ಕೇಂದ್ರ ಬಜೆಟ್ 2026-27ರಲ್ಲಿ ರಸಗೊಬ್ಬರ ಇಲಾಖೆಗೆ ₹1.71 ಲಕ್ಷ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ರಸಾಯನ ಹಾಗೂ ರಸಗೊಬ್ಬರ ಸಚಿವಾಲಯ ಮಾಹಿತಿ ನೀಡಿದೆ. ಈ ಅನುದಾನವು ದೇಶದ ರೈತರಿಗೆ ಸಮಯಕ್ಕೆ ಸರಿಯಾಗಿ ಮತ್ತು ಕೈಗೆಟುಕುವ ದರದಲ್ಲಿ ರಸಗೊಬ್ಬರ ಪೂರೈಕೆಯನ್ನು ಖಚಿತಪಡಿಸಲು ನೆರವಾಗಲಿದೆ ಎಂದು ಸಚಿವಾಲಯ ಹೇಳಿದೆ.
ಬಜೆಟ್ನಲ್ಲಿ ಪೋಷಕಾಂಶ ಆಧಾರಿತ ಸಹಾಯಧನ (NBS) ಯೋಜನೆಯಡಿ ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳಿಗೆ ಸರ್ಕಾರ ಬೆಂಬಲ ಮುಂದುವರಿಸಿದೆ. ಇದು , NPK ಪೋಷಕಾಂಶಗಳ ಸಮತೋಲನ ಬಳಕೆ, ಮಣ್ಣಿನ ಗುಣಮಟ್ಟ ಕಾಪಾಡಿಕೊಳ್ಳುವುದು ,ಕೃಷಿ ಉತ್ಪಾದಕತೆ ಹೆಚ್ಚಿಸುವುದು ಎಂಬ ಉದ್ದೇಶ ಹೊಂದಿದೆ ಎಂದು ಸಚಿವಾಲಯ ತಿಳಿಸಿದೆ.
ಬಜೆಟ್ನಲ್ಲಿ ಸಹಾಯಧನ ನಿರ್ವಹಣಾ ವ್ಯವಸ್ಥೆ(Fertilizer Subsidy Management System) ಸ್ಥಾಪನೆಗೆ ಮತ್ತು ಮಾಹಿತಿ ತಂತ್ರಜ್ಞಾನ (ICT) ಸಂಬಂಧಿತ ವೆಚ್ಚಗಳಿಗೆ ಸಹ ಅನುದಾನ ಒದಗಿಸಲಾಗಿದೆ. ಇದರಿಂದ ರಸಗೊಬ್ಬರ ವಿತರಣೆ ಪಾರದರ್ಶಕವಾಗಲು ಮತ್ತು ಸಮಯಬದ್ಧವಾಗಲು ಸಾಧ್ಯ ಎಂದು ಹೇಳಲಾಗಿದೆ. ಸರ್ಕಾರ ಜೈವಿಕ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಲು Organic Fertilizers Promotion Policy ಅಡಿಯಲ್ಲಿ ಮಾರುಕಟ್ಟೆ ಅಭಿವೃದ್ಧಿ ನೆರವು, ಸಂಶೋಧನೆ ಮತ್ತು ಅಭಿವೃದ್ಧಿಗೆ ಬೆಂಬಲ, ಆರ್ಗ್ಯಾನಿಕ್ ಫಾರ್ಮಿಂಗ್ ಪ್ರೋತ್ಸಾಹ ಎಂಬ ಯೋಜನೆಗಳಿಗೆ ಅನುದಾನ ಮೀಸಲಿಟ್ಟಿದೆ. ಕೇಂದ್ರ ಸರ್ಕಾರ ರೈತರಿಗೆ ಕಡಿಮೆ ದರದಲ್ಲಿ ರಸಗೊಬ್ಬರಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸುವ ತನ್ನ ಬದ್ಧತೆಯನ್ನು ಬಜೆಟ್ ಮತ್ತೊಮ್ಮೆ ದೃಢಪಡಿಸಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…