ಕಳೆದ 10 ವರ್ಷದಲ್ಲಿ ಕೃಷಿ, ಹೈನುಗಾರಿಕೆ, ಪೂರಕ ವಲಯಗಳಿಗೆ ಬಜೆಟ್ ನಲ್ಲಿ ಅನುದಾನ ಗಣನೀಯ ಏರಿಕೆಯಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಲೋಕಸಭೆಯಲ್ಲಿ ಹೇಳಿದ್ದಾರೆ.………ಮುಂದೆ ಓದಿ……..
2025-26ರ ಸಾಲಿನಲ್ಲಿ ಕೃಷಿ ವಲಯಕ್ಕೆ ನೀಡಲಾದ ಬಜೆಟ್ ಅನುದಾನ ಕುರಿತ ಚರ್ಚೆಯಲ್ಲಿ ಉತ್ತರ ನೀಡಿದ ಅವರು, ದೇಶದ ಅರ್ಥವ್ಯವಸ್ಥೆಯ ಆತ್ಮದಂತೆ ಇರುವ ರೈತರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕಟಿಬದ್ಧವಾಗಿದೆ ಎಂದರು. ಸ್ವಾತಂತ್ರ್ಯ ನಂತರ 60 ವರ್ಷಗಳಲ್ಲಿ 60 ಸಾವಿರ ಕೋಟಿ ರೂಪಾಯಿ ಕೃಷಿ ಸಾಲ ಮನ್ನಾ ಕುರಿತು ಪ್ರಚಾರ ಮಾಡಲಾಗುತ್ತಿದೆ. ಆದರೆ, 2014ರ ನಂತರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 3 ಲಕ್ಷ 68 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಯೋಜನೆಗಳಿಗೆ ಬಿಡುಗಡೆಯಾದ ಹಣದಲ್ಲಿ ಕೇವಲ ಶೇಕಡ 15ರಷ್ಟು ಮಾತ್ರ ಫಲಾನುಭವಿಗಳನ್ನು ತಲುಪುತ್ತಿತ್ತು. ಆದರೆ, ಎನ್ ಡಿಎ ಸರ್ಕಾರದ ಅವಧಿಯಲ್ಲಿ ಡಿಬಿಟಿ ಮೂಲಕ ಶೇಕಡ 100ರಷ್ಟು ಹಣ ಫಲಾನುಭವಿಗಳಿಗೆ ತಲುಪುವುದನ್ನು ಖಾತರಿಪಡಿಸಲಾಗಿದೆ ಎಂದರು. ಕೃಷಿ ವಲಯದಲ್ಲಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸಣ್ಣ ಹಿಡುವಳಿದಾರರು ಹಾಗೂ ಅಂಚಿನ ರೈತರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…