Advertisement
ರಾಷ್ಟ್ರೀಯ

ಬಜೆಟ್‌ ಸುದ್ದಿ | ಮುಂಗಡ ಪತ್ರದಲ್ಲಿ ಕೃಷಿ ಬೆಳವಣಿಗೆಗೆ ಹಲವು ಯೋಜನೆ ಘೋಷಣೆ |

Share

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ ನಲ್ಲಿ ರೈತರ ಹಾಗೂ ಕೃಷಿ ಬೆಳವಣಿಗೆ ಕಡೆಗೂ ಗಮನಹರಿಸಿದ್ದಾರೆ.  ರೈತರ ಉತ್ಪನ್ನಗಳನ್ನು ಒಟ್ಟುಗೂಡಿಸಲು ಹೋಮ್ ಡೆಲಿವರಿ ಸ್ಪಾರ್ಟ್ಅಪ್‌ಗಳಿಗೆ ಪ್ರೋತ್ಸಾಹ ಮತ್ತು ರಾಷ್ಟ್ರೀಯ ಉಗ್ರಾಣ ಜಾಲವನ್ನು ಒಳಗೊಂಡಂತೆ ಭಾರತದ ದೀರ್ಘಕಾಲದ ಕೃಷಿ ಸಂಕಷ್ಟವನ್ನು ಎದುರಿಸಲು ವಿವಿಧ ಯೋಜನೆಯನ್ನು ಘೋಷಿಸಿದ್ದಾರೆ.

ರೈತರಿಂದ ನೇರ ಮಾರುಕಟ್ಟೆಗಾಗಿ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ, ಮೀನು ಮತ್ತು ಜಲಚರ ಸಾಕಣೆಗೆ ವಿಶಿಷ್ಟ ನಿಧಿ, ಕೃಷಿ ಉತ್ಪನ್ನದ ಗ್ರಾಮ ಸಂಗ್ರಹ ಯೋಜನೆ ಮತ್ತು ಸೌರ ಕೃಷಿಗೆ ಆದ್ಯತೆ,  ಕೃಷಿ ಮಾಡದ ಗ್ರಾಮೀಣ ಭೂಮಿಯನ್ನು ಅಭಿವೃದ್ಧಿ ಪಡಿಸಲು ಯೋಜನೆ ಒಳಗೊಂಡಿದೆ. ಕೃಷಿ-ಉಪಕರಣಗಳ ಪೂರೈಕೆದಾರರಿಗೆ ಬಾಡಿಗೆ ಮತ್ತು ಕಸ್ಟಮ್ ನೇಮಕಾತಿ ಆಧಾರದ ಮೇಲೆ ಬಳಸುವ ವಿಶೇಷ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ ಜಾರಿಯಾಗಲಿದೆ. ಈ ವ್ಯವಸ್ಥೆಯು ವಿವಿಧ ಕೃಷಿ ಉತ್ಪನ್ನಗಳ ಹವಾಮಾನ ಮತ್ತು ಮಾರುಕಟ್ಟೆ ಬೆಲೆಗಳ ಮಾಹಿತಿಯನ್ನು ನೀಡುತ್ತದೆ.

ರಸಗೊಬ್ಬರಗಳ ವಿವೇಕಯುತ ಬಳಕೆಯನ್ನು ಉತ್ತೇಜಿಸಲು “ಫಲೀಕರಣ” ಯೋಜನೆ ಬರಲಿದೆ. ಫಲೀಕರಣವು ಹನಿ ಅಥವಾ ತುಂತುರು ನೀರಾವರಿ ವ್ಯವಸ್ಥೆಯಲ್ಲಿ ರಸಗೊಬ್ಬರವನ್ನು ಕರಗಿಸಿ ನೀರಿನೊಂದಿಗೆ ವಿತರಿಸುವ ಪ್ರಕ್ರಿಯೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

19 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

20 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

22 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

22 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago