Advertisement
MIRROR FOCUS

ಬಜೆಟ್ ನಲ್ಲಿ ಕೃಷಿ, ಪೂರಕ ವಲಯಕ್ಕೆಅನುದಾನ ಹೆಚ್ಚಳ | ಕೃಷಿ ಯಾಂತ್ರೀಕರಣಕ್ಕೆ ಆದ್ಯತೆ

Share

ಕಳೆದ 10 ವರ್ಷದಲ್ಲಿ ಕೃಷಿ, ಹೈನುಗಾರಿಕೆ, ಪೂರಕ ವಲಯಗಳಿಗೆ ಬಜೆಟ್ ನಲ್ಲಿ  ಅನುದಾನ ಗಣನೀಯ ಏರಿಕೆಯಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಲೋಕಸಭೆಯಲ್ಲಿ ಹೇಳಿದ್ದಾರೆ.………ಮುಂದೆ ಓದಿ……..

2025-26ರ ಸಾಲಿನಲ್ಲಿ ಕೃಷಿ ವಲಯಕ್ಕೆ ನೀಡಲಾದ ಬಜೆಟ್ ಅನುದಾನ ಕುರಿತ ಚರ್ಚೆಯಲ್ಲಿ ಉತ್ತರ ನೀಡಿದ ಅವರು, ದೇಶದ ಅರ್ಥವ್ಯವಸ್ಥೆಯ ಆತ್ಮದಂತೆ ಇರುವ ರೈತರ ಸಮಗ್ರ ಅಭಿವೃದ್ಧಿಗೆ ಸರ್ಕಾರ ಕಟಿಬದ್ಧವಾಗಿದೆ ಎಂದರು. ಸ್ವಾತಂತ್ರ್ಯ ನಂತರ 60 ವರ್ಷಗಳಲ್ಲಿ 60 ಸಾವಿರ ಕೋಟಿ ರೂಪಾಯಿ ಕೃಷಿ ಸಾಲ ಮನ್ನಾ ಕುರಿತು ಪ್ರಚಾರ ಮಾಡಲಾಗುತ್ತಿದೆ. ಆದರೆ, 2014ರ ನಂತರ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 3 ಲಕ್ಷ 68 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಯೋಜನೆಗಳಿಗೆ  ಬಿಡುಗಡೆಯಾದ ಹಣದಲ್ಲಿ  ಕೇವಲ ಶೇಕಡ 15ರಷ್ಟು ಮಾತ್ರ ಫಲಾನುಭವಿಗಳನ್ನು ತಲುಪುತ್ತಿತ್ತು. ಆದರೆ, ಎನ್ ಡಿಎ ಸರ್ಕಾರದ ಅವಧಿಯಲ್ಲಿ ಡಿಬಿಟಿ ಮೂಲಕ ಶೇಕಡ 100ರಷ್ಟು ಹಣ ಫಲಾನುಭವಿಗಳಿಗೆ ತಲುಪುವುದನ್ನು ಖಾತರಿಪಡಿಸಲಾಗಿದೆ ಎಂದರು. ಕೃಷಿ ವಲಯದಲ್ಲಿ ಯಾಂತ್ರೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಸಣ್ಣ ಹಿಡುವಳಿದಾರರು ಹಾಗೂ ಅಂಚಿನ ರೈತರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡಿಯುವುದಿಲ್ಲ

ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…

9 hours ago

ರಾಜ್ಯದ ಹಲವೆಡೆ ಮಳೆ; ಕುಕನೂರಿನಲ್ಲಿ 7 ಸೆಂ.ಮೀ ಮಳೆ

ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…

9 hours ago

ಹವಾಮಾನ ವರದಿ | 07-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು : ಕರಾವಳಿ-ಮಲೆನಾಡಿನಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ,

08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…

1 day ago

ಕೆಲವು ರಾಜ್ಯಗಳಲ್ಲಿ ಸುಡುವ ಬಿಸಿಲು, ಇನ್ನೂ ಕೆಲವು ಕಡೆ ಮಳೆ – ದೇಶಾದ್ಯಂತ ಹವಾಮಾನ ವೈಪರೀತ್ಯ

ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…

1 day ago

ಪರಿಸರ ಸಂರಕ್ಷಣೆಯಿಂದ ಮಾತ್ರ ಸುಸ್ಥಿರ ಆರೋಗ್ಯ ಸಾಧ್ಯ

ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…

1 day ago

ಸ್ಥಳೀಯ ಸಂಸ್ಥೆ ಚುನಾವಣೆ ಶೀಘ್ರ – ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…

1 day ago