ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ರೈತರ ಹಾಗೂ ಕೃಷಿ ಬೆಳವಣಿಗೆ ಕಡೆಗೂ ಗಮನಹರಿಸಿದ್ದಾರೆ. ರೈತರ ಉತ್ಪನ್ನಗಳನ್ನು ಒಟ್ಟುಗೂಡಿಸಲು ಹೋಮ್ ಡೆಲಿವರಿ ಸ್ಪಾರ್ಟ್ಅಪ್ಗಳಿಗೆ ಪ್ರೋತ್ಸಾಹ ಮತ್ತು ರಾಷ್ಟ್ರೀಯ ಉಗ್ರಾಣ ಜಾಲವನ್ನು ಒಳಗೊಂಡಂತೆ ಭಾರತದ ದೀರ್ಘಕಾಲದ ಕೃಷಿ ಸಂಕಷ್ಟವನ್ನು ಎದುರಿಸಲು ವಿವಿಧ ಯೋಜನೆಯನ್ನು ಘೋಷಿಸಿದ್ದಾರೆ.
ರೈತರಿಂದ ನೇರ ಮಾರುಕಟ್ಟೆಗಾಗಿ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ, ಮೀನು ಮತ್ತು ಜಲಚರ ಸಾಕಣೆಗೆ ವಿಶಿಷ್ಟ ನಿಧಿ, ಕೃಷಿ ಉತ್ಪನ್ನದ ಗ್ರಾಮ ಸಂಗ್ರಹ ಯೋಜನೆ ಮತ್ತು ಸೌರ ಕೃಷಿಗೆ ಆದ್ಯತೆ, ಕೃಷಿ ಮಾಡದ ಗ್ರಾಮೀಣ ಭೂಮಿಯನ್ನು ಅಭಿವೃದ್ಧಿ ಪಡಿಸಲು ಯೋಜನೆ ಒಳಗೊಂಡಿದೆ. ಕೃಷಿ-ಉಪಕರಣಗಳ ಪೂರೈಕೆದಾರರಿಗೆ ಬಾಡಿಗೆ ಮತ್ತು ಕಸ್ಟಮ್ ನೇಮಕಾತಿ ಆಧಾರದ ಮೇಲೆ ಬಳಸುವ ವಿಶೇಷ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ ಜಾರಿಯಾಗಲಿದೆ. ಈ ವ್ಯವಸ್ಥೆಯು ವಿವಿಧ ಕೃಷಿ ಉತ್ಪನ್ನಗಳ ಹವಾಮಾನ ಮತ್ತು ಮಾರುಕಟ್ಟೆ ಬೆಲೆಗಳ ಮಾಹಿತಿಯನ್ನು ನೀಡುತ್ತದೆ.
ರಸಗೊಬ್ಬರಗಳ ವಿವೇಕಯುತ ಬಳಕೆಯನ್ನು ಉತ್ತೇಜಿಸಲು “ಫಲೀಕರಣ” ಯೋಜನೆ ಬರಲಿದೆ. ಫಲೀಕರಣವು ಹನಿ ಅಥವಾ ತುಂತುರು ನೀರಾವರಿ ವ್ಯವಸ್ಥೆಯಲ್ಲಿ ರಸಗೊಬ್ಬರವನ್ನು ಕರಗಿಸಿ ನೀರಿನೊಂದಿಗೆ ವಿತರಿಸುವ ಪ್ರಕ್ರಿಯೆಯಾಗಿದೆ.
ಮಲೆನಾಡು ಗಿಡ್ಡ ತಳಿ ವಿಶೇಷತೆ ಹಾಗೂ ಭಾರತೀಯ ಗೋತಳಿ ಉಳಿವಿಗೆ ಪ್ರಯತ್ನ ನಡೆಯಬೇಕಿದೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …
ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.
ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…