ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ- ಬಿಎಸ್ಎನ್ಎಲ್ (BSNL) ಮುಖ್ಯ ಪ್ರಧಾನ ವ್ಯವಸ್ಥಾಪಕರೊಂದಿಗೆ ನಿನ್ನೆ ಪರಿಶೀಲನಾ ಸಭೆ ನಡೆಸಿದರು.
ಈ ವೇಳೆ ಸಂವಹನ ಖಾತೆ ಸಹಾಯಕ ಸಚಿವ ಪೆಮ್ಮಸಾನಿ ಚಂದ್ರಶೇಖರ್ ಮತ್ತು ದೂರಸಂಪರ್ಕ ಇಲಾಖೆಯ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಉನ್ನತ ಮಟ್ಟದ ಸಭೆಯಲ್ಲಿ ʻಬಿಎಸ್ಎನ್ಎಲ್ʼ (BSNL)ನ ಕಾರ್ಯಾಚರಣೆಯ ಪ್ರಗತಿ, ಪ್ರಾದೇಶಿಕ ಸವಾಲುಗಳ ಕುರಿತು ಚರ್ಚಿಸಲಾಯಿತು. ಜೊತೆಗೆ, ಕಂಪನಿಯ ಜಾಲ ಹಾಗೂ ಸೇವಾ ವಿತರಣೆಯ ಮುಂದಿನ ಕಾರ್ಯತಂತ್ರದ ಬಗ್ಗೆ ಪರಿಶೀಲಿಸಲಾಯಿತು.
ಬಳಿಕ ಜ್ಯೋತಿರಾದಿತ್ಯ ಸಿಂಧಿಯಾ , ಟೆಲಿಕಾಂ ಕ್ಷೇತ್ರದಲ್ಲಿ ʻಬಿಎಸ್ಎನ್ಎಲ್ʼನ ಪಾತ್ರವನ್ನು ಬಲಪಡಿಸುವುದು, ಮೂಲಸೌಕರ್ಯ ಜಾರಿಯನ್ನು ವೇಗಗೊಳಿಸುವುದು ಮತ್ತು ನಾಗರಿಕ ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸುವ ಬಗ್ಗೆ ಚರ್ಚೆಯ ವೇಳೆ ಗಮನ ಹರಿಸಲಾಯಿತು ಎಂದು ಹೇಳಿದರು.
ʻಬಿಎಸ್ಎನ್ಎಲ್ʼ (BSNL)ನ ಬೆಳವಣಿಗೆಯ ಕಾರ್ಯತಂತ್ರ, ನೆಟ್ ವರ್ಕ್ ಕಾರ್ಯಕ್ಷಮತೆಯನ್ನು ಸುಧಾರಿಸುವುದು, ಗ್ರಾಹಕ ಸೇವಾ ವಿತರಣೆ ಮತ್ತು ಸಾಂಸ್ಥಿಕ ಆಧುನೀಕರಣದ ಬಗ್ಗೆ ಗಮನ ಕೇಂದ್ರೀಕರಿಸಲಾಯಿತು. ಈ ಸಮಗ್ರ ಸಂವಾದ ವೇಳೆ ಎಲ್ಲಾ ವ್ಯವಹಾರ ಘಟಕಗಳಲ್ಲಿ ಆದಾಯ ಮೊದಲು ಎಂಬ ಗುರಿಗಳ ಸ್ಪಷ್ಟ ಉದ್ದೇಶದೊಂದಿಗೆ ಗ್ರಾಹಕ-ಕೇಂದ್ರಿತ ಟೆಲಿಕಾಂ ಸೇವಾ ಪೂರೈಕೆದಾರನಾಗಿ ʻಬಿಎಸ್ಎನ್ಎಲ್ʼ(BSNL)ನ ಸೇವೆಗಳನ್ನು ಸುಧಾರಿಸಬೇಕು ಎಂದು ತಿಳಿಸಿದರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…