Advertisement
ಸುದ್ದಿಗಳು

ಬಜೆಟ್ 2026 | ಭಾರತೀಯ ಕೃಷಿಯ ಪುನರ್ರಚನೆ

Share

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026 ರ ಬಜೆಟ್ ಮಂಡನೆಗೆ ಸಿದ್ಧರಾಗುತ್ತಿದ್ದಂತೆ, ಭಾರತೀಯ ಕೃಷಿಯಲ್ಲಿ ಕೆಲವು ನಿರ್ಣಾಯಕ ಬದಲಾವಣೆಯ ಹಂತದಲ್ಲಿದೆ. ಹೀಗಾಗಿ ಹಣಕಾಸು ಸಚಿವರು ಹಾಗೂ ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕಾದ ಹಲವು ಅಂಶಗಳು ಇವೆ. ಇದರಲ್ಲಿ ಸಬ್ಸಿಡಿಗಳಿಂದ ಹಿಡಿದು ಫಲಿತಾಂಶ ಆಧಾರಿತ, ಹವಾಮಾನ ಆಧಾರಿತ,  ಸ್ಮಾರ್ಟ್ ಕೃಷಿಯವರೆಗೆ ಭಾರತದ ಕೃಷಿ-ಆರ್ಥಿಕತೆಯನ್ನು ಗಮನದಲ್ಲಿರಿಸಿಕೊಳ್ಳಬೇಕಿದೆ.

ವಿಕಸಿತ ಭಾರತದ ದೃಷ್ಟಿಕೋನದಿಂದಲೂ ಬಜೆಟ್‌ ಗಮನಿಸಿದರೆ, ರಚನಾತ್ಮಕ ಸುಧಾರಣೆಯ ಕಡೆಗೆ ಗಮನಹರಿಸಬೇಕಾದ ಅಗತ್ಯ ಇದೆ.  ಸಬ್ಸೀಡಿ ಹಂಚಿಕೆಯಲ್ಲೇ ಕಾಲ ಕಳೆಯುವುದರ ಜೊತೆಗೇ ಕೃಷಿಯಲ್ಲಿ ಹೆಚ್ಚಿನ ಉತ್ಪಾದಕತೆ, ಹವಾಮಾನ ವೈಪರೀತ್ಯದಿಂದ ರಕ್ಷಣೆ ಮತ್ತು ಜಾಗತಿಕವಾಗಿ ಸ್ಪರ್ಧಾತ್ಮಕ ಬೆಳವಣಿಗೆಯ ಕಡೆಗೆ ಕೃಷಿಯನ್ನು ಪರಿವರ್ತಿಸಲು ನೆರವು, ಮಾರುಕಟ್ಟೆಗಳು ಮತ್ತು ಆಧುನಿಕ ವಿಜ್ಞಾನವನ್ನು ಜೋಡಿಸುವುದು ಅಗತ್ಯ ಇದೆ.  ಕೃಷಿ ನೀತಿ, ಶೈಕ್ಷಣಿಕ ಮತ್ತು ಕೃಷಿ ಉದ್ಯಮದ ಕಡೆಗೆ ಗಮನಹರಿಸಬೇಕಾಗಿದೆ.  ಸಬ್ಸೀಡಿಗಳನ್ನು ನೀಡಿಯೂ ಕೃಷಿ ಉತ್ಪಾದಕತೆಯಲ್ಲಿ ಹೆಚ್ಚಳವಾಗಿಲ್ಲ, ಹವಾಮಾನ ವಿಪರೀತವಾಗಿ ಸಮಸ್ಯೆ ತಂದಿದೆ.  ಫಲಿತಾಂಶ ಆಧಾರಿತವಾಗಿ ಕೃಷಿ ಬೆಳೆಯುತ್ತಿಲ್ಲ . ಈಗ ಡಿಜಿಟಲ್ ಆಗಿಯೂ ಕೃಷಿ ಬೆಳೆವಣಿಗೆಯನ್ನು ಪರಿಶೀಲಿಸಬಹುದಾದ ಅಗತ್ಯ ಇದೆ.  ರೈತರ ಜೀವನ, ಮಣ್ಣಿನ ದೃಷ್ಟಿಯಿಂದಲೂ ಗಮನಿಸಿದಾಗ ಮಣ್ಣು ಮತ್ತು ನೀರಿನ ಆರೋಗ್ಯದ ರಕ್ಷಣೆಗೆ ಆದ್ಯತೆ ಅಗತ್ಯ ಇದೆ.

ಈ ಎಲ್ಲಾ ಕಾರಣದಿಂದ ಈ ಬಾರಿ ಹವಾಮಾನದ ನಿಖರತೆಗೆ ಎಐ, ನಿಖರ ಪೋಷಣೆ, ಡಿಜಿಟಲ್ ಭೂ ದಾಖಲೆಗಳು, ಮೌಲ್ಯವರ್ಧಿತ ರಫ್ತುಗಳನ್ನು ಸಂಯೋಜಿಸುವ ಮಿಷನ್,  ಪೋಷಕಾಂಶ ದಕ್ಷತೆಯ ಸೂಚ್ಯಂಕಗಳಿಂದ ಕೃಷಿ ಡ್ರೋನ್‌ಗಳು, ಡಿಜಿಟಲ್ ಫಾರ್ಮ್ ಐಡಿಗಳು, ನೀರಾವರಿ ಮತ್ತು ತ್ಯಾಜ್ಯ-ಮುಕ್ತ ಮಾರುಕಟ್ಟೆ ವ್ಯವಸ್ಥೆ,  ಉತ್ಪಾದಕತೆ, ಸುಸ್ಥಿರತೆ ಮತ್ತು ಆದಾಯದ ಫಲಿತಾಂಶಗಳು ಸೇರಿದಂತೆ ಭಾರತೀಯ ಕೃಷಿ ಬೆಳವಣಿಗೆಗೆ ಹೆಚ್ಚಿನ ತಾಂತ್ರಿಕ ಅಗತ್ಯಗಳೂ ಇವೆ. ಬಜೆಟ್‌ ರೂಪಿಸುವ ವೇಳೆ ಇಂತಹ ಆದ್ಯತೆಗಳ ಕಡೆಗೂ ಗಮನ ಅಗತ್ಯವಿದೆ.

ಮೂಲ : ಎಗ್ರೋ ಸ್ಪೆಕ್ಟ್ರಂ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-03-2026 | ಮಾರ್ಚ್‌ 14–15 ರಿಂದ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್‌ 14 ಅಥವಾ 15ರಿಂದ ಹಲವೆಡೆ…

8 hours ago

ಗ್ಯಾಸ್‌ ಸರಬರಾಜು ಆತಂಕ : ಹೋಟೆಲ್‌ ಉದ್ಯಮಕ್ಕೆ ಹೊಡೆತ, ಗೃಹ ಬಳಕೆದಾರರಿಗೆ ಆದ್ಯತೆ

ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್‌ ಮತ್ತು ಆಹಾರ ವಿತರಣೆ…

8 hours ago

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

12 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

12 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

12 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

12 hours ago