ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

July 29, 2025
8:19 PM

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ- ಬಿಎಸ್ಎನ್ಎಲ್ (BSNL) ಮುಖ್ಯ ಪ್ರಧಾನ ವ್ಯವಸ್ಥಾಪಕರೊಂದಿಗೆ ನಿನ್ನೆ  ಪರಿಶೀಲನಾ ಸಭೆ ನಡೆಸಿದರು.

ಈ ವೇಳೆ ಸಂವಹನ ಖಾತೆ ಸಹಾಯಕ ಸಚಿವ ಪೆಮ್ಮಸಾನಿ ಚಂದ್ರಶೇಖರ್ ಮತ್ತು ದೂರಸಂಪರ್ಕ ಇಲಾಖೆಯ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಉನ್ನತ ಮಟ್ಟದ ಸಭೆಯಲ್ಲಿ ʻಬಿಎಸ್ಎನ್ಎಲ್ʼ (BSNL)ನ ಕಾರ್ಯಾಚರಣೆಯ ಪ್ರಗತಿ, ಪ್ರಾದೇಶಿಕ ಸವಾಲುಗಳ ಕುರಿತು ಚರ್ಚಿಸಲಾಯಿತು. ಜೊತೆಗೆ, ಕಂಪನಿಯ ಜಾಲ ಹಾಗೂ ಸೇವಾ ವಿತರಣೆಯ ಮುಂದಿನ ಕಾರ್ಯತಂತ್ರದ ಬಗ್ಗೆ ಪರಿಶೀಲಿಸಲಾಯಿತು.

ಬಳಿಕ   ಜ್ಯೋತಿರಾದಿತ್ಯ ಸಿಂಧಿಯಾ , ಟೆಲಿಕಾಂ ಕ್ಷೇತ್ರದಲ್ಲಿ ʻಬಿಎಸ್ಎನ್ಎಲ್ʼನ ಪಾತ್ರವನ್ನು ಬಲಪಡಿಸುವುದು, ಮೂಲಸೌಕರ್ಯ ಜಾರಿಯನ್ನು ವೇಗಗೊಳಿಸುವುದು ಮತ್ತು ನಾಗರಿಕ ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸುವ ಬಗ್ಗೆ ಚರ್ಚೆಯ ವೇಳೆ ಗಮನ ಹರಿಸಲಾಯಿತು ಎಂದು ಹೇಳಿದರು.

ʻಬಿಎಸ್ಎನ್ಎಲ್‌ʼ (BSNL)ನ ಬೆಳವಣಿಗೆಯ ಕಾರ್ಯತಂತ್ರ, ನೆಟ್ ವರ್ಕ್ ಕಾರ್ಯಕ್ಷಮತೆಯನ್ನು ಸುಧಾರಿಸುವುದು, ಗ್ರಾಹಕ ಸೇವಾ ವಿತರಣೆ ಮತ್ತು ಸಾಂಸ್ಥಿಕ ಆಧುನೀಕರಣದ ಬಗ್ಗೆ ಗಮನ ಕೇಂದ್ರೀಕರಿಸಲಾಯಿತು. ಈ ಸಮಗ್ರ ಸಂವಾದ ವೇಳೆ ಎಲ್ಲಾ ವ್ಯವಹಾರ ಘಟಕಗಳಲ್ಲಿ  ಆದಾಯ ಮೊದಲು ಎಂಬ ಗುರಿಗಳ ಸ್ಪಷ್ಟ ಉದ್ದೇಶದೊಂದಿಗೆ ಗ್ರಾಹಕ-ಕೇಂದ್ರಿತ ಟೆಲಿಕಾಂ ಸೇವಾ ಪೂರೈಕೆದಾರನಾಗಿ ʻಬಿಎಸ್ಎನ್ಎಲ್‌ʼ(BSNL)ನ  ಸೇವೆಗಳನ್ನು ಸುಧಾರಿಸಬೇಕು ಎಂದು ತಿಳಿಸಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ತೆಂಗಿನಕಾಯಿ ರಫ್ತಿನಲ್ಲಿ ಭಾರತ ಶೇ.62ರಷ್ಟು ಏರಿಕೆ
September 19, 2026
12:06 PM
by: ದ ರೂರಲ್ ಮಿರರ್.ಕಾಂ
ಸಮುದ್ರ ಮಾರ್ಗದಲ್ಲಿ ಅಡಿಕೆ ಸಾಗಾಟ : ಒಡಿಶಾದ ಬಾಲಸೋರ್‌ನಲ್ಲಿ ₹2 ಕೋಟಿಗೂ ಅಧಿಕ ಅಡಿಕೆ ವಶ- ಅಡಿಕೆ ಜಾಲದ ಹಿಂದೆ ಬಿದ್ದಿರುವ ಪೊಲೀಸರು
September 19, 2026
11:28 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 19-09-2026 | ಸೆ.22 ರಿಂದ ಮಳೆ ಹೆಚ್ಚಳದ ಸೂಚನೆ – ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ
September 19, 2026
11:11 AM
by: ದ ರೂರಲ್ ಮಿರರ್.ಕಾಂ
ಗೋಮಯದಿಂದ ಗಣೇಶನ ಮೂರ್ತಿ – ದೇಶದಾದ್ಯಂತ ಸಾವಿರಾರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿತರಣೆ
September 19, 2026
7:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror