Advertisement
MIRROR FOCUS

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

Share

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ- ಬಿಎಸ್ಎನ್ಎಲ್ (BSNL) ಮುಖ್ಯ ಪ್ರಧಾನ ವ್ಯವಸ್ಥಾಪಕರೊಂದಿಗೆ ನಿನ್ನೆ  ಪರಿಶೀಲನಾ ಸಭೆ ನಡೆಸಿದರು.

ಈ ವೇಳೆ ಸಂವಹನ ಖಾತೆ ಸಹಾಯಕ ಸಚಿವ ಪೆಮ್ಮಸಾನಿ ಚಂದ್ರಶೇಖರ್ ಮತ್ತು ದೂರಸಂಪರ್ಕ ಇಲಾಖೆಯ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಉನ್ನತ ಮಟ್ಟದ ಸಭೆಯಲ್ಲಿ ʻಬಿಎಸ್ಎನ್ಎಲ್ʼ (BSNL)ನ ಕಾರ್ಯಾಚರಣೆಯ ಪ್ರಗತಿ, ಪ್ರಾದೇಶಿಕ ಸವಾಲುಗಳ ಕುರಿತು ಚರ್ಚಿಸಲಾಯಿತು. ಜೊತೆಗೆ, ಕಂಪನಿಯ ಜಾಲ ಹಾಗೂ ಸೇವಾ ವಿತರಣೆಯ ಮುಂದಿನ ಕಾರ್ಯತಂತ್ರದ ಬಗ್ಗೆ ಪರಿಶೀಲಿಸಲಾಯಿತು.

ಬಳಿಕ   ಜ್ಯೋತಿರಾದಿತ್ಯ ಸಿಂಧಿಯಾ , ಟೆಲಿಕಾಂ ಕ್ಷೇತ್ರದಲ್ಲಿ ʻಬಿಎಸ್ಎನ್ಎಲ್ʼನ ಪಾತ್ರವನ್ನು ಬಲಪಡಿಸುವುದು, ಮೂಲಸೌಕರ್ಯ ಜಾರಿಯನ್ನು ವೇಗಗೊಳಿಸುವುದು ಮತ್ತು ನಾಗರಿಕ ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸುವ ಬಗ್ಗೆ ಚರ್ಚೆಯ ವೇಳೆ ಗಮನ ಹರಿಸಲಾಯಿತು ಎಂದು ಹೇಳಿದರು.

ʻಬಿಎಸ್ಎನ್ಎಲ್‌ʼ (BSNL)ನ ಬೆಳವಣಿಗೆಯ ಕಾರ್ಯತಂತ್ರ, ನೆಟ್ ವರ್ಕ್ ಕಾರ್ಯಕ್ಷಮತೆಯನ್ನು ಸುಧಾರಿಸುವುದು, ಗ್ರಾಹಕ ಸೇವಾ ವಿತರಣೆ ಮತ್ತು ಸಾಂಸ್ಥಿಕ ಆಧುನೀಕರಣದ ಬಗ್ಗೆ ಗಮನ ಕೇಂದ್ರೀಕರಿಸಲಾಯಿತು. ಈ ಸಮಗ್ರ ಸಂವಾದ ವೇಳೆ ಎಲ್ಲಾ ವ್ಯವಹಾರ ಘಟಕಗಳಲ್ಲಿ  ಆದಾಯ ಮೊದಲು ಎಂಬ ಗುರಿಗಳ ಸ್ಪಷ್ಟ ಉದ್ದೇಶದೊಂದಿಗೆ ಗ್ರಾಹಕ-ಕೇಂದ್ರಿತ ಟೆಲಿಕಾಂ ಸೇವಾ ಪೂರೈಕೆದಾರನಾಗಿ ʻಬಿಎಸ್ಎನ್ಎಲ್‌ʼ(BSNL)ನ  ಸೇವೆಗಳನ್ನು ಸುಧಾರಿಸಬೇಕು ಎಂದು ತಿಳಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

10 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

10 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

19 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

20 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

20 hours ago