ಬಜೆಟ್ 2026-27 : ರಸಗೊಬ್ಬರಗಳಿಗೆ ₹1.71 ಲಕ್ಷ ಕೋಟಿ ಅನುದಾನ, ರೈತರಿಗೆ ಕೈಗೆಟುಕುವ ದರದಲ್ಲಿ ಪೂರೈಕೆ ಖಚಿತ – ಕೇಂದ್ರ ಸರ್ಕಾರ

February 4, 2026
8:38 AM

ಕೇಂದ್ರ ಬಜೆಟ್ 2026-27ರಲ್ಲಿ ರಸಗೊಬ್ಬರ ಇಲಾಖೆಗೆ ₹1.71 ಲಕ್ಷ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ರಸಾಯನ ಹಾಗೂ ರಸಗೊಬ್ಬರ ಸಚಿವಾಲಯ ಮಾಹಿತಿ ನೀಡಿದೆ. ಈ ಅನುದಾನವು ದೇಶದ ರೈತರಿಗೆ ಸಮಯಕ್ಕೆ ಸರಿಯಾಗಿ ಮತ್ತು ಕೈಗೆಟುಕುವ ದರದಲ್ಲಿ ರಸಗೊಬ್ಬರ ಪೂರೈಕೆಯನ್ನು ಖಚಿತಪಡಿಸಲು ನೆರವಾಗಲಿದೆ ಎಂದು ಸಚಿವಾಲಯ ಹೇಳಿದೆ.

ಬಜೆಟ್‌ನಲ್ಲಿ ಪೋಷಕಾಂಶ ಆಧಾರಿತ ಸಹಾಯಧನ (NBS) ಯೋಜನೆಯಡಿ ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳಿಗೆ ಸರ್ಕಾರ ಬೆಂಬಲ ಮುಂದುವರಿಸಿದೆ. ಇದು , NPK ಪೋಷಕಾಂಶಗಳ ಸಮತೋಲನ ಬಳಕೆ, ಮಣ್ಣಿನ ಗುಣಮಟ್ಟ ಕಾಪಾಡಿಕೊಳ್ಳುವುದು ,ಕೃಷಿ ಉತ್ಪಾದಕತೆ ಹೆಚ್ಚಿಸುವುದು ಎಂಬ ಉದ್ದೇಶ ಹೊಂದಿದೆ ಎಂದು ಸಚಿವಾಲಯ ತಿಳಿಸಿದೆ.

ಬಜೆಟ್‌ನಲ್ಲಿ ಸಹಾಯಧನ ನಿರ್ವಹಣಾ ವ್ಯವಸ್ಥೆ(Fertilizer Subsidy Management System) ಸ್ಥಾಪನೆಗೆ ಮತ್ತು ಮಾಹಿತಿ ತಂತ್ರಜ್ಞಾನ (ICT) ಸಂಬಂಧಿತ ವೆಚ್ಚಗಳಿಗೆ ಸಹ ಅನುದಾನ ಒದಗಿಸಲಾಗಿದೆ. ಇದರಿಂದ ರಸಗೊಬ್ಬರ ವಿತರಣೆ ಪಾರದರ್ಶಕವಾಗಲು ಮತ್ತು ಸಮಯಬದ್ಧವಾಗಲು ಸಾಧ್ಯ ಎಂದು ಹೇಳಲಾಗಿದೆ. ಸರ್ಕಾರ ಜೈವಿಕ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಲು Organic Fertilizers Promotion Policy ಅಡಿಯಲ್ಲಿ ಮಾರುಕಟ್ಟೆ ಅಭಿವೃದ್ಧಿ ನೆರವು, ಸಂಶೋಧನೆ ಮತ್ತು ಅಭಿವೃದ್ಧಿಗೆ ಬೆಂಬಲ, ಆರ್ಗ್ಯಾನಿಕ್ ಫಾರ್ಮಿಂಗ್ ಪ್ರೋತ್ಸಾಹ ಎಂಬ ಯೋಜನೆಗಳಿಗೆ ಅನುದಾನ ಮೀಸಲಿಟ್ಟಿದೆ.  ಕೇಂದ್ರ ಸರ್ಕಾರ ರೈತರಿಗೆ ಕಡಿಮೆ ದರದಲ್ಲಿ ರಸಗೊಬ್ಬರಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸುವ ತನ್ನ ಬದ್ಧತೆಯನ್ನು ಬಜೆಟ್ ಮತ್ತೊಮ್ಮೆ ದೃಢಪಡಿಸಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror