ಆರ್ಥಿಕ ಸಮೀಕ್ಷೆ 2022 | ಬೆಳೆ ಸಂಬಂಧಿತ ವಲಯಗಳಿಗೆ ಆದ್ಯತೆ ನೀಡಲು ಸಲಹೆ ನೀಡಿದ ಆರ್ಥಿಕ ಸಮೀಕ್ಷಾ ವರದಿ |

February 2, 2022
1:00 PM

ಕೃಷಿ ವಲಯವು ಕೋವಿಡ್-19 ರ ನಂತರ ಬೆಳವಣಿಗೆ ಕಂಡಿದೆ ಹಾಗೂ ಸ್ಥಿರತೆಯತ್ತಲೇ ಸಾಗಿದೆ. ಹೀಗಾಗಿ ಈ ಹಣಕಾಸು ವರ್ಷದಲ್ಲಿ ಕೃಷಿ ಹಾಗೂ ಅದಕ್ಕೆ ಸಂಬಂಧಿಸಿದ ಕ್ಷೇತ್ರಗಳು  ಶೇ.3.9 ರಷ್ಟು ಬೆಳವಣಿಗೆ ಹೊಂದಲಿದೆ. ಹೀಗಾಗಿ ಮುಂದೆ ಬೆಳೆ ವೈವಿಧ್ಯತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸರ್ಕಾರಕ್ಕೆ  ಕೃಷಿ ಕ್ಷೇತ್ರಗಳು ಮತ್ತು ನ್ಯಾನೋ ಯೂರಿಯಾದಂತಹ ಪರ್ಯಾಯ ರಸಗೊಬ್ಬರಗಳ ಕುರಿತು ಸಲಹೆ ನೀಡಲಾಗಿದೆ ಎಂದು ಆರ್ಥಿಕ ಸಮೀಕ್ಷೆಯು ತಿಳಿಸಿದೆ.

2021-22 ರ ಆರ್ಥಿಕ ಸಮೀಕ್ಷೆಯು ಡ್ರೋನ್‌ಗಳಂತಹ ಹೊಸ ತಂತ್ರಜ್ಞಾನಗಳ ಬಳಕೆಯನ್ನು ಹೊರತುಪಡಿಸಿ ಕೃಷಿ ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಸಾವಯವ ಕೃಷಿಯನ್ನು ಹೆಚ್ಚಿಸಲು ಸಲಹೆ ಮಾಡಿದೆ. ಜಾನುವಾರು, ಹೈನುಗಾರಿಕೆ ಮತ್ತು ಮೀನುಗಾರಿಕೆ ಸೇರಿದಂತೆ ಸಂಬಂಧಿತ ವಲಯಗಳಲ್ಲಿನ ಬೆಳವಣಿಗೆಯು ಕ್ಷೇತ್ರದ ಒಟ್ಟಾರೆ ಬೆಳವಣಿಗೆಗೆ ಪ್ರಮುಖ ಆದ್ಯತೆ ಬೇಕಾಗಿದೆ.

ಇತ್ತೀಚಿನ  ಸಮೀಕ್ಷೆಯ ಪ್ರಕಾರ, ಕೃಷಿ ಕುಟುಂಬಗಳ ಸರಾಸರಿ ಮಾಸಿಕ ಆದಾಯದ ಸುಮಾರು 15 ಪ್ರತಿಶತದಷ್ಟು ಪಾಲನ್ನು ಹೊಂದಿದ್ದು, ಇದು  ಸ್ಥಿರ ಆದಾಯದ ಮೂಲಗಳಾಗಿವೆ. 2021 ರ ಪ್ರಕಾರ ಪ್ರತಿ ಕೃಷಿ ಕುಟುಂಬದ ಸರಾಸರಿ ಮಾಸಿಕ ಆದಾಯವು 10,218 ರೂ.ಗೆ ಇದೆ. ಮುಂದೆ ಸಣ್ಣ ಹಿಡುವಳಿಗಳಲ್ಲಿ ಕೃಷಿ ತಂತ್ರಜ್ಞಾನಗಳ ಅಭಿವೃದ್ಧಿ ಮತ್ತು ಅನುಷ್ಠಾನದ ಮೂಲಕ ಸಣ್ಣ ಮತ್ತು ಅತಿ ಸಣ್ಣ ರೈತ ಉತ್ಪಾದತೆಯನ್ನು ಸುಧಾರಿಸುವ ಅವಶ್ಯಕತೆಯಿದೆ ಎಂದು ಆರ್ಥಿಕ ಸಮೀಕ್ಷೆಯು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ
March 31, 2026
6:09 AM
by: ದ ರೂರಲ್ ಮಿರರ್.ಕಾಂ
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ
March 30, 2026
10:09 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?
March 30, 2026
12:06 PM
by: ಸಾಯಿಶೇಖರ್ ಕರಿಕಳ
ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ
March 30, 2026
7:52 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror