂತೆ ಹಲವಾರು ವ್ಯವಸ್ಥೆಗಳಿಗೂ ಸಮಸ್ಯೆಯಾಗುತ್ತದೆ. ಹಳ್ಳಿಯಿಂದಲೇ ಕೆಲಸ ಮಾಡುವ ಯುವಕರಿಗೂ ಸಮಸ್ಯೆಯಾಗುತ್ತದೆ. ಯಾವುದೇ ಅಭಿವೃದ್ಧಿ ಕಾರ್ಯದ ಸಂದರ್ಭ ಇಂದಿನ ಅತೀ ಅಗತ್ಯದ ಇಂಟರ್ನೆಟ್‌ ವ್ಯವಸ್ಥೆಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲು ಬಿ ಎಸ್‌ ಎನ್‌ ಎಲ್‌ ಮುಂದಾಗಬೇಕು, ಅಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ಗಮನಹರಿಸಬೇಕು ಹಾಗೂ ಯಾವುದೇ ಸೂಚನೆ ನೀಡದೆ ಮುಖ್ಯ ಕೇಬಲ್‌ ಗಳನ್ನು ತುಂಡಿಸಿದರೆ ದಂಡ ವಿಧಿಸುವ ಕ್ರಮವೂ ಆಗಬೇಕು ಎಂಬ ಒತ್ತಾಯ ಗ್ರಾಹಕರಿಂದ ಬಂದಿದೆ. ಈಚೆಗೆ ಕೆಲವು ಸಮಯಗಳಿಂದ ಆಗಾಗ ಬಿ ಎಸ್‌ ಎನ್‌ ಎಲ್‌ ನೆಟ್ವರ್ಕ್‌ ಕೈಕೊಡುತ್ತಿದೆ ಎಂದೂ ಗ್ರಾಹಕರು ದೂರಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

5 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

6 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

7 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

7 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

9 hours ago