ಕಳೆದ 10 ವರ್ಷದಲ್ಲಿ ಕೃಷಿ, ಹೈನುಗಾರಿಕೆ, ಪೂರಕ ವಲಯಗಳಿಗೆ ಬಜೆಟ್ ನಲ್ಲಿ ಅನುದಾನ ಗಣನೀಯ ಏರಿಕೆಯಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಲೋಕಸಭೆಯಲ್ಲಿ ಹೇಳಿದ್ದಾರೆ.………ಮುಂದೆ ಓದಿ……..
2025-26ರ ಸಾಲಿನಲ್ಲಿ ಕೃಷಿ ವಲಯಕ್ಕೆ ನೀಡಲಾದ ಬಜೆಟ್ ಅನುದಾನ ಕುರಿತ ಚರ್ಚೆಯಲ್ಲಿ ಉತ್ತರ ನೀಡಿದ ಅವರು, ದೇಶದ ಅರ್ಥವ್ಯವಸ್ಥೆಯ ಆತ್ಮದಂತೆ ಇರುವ ರೈತರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕಟಿಬದ್ಧವಾಗಿದೆ ಎಂದರು. ಸ್ವಾತಂತ್ರ್ಯ ನಂತರ 60 ವರ್ಷಗಳಲ್ಲಿ 60 ಸಾವಿರ ಕೋಟಿ ರೂಪಾಯಿ ಕೃಷಿ ಸಾಲ ಮನ್ನಾ ಕುರಿತು ಪ್ರಚಾರ ಮಾಡಲಾಗುತ್ತಿದೆ. ಆದರೆ, 2014ರ ನಂತರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 3 ಲಕ್ಷ 68 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಯೋಜನೆಗಳಿಗೆ ಬಿಡುಗಡೆಯಾದ ಹಣದಲ್ಲಿ ಕೇವಲ ಶೇಕಡ 15ರಷ್ಟು ಮಾತ್ರ ಫಲಾನುಭವಿಗಳನ್ನು ತಲುಪುತ್ತಿತ್ತು. ಆದರೆ, ಎನ್ ಡಿಎ ಸರ್ಕಾರದ ಅವಧಿಯಲ್ಲಿ ಡಿಬಿಟಿ ಮೂಲಕ ಶೇಕಡ 100ರಷ್ಟು ಹಣ ಫಲಾನುಭವಿಗಳಿಗೆ ತಲುಪುವುದನ್ನು ಖಾತರಿಪಡಿಸಲಾಗಿದೆ ಎಂದರು. ಕೃಷಿ ವಲಯದಲ್ಲಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸಣ್ಣ ಹಿಡುವಳಿದಾರರು ಹಾಗೂ ಅಂಚಿನ ರೈತರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…