ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ- ಬಿಎಸ್ಎನ್ಎಲ್ (BSNL) ಮುಖ್ಯ ಪ್ರಧಾನ ವ್ಯವಸ್ಥಾಪಕರೊಂದಿಗೆ ನಿನ್ನೆ ಪರಿಶೀಲನಾ ಸಭೆ ನಡೆಸಿದರು.
ಈ ವೇಳೆ ಸಂವಹನ ಖಾತೆ ಸಹಾಯಕ ಸಚಿವ ಪೆಮ್ಮಸಾನಿ ಚಂದ್ರಶೇಖರ್ ಮತ್ತು ದೂರಸಂಪರ್ಕ ಇಲಾಖೆಯ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಉನ್ನತ ಮಟ್ಟದ ಸಭೆಯಲ್ಲಿ ʻಬಿಎಸ್ಎನ್ಎಲ್ʼ (BSNL)ನ ಕಾರ್ಯಾಚರಣೆಯ ಪ್ರಗತಿ, ಪ್ರಾದೇಶಿಕ ಸವಾಲುಗಳ ಕುರಿತು ಚರ್ಚಿಸಲಾಯಿತು. ಜೊತೆಗೆ, ಕಂಪನಿಯ ಜಾಲ ಹಾಗೂ ಸೇವಾ ವಿತರಣೆಯ ಮುಂದಿನ ಕಾರ್ಯತಂತ್ರದ ಬಗ್ಗೆ ಪರಿಶೀಲಿಸಲಾಯಿತು.
ಬಳಿಕ ಜ್ಯೋತಿರಾದಿತ್ಯ ಸಿಂಧಿಯಾ , ಟೆಲಿಕಾಂ ಕ್ಷೇತ್ರದಲ್ಲಿ ʻಬಿಎಸ್ಎನ್ಎಲ್ʼನ ಪಾತ್ರವನ್ನು ಬಲಪಡಿಸುವುದು, ಮೂಲಸೌಕರ್ಯ ಜಾರಿಯನ್ನು ವೇಗಗೊಳಿಸುವುದು ಮತ್ತು ನಾಗರಿಕ ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸುವ ಬಗ್ಗೆ ಚರ್ಚೆಯ ವೇಳೆ ಗಮನ ಹರಿಸಲಾಯಿತು ಎಂದು ಹೇಳಿದರು.
ʻಬಿಎಸ್ಎನ್ಎಲ್ʼ (BSNL)ನ ಬೆಳವಣಿಗೆಯ ಕಾರ್ಯತಂತ್ರ, ನೆಟ್ ವರ್ಕ್ ಕಾರ್ಯಕ್ಷಮತೆಯನ್ನು ಸುಧಾರಿಸುವುದು, ಗ್ರಾಹಕ ಸೇವಾ ವಿತರಣೆ ಮತ್ತು ಸಾಂಸ್ಥಿಕ ಆಧುನೀಕರಣದ ಬಗ್ಗೆ ಗಮನ ಕೇಂದ್ರೀಕರಿಸಲಾಯಿತು. ಈ ಸಮಗ್ರ ಸಂವಾದ ವೇಳೆ ಎಲ್ಲಾ ವ್ಯವಹಾರ ಘಟಕಗಳಲ್ಲಿ ಆದಾಯ ಮೊದಲು ಎಂಬ ಗುರಿಗಳ ಸ್ಪಷ್ಟ ಉದ್ದೇಶದೊಂದಿಗೆ ಗ್ರಾಹಕ-ಕೇಂದ್ರಿತ ಟೆಲಿಕಾಂ ಸೇವಾ ಪೂರೈಕೆದಾರನಾಗಿ ʻಬಿಎಸ್ಎನ್ಎಲ್ʼ(BSNL)ನ ಸೇವೆಗಳನ್ನು ಸುಧಾರಿಸಬೇಕು ಎಂದು ತಿಳಿಸಿದರು.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…