Advertisement
MIRROR FOCUS

ಬಜೆಟ್ 2026-27 : ರಸಗೊಬ್ಬರಗಳಿಗೆ ₹1.71 ಲಕ್ಷ ಕೋಟಿ ಅನುದಾನ, ರೈತರಿಗೆ ಕೈಗೆಟುಕುವ ದರದಲ್ಲಿ ಪೂರೈಕೆ ಖಚಿತ – ಕೇಂದ್ರ ಸರ್ಕಾರ

Share

ಕೇಂದ್ರ ಬಜೆಟ್ 2026-27ರಲ್ಲಿ ರಸಗೊಬ್ಬರ ಇಲಾಖೆಗೆ ₹1.71 ಲಕ್ಷ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ರಸಾಯನ ಹಾಗೂ ರಸಗೊಬ್ಬರ ಸಚಿವಾಲಯ ಮಾಹಿತಿ ನೀಡಿದೆ. ಈ ಅನುದಾನವು ದೇಶದ ರೈತರಿಗೆ ಸಮಯಕ್ಕೆ ಸರಿಯಾಗಿ ಮತ್ತು ಕೈಗೆಟುಕುವ ದರದಲ್ಲಿ ರಸಗೊಬ್ಬರ ಪೂರೈಕೆಯನ್ನು ಖಚಿತಪಡಿಸಲು ನೆರವಾಗಲಿದೆ ಎಂದು ಸಚಿವಾಲಯ ಹೇಳಿದೆ.

ಬಜೆಟ್‌ನಲ್ಲಿ ಪೋಷಕಾಂಶ ಆಧಾರಿತ ಸಹಾಯಧನ (NBS) ಯೋಜನೆಯಡಿ ಫಾಸ್ಫೇಟಿಕ್ ಮತ್ತು ಪೊಟ್ಯಾಸಿಕ್ ರಸಗೊಬ್ಬರಗಳಿಗೆ ಸರ್ಕಾರ ಬೆಂಬಲ ಮುಂದುವರಿಸಿದೆ. ಇದು , NPK ಪೋಷಕಾಂಶಗಳ ಸಮತೋಲನ ಬಳಕೆ, ಮಣ್ಣಿನ ಗುಣಮಟ್ಟ ಕಾಪಾಡಿಕೊಳ್ಳುವುದು ,ಕೃಷಿ ಉತ್ಪಾದಕತೆ ಹೆಚ್ಚಿಸುವುದು ಎಂಬ ಉದ್ದೇಶ ಹೊಂದಿದೆ ಎಂದು ಸಚಿವಾಲಯ ತಿಳಿಸಿದೆ.

ಬಜೆಟ್‌ನಲ್ಲಿ ಸಹಾಯಧನ ನಿರ್ವಹಣಾ ವ್ಯವಸ್ಥೆ(Fertilizer Subsidy Management System) ಸ್ಥಾಪನೆಗೆ ಮತ್ತು ಮಾಹಿತಿ ತಂತ್ರಜ್ಞಾನ (ICT) ಸಂಬಂಧಿತ ವೆಚ್ಚಗಳಿಗೆ ಸಹ ಅನುದಾನ ಒದಗಿಸಲಾಗಿದೆ. ಇದರಿಂದ ರಸಗೊಬ್ಬರ ವಿತರಣೆ ಪಾರದರ್ಶಕವಾಗಲು ಮತ್ತು ಸಮಯಬದ್ಧವಾಗಲು ಸಾಧ್ಯ ಎಂದು ಹೇಳಲಾಗಿದೆ. ಸರ್ಕಾರ ಜೈವಿಕ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಲು Organic Fertilizers Promotion Policy ಅಡಿಯಲ್ಲಿ ಮಾರುಕಟ್ಟೆ ಅಭಿವೃದ್ಧಿ ನೆರವು, ಸಂಶೋಧನೆ ಮತ್ತು ಅಭಿವೃದ್ಧಿಗೆ ಬೆಂಬಲ, ಆರ್ಗ್ಯಾನಿಕ್ ಫಾರ್ಮಿಂಗ್ ಪ್ರೋತ್ಸಾಹ ಎಂಬ ಯೋಜನೆಗಳಿಗೆ ಅನುದಾನ ಮೀಸಲಿಟ್ಟಿದೆ.  ಕೇಂದ್ರ ಸರ್ಕಾರ ರೈತರಿಗೆ ಕಡಿಮೆ ದರದಲ್ಲಿ ರಸಗೊಬ್ಬರಗಳನ್ನು ಸಮಯಕ್ಕೆ ಸರಿಯಾಗಿ ಒದಗಿಸುವ ತನ್ನ ಬದ್ಧತೆಯನ್ನು ಬಜೆಟ್ ಮತ್ತೊಮ್ಮೆ ದೃಢಪಡಿಸಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

5 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

9 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago