ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ- ಬಿಎಸ್ಎನ್ಎಲ್ (BSNL) ಮುಖ್ಯ ಪ್ರಧಾನ ವ್ಯವಸ್ಥಾಪಕರೊಂದಿಗೆ ನಿನ್ನೆ ಪರಿಶೀಲನಾ ಸಭೆ ನಡೆಸಿದರು.
ಈ ವೇಳೆ ಸಂವಹನ ಖಾತೆ ಸಹಾಯಕ ಸಚಿವ ಪೆಮ್ಮಸಾನಿ ಚಂದ್ರಶೇಖರ್ ಮತ್ತು ದೂರಸಂಪರ್ಕ ಇಲಾಖೆಯ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಉನ್ನತ ಮಟ್ಟದ ಸಭೆಯಲ್ಲಿ ʻಬಿಎಸ್ಎನ್ಎಲ್ʼ (BSNL)ನ ಕಾರ್ಯಾಚರಣೆಯ ಪ್ರಗತಿ, ಪ್ರಾದೇಶಿಕ ಸವಾಲುಗಳ ಕುರಿತು ಚರ್ಚಿಸಲಾಯಿತು. ಜೊತೆಗೆ, ಕಂಪನಿಯ ಜಾಲ ಹಾಗೂ ಸೇವಾ ವಿತರಣೆಯ ಮುಂದಿನ ಕಾರ್ಯತಂತ್ರದ ಬಗ್ಗೆ ಪರಿಶೀಲಿಸಲಾಯಿತು.
ಬಳಿಕ ಜ್ಯೋತಿರಾದಿತ್ಯ ಸಿಂಧಿಯಾ , ಟೆಲಿಕಾಂ ಕ್ಷೇತ್ರದಲ್ಲಿ ʻಬಿಎಸ್ಎನ್ಎಲ್ʼನ ಪಾತ್ರವನ್ನು ಬಲಪಡಿಸುವುದು, ಮೂಲಸೌಕರ್ಯ ಜಾರಿಯನ್ನು ವೇಗಗೊಳಿಸುವುದು ಮತ್ತು ನಾಗರಿಕ ಕೇಂದ್ರಿತ ಸೇವಾ ವಿತರಣೆಯನ್ನು ಹೆಚ್ಚಿಸುವ ಬಗ್ಗೆ ಚರ್ಚೆಯ ವೇಳೆ ಗಮನ ಹರಿಸಲಾಯಿತು ಎಂದು ಹೇಳಿದರು.
ʻಬಿಎಸ್ಎನ್ಎಲ್ʼ (BSNL)ನ ಬೆಳವಣಿಗೆಯ ಕಾರ್ಯತಂತ್ರ, ನೆಟ್ ವರ್ಕ್ ಕಾರ್ಯಕ್ಷಮತೆಯನ್ನು ಸುಧಾರಿಸುವುದು, ಗ್ರಾಹಕ ಸೇವಾ ವಿತರಣೆ ಮತ್ತು ಸಾಂಸ್ಥಿಕ ಆಧುನೀಕರಣದ ಬಗ್ಗೆ ಗಮನ ಕೇಂದ್ರೀಕರಿಸಲಾಯಿತು. ಈ ಸಮಗ್ರ ಸಂವಾದ ವೇಳೆ ಎಲ್ಲಾ ವ್ಯವಹಾರ ಘಟಕಗಳಲ್ಲಿ ಆದಾಯ ಮೊದಲು ಎಂಬ ಗುರಿಗಳ ಸ್ಪಷ್ಟ ಉದ್ದೇಶದೊಂದಿಗೆ ಗ್ರಾಹಕ-ಕೇಂದ್ರಿತ ಟೆಲಿಕಾಂ ಸೇವಾ ಪೂರೈಕೆದಾರನಾಗಿ ʻಬಿಎಸ್ಎನ್ಎಲ್ʼ(BSNL)ನ ಸೇವೆಗಳನ್ನು ಸುಧಾರಿಸಬೇಕು ಎಂದು ತಿಳಿಸಿದರು.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…