Advertisement
ರಾಷ್ಟ್ರೀಯ

ಬಜೆಟ್‌ ಸುದ್ದಿ | ಮುಂಗಡ ಪತ್ರದಲ್ಲಿ ಕೃಷಿ ಬೆಳವಣಿಗೆಗೆ ಹಲವು ಯೋಜನೆ ಘೋಷಣೆ |

Share

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ ನಲ್ಲಿ ರೈತರ ಹಾಗೂ ಕೃಷಿ ಬೆಳವಣಿಗೆ ಕಡೆಗೂ ಗಮನಹರಿಸಿದ್ದಾರೆ.  ರೈತರ ಉತ್ಪನ್ನಗಳನ್ನು ಒಟ್ಟುಗೂಡಿಸಲು ಹೋಮ್ ಡೆಲಿವರಿ ಸ್ಪಾರ್ಟ್ಅಪ್‌ಗಳಿಗೆ ಪ್ರೋತ್ಸಾಹ ಮತ್ತು ರಾಷ್ಟ್ರೀಯ ಉಗ್ರಾಣ ಜಾಲವನ್ನು ಒಳಗೊಂಡಂತೆ ಭಾರತದ ದೀರ್ಘಕಾಲದ ಕೃಷಿ ಸಂಕಷ್ಟವನ್ನು ಎದುರಿಸಲು ವಿವಿಧ ಯೋಜನೆಯನ್ನು ಘೋಷಿಸಿದ್ದಾರೆ.

ರೈತರಿಂದ ನೇರ ಮಾರುಕಟ್ಟೆಗಾಗಿ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ, ಮೀನು ಮತ್ತು ಜಲಚರ ಸಾಕಣೆಗೆ ವಿಶಿಷ್ಟ ನಿಧಿ, ಕೃಷಿ ಉತ್ಪನ್ನದ ಗ್ರಾಮ ಸಂಗ್ರಹ ಯೋಜನೆ ಮತ್ತು ಸೌರ ಕೃಷಿಗೆ ಆದ್ಯತೆ,  ಕೃಷಿ ಮಾಡದ ಗ್ರಾಮೀಣ ಭೂಮಿಯನ್ನು ಅಭಿವೃದ್ಧಿ ಪಡಿಸಲು ಯೋಜನೆ ಒಳಗೊಂಡಿದೆ. ಕೃಷಿ-ಉಪಕರಣಗಳ ಪೂರೈಕೆದಾರರಿಗೆ ಬಾಡಿಗೆ ಮತ್ತು ಕಸ್ಟಮ್ ನೇಮಕಾತಿ ಆಧಾರದ ಮೇಲೆ ಬಳಸುವ ವಿಶೇಷ ಮೊಬೈಲ್ ಅಪ್ಲಿಕೇಶನ್ ಆಧಾರಿತ ವ್ಯವಸ್ಥೆ ಜಾರಿಯಾಗಲಿದೆ. ಈ ವ್ಯವಸ್ಥೆಯು ವಿವಿಧ ಕೃಷಿ ಉತ್ಪನ್ನಗಳ ಹವಾಮಾನ ಮತ್ತು ಮಾರುಕಟ್ಟೆ ಬೆಲೆಗಳ ಮಾಹಿತಿಯನ್ನು ನೀಡುತ್ತದೆ.

ರಸಗೊಬ್ಬರಗಳ ವಿವೇಕಯುತ ಬಳಕೆಯನ್ನು ಉತ್ತೇಜಿಸಲು “ಫಲೀಕರಣ” ಯೋಜನೆ ಬರಲಿದೆ. ಫಲೀಕರಣವು ಹನಿ ಅಥವಾ ತುಂತುರು ನೀರಾವರಿ ವ್ಯವಸ್ಥೆಯಲ್ಲಿ ರಸಗೊಬ್ಬರವನ್ನು ಕರಗಿಸಿ ನೀರಿನೊಂದಿಗೆ ವಿತರಿಸುವ ಪ್ರಕ್ರಿಯೆಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

1 hour ago

ತಕ್ಷಣ ಪೂರ್ಣಾವಧಿ ಕೃಷಿ ಸಚಿವರನ್ನು ನೇಮಿಸಿ – ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಆಗ್ರಹ

ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…

8 hours ago

ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆಯಲ್ಲಿ ಯೋಗ ಹಾಗೂ ಸ್ವಚ್ಛತಾ ಅಭಿಯಾನ

ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…

8 hours ago

ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆ – ದೇಶದ ಕೃಷಿಯ ಹೃದಯಭಾಗದಲ್ಲಿ ಮೋಡಗಳೇ ಇಲ್ಲ..!

ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…

9 hours ago

ಕೇರಳ ಬಜೆಟ್‌ನಲ್ಲಿ ರಬ್ಬರ್‌ ಬೆಳೆಗಾರರಿಗೆ ಬಂಪರ್‌ ಸಿಹಿ ಸುದ್ದಿ- ಬೆಂಬಲ ಬೆಲೆ ₹250ಕ್ಕೆ ಏರಿಕೆ

ಕೇರಳ ಸರ್ಕಾರ ರಬ್ಬರ್‌ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…

15 hours ago