ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ರೈತರ ಹಾಗೂ ಕೃಷಿ ಬೆಳವಣಿಗೆ ಕಡೆಗೂ ಗಮನಹರಿಸಿದ್ದಾರೆ. ರೈತರ ಉತ್ಪನ್ನಗಳನ್ನು ಒಟ್ಟುಗೂಡಿಸಲು ಹೋಮ್ ಡೆಲಿವರಿ ಸ್ಪಾರ್ಟ್ಅಪ್ಗಳಿಗೆ ಪ್ರೋತ್ಸಾಹ ಮತ್ತು ರಾಷ್ಟ್ರೀಯ ಉಗ್ರಾಣ ಜಾಲವನ್ನು ಒಳಗೊಂಡಂತೆ ಭಾರತದ ದೀರ್ಘಕಾಲದ ಕೃಷಿ ಸಂಕಷ್ಟವನ್ನು ಎದುರಿಸಲು ವಿವಿಧ ಯೋಜನೆಯನ್ನು ಘೋಷಿಸಿದ್ದಾರೆ.
ರೈತರಿಂದ ನೇರ ಮಾರುಕಟ್ಟೆಗಾಗಿ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ, ಮೀನು ಮತ್ತು ಜಲಚರ ಸಾಕಣೆಗೆ ವಿಶಿಷ್ಟ ನಿಧಿ, ಕೃಷಿ ಉತ್ಪನ್ನದ ಗ್ರಾಮ ಸಂಗ್ರಹ ಯೋಜನೆ ಮತ್ತು ಸೌರ ಕೃಷಿಗೆ ಆದ್ಯತೆ, ಕೃಷಿ ಮಾಡದ ಗ್ರಾಮೀಣ ಭೂಮಿಯನ್ನು ಅಭಿವೃದ್ಧಿ ಪಡಿಸಲು ಯೋಜನೆ ಒಳಗೊಂಡಿದೆ. ಕೃಷಿ-ಉಪಕರಣಗಳ ಪೂರೈಕೆದಾರರಿಗೆ ಬಾಡಿಗೆ ಮತ್ತು ಕಸ್ಟಮ್ ನೇಮಕಾತಿ ಆಧಾರದ ಮೇಲೆ ಬಳಸುವ ವಿಶೇಷ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ ಜಾರಿಯಾಗಲಿದೆ. ಈ ವ್ಯವಸ್ಥೆಯು ವಿವಿಧ ಕೃಷಿ ಉತ್ಪನ್ನಗಳ ಹವಾಮಾನ ಮತ್ತು ಮಾರುಕಟ್ಟೆ ಬೆಲೆಗಳ ಮಾಹಿತಿಯನ್ನು ನೀಡುತ್ತದೆ.
ರಸಗೊಬ್ಬರಗಳ ವಿವೇಕಯುತ ಬಳಕೆಯನ್ನು ಉತ್ತೇಜಿಸಲು “ಫಲೀಕರಣ” ಯೋಜನೆ ಬರಲಿದೆ. ಫಲೀಕರಣವು ಹನಿ ಅಥವಾ ತುಂತುರು ನೀರಾವರಿ ವ್ಯವಸ್ಥೆಯಲ್ಲಿ ರಸಗೊಬ್ಬರವನ್ನು ಕರಗಿಸಿ ನೀರಿನೊಂದಿಗೆ ವಿತರಿಸುವ ಪ್ರಕ್ರಿಯೆಯಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…