ಕಳೆದ 10 ವರ್ಷದಲ್ಲಿ ಕೃಷಿ, ಹೈನುಗಾರಿಕೆ, ಪೂರಕ ವಲಯಗಳಿಗೆ ಬಜೆಟ್ ನಲ್ಲಿ ಅನುದಾನ ಗಣನೀಯ ಏರಿಕೆಯಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಲೋಕಸಭೆಯಲ್ಲಿ ಹೇಳಿದ್ದಾರೆ.………ಮುಂದೆ ಓದಿ……..
2025-26ರ ಸಾಲಿನಲ್ಲಿ ಕೃಷಿ ವಲಯಕ್ಕೆ ನೀಡಲಾದ ಬಜೆಟ್ ಅನುದಾನ ಕುರಿತ ಚರ್ಚೆಯಲ್ಲಿ ಉತ್ತರ ನೀಡಿದ ಅವರು, ದೇಶದ ಅರ್ಥವ್ಯವಸ್ಥೆಯ ಆತ್ಮದಂತೆ ಇರುವ ರೈತರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕಟಿಬದ್ಧವಾಗಿದೆ ಎಂದರು. ಸ್ವಾತಂತ್ರ್ಯ ನಂತರ 60 ವರ್ಷಗಳಲ್ಲಿ 60 ಸಾವಿರ ಕೋಟಿ ರೂಪಾಯಿ ಕೃಷಿ ಸಾಲ ಮನ್ನಾ ಕುರಿತು ಪ್ರಚಾರ ಮಾಡಲಾಗುತ್ತಿದೆ. ಆದರೆ, 2014ರ ನಂತರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 3 ಲಕ್ಷ 68 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಯೋಜನೆಗಳಿಗೆ ಬಿಡುಗಡೆಯಾದ ಹಣದಲ್ಲಿ ಕೇವಲ ಶೇಕಡ 15ರಷ್ಟು ಮಾತ್ರ ಫಲಾನುಭವಿಗಳನ್ನು ತಲುಪುತ್ತಿತ್ತು. ಆದರೆ, ಎನ್ ಡಿಎ ಸರ್ಕಾರದ ಅವಧಿಯಲ್ಲಿ ಡಿಬಿಟಿ ಮೂಲಕ ಶೇಕಡ 100ರಷ್ಟು ಹಣ ಫಲಾನುಭವಿಗಳಿಗೆ ತಲುಪುವುದನ್ನು ಖಾತರಿಪಡಿಸಲಾಗಿದೆ ಎಂದರು. ಕೃಷಿ ವಲಯದಲ್ಲಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸಣ್ಣ ಹಿಡುವಳಿದಾರರು ಹಾಗೂ ಅಂಚಿನ ರೈತರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…