ಮೋದಿ ನೇತೃತ್ವದ ಎನ್ಡಿಎ ಸರ್ಕಾರದ ಈ ವರ್ಷದ ಮೊದಲ ಬಜೆಟ್ನ್ನು ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಉದ್ಯೋಗ ಮತ್ತು ಬೆಲೆ ಏರಿಕೆ ಕುರಿತು ಪ್ರತಿಪಕ್ಷಗಳ ಕಠಿಣ ಪ್ರಶ್ನೆಗಳ ನಡುವೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇಂದು ಮೋದಿ 3.0 ರ ಮೊದಲ ಕೇಂದ್ರ ಬಜೆಟ್ (Union Budget 2024) ಅನ್ನು ಮಂಡಿಸಲಿದ್ದಾರೆ. ಸೀತಾರಾಮನ್ ಅವರು ತಮ್ಮ ಏಳನೇ ಕೇಂದ್ರ ಬಜೆಟ್ ಮಂಡನೆಯಲ್ಲಿ, ಹೊಸ ಉತ್ಪಾದನಾ ಸೌಲಭ್ಯಗಳಿಗೆ ತೆರಿಗೆ ಪ್ರೋತ್ಸಾಹವನ್ನು ನೀಡುವ ಸಾಧ್ಯತೆಯಿದೆ. ಉದ್ಯೋಗಗಳನ್ನು ಸೃಷ್ಟಿಸಲು ಕ್ಷೇತ್ರಗಳಾದ್ಯಂತ ಸ್ಥಳೀಯ ಸಂಗ್ರಹಣೆಯನ್ನು ಉತ್ತೇಜಿಸುವ ಸಾಧ್ಯತೆಯಿದೆ.
ವಿತ್ತ ಸಚಿವರು ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯಿತಿಯನ್ನು ಘೋಷಿಸುತ್ತಾರೆಯೇ ಎಂಬುದು ಅವರ ಬಜೆಟ್ ಭಾಷಣದಲ್ಲಿ ಬಹು ನಿರೀಕ್ಷಿತ ಭಾಗವಾಗಿದೆ. ಚುನಾವಣಾ ಪೂರ್ವ ಮಧ್ಯಂತರ ಬಜೆಟ್ನಲ್ಲಿ ಮಧ್ಯಮ ವರ್ಗದವರಿಗೆ ಏನೂ ಸಿಗಲಿಲ್ಲ. ಹಾಗಾಗಿ ಅವರ ನಿರೀಕ್ಷೆಗಳು ಹೆಚ್ಚಿವೆ. ಬಜೆಟ್ ವಿತ್ತೀಯ ಕೊರತೆಯು ಶೇ.4.5 ರಷ್ಟಿದ್ದು, ಕಳೆದ ಆರ್ಥಿಕ ವರ್ಷದಲ್ಲಿ ಶೇ.5.8 ರಷ್ಟಿತ್ತು. ಪೂರ್ಣ ಬಜೆಟ್ ಮೊದಲಿನ ವಿತ್ತೀಯ ಕೊರತೆಯ ಪ್ರಕ್ಷೇಪಗಳಿಗಿಂತ ಉತ್ತಮವಾಗಿದೆ ಎಂದು ನಿರೀಕ್ಷಿಸಲಾಗಿದೆ. ವಿತ್ತೀಯ ಕೊರತೆಯು ಸರ್ಕಾರದ ವೆಚ್ಚ ಮತ್ತು ಆದಾಯದ ನಡುವಿನ ವ್ಯತ್ಯಾಸವಾಗಿದೆ.
ಮೂಲಸೌಕರ್ಯ ಅಭಿವೃದ್ಧಿಗೆ ಮೋದಿ ಸರ್ಕಾರ ಹೆಚ್ಚಿನ ಒತ್ತು ನೀಡಿದೆ. ಸರ್ಕಾರದ ಯೋಜಿತ ಬಂಡವಾಳ ವೆಚ್ಚವು (ಕ್ಯಾಪೆಕ್ಸ್) 11.1 ಲಕ್ಷ ಕೋಟಿಯಲ್ಲಿದೆ. ಇದು ಕಳೆದ ಆರ್ಥಿಕ ವರ್ಷದಲ್ಲಿ 9.5 ಲಕ್ಷ ಕೋಟಿಗಿಂತ ಹೆಚ್ಚಾಗಿದೆ. ಸರ್ಕಾರವು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ಕ್ಯಾಪೆಕ್ಸ್ ಅನ್ನು ಹೆಚ್ಚಿಸಲು ರಾಜ್ಯಗಳನ್ನು ಪ್ರೋತ್ಸಾಹಿಸುತ್ತಿದೆ. ಕೇಂದ್ರ ಬಜೆಟ್ 2024ರ ಜು.30 ರಂದು ಅಂಗೀಕಾರವಾಗುವ ಸಾಧ್ಯತೆಯಿದೆ. ಬೆಲೆ ಏರಿಕೆ, ನಿರುದ್ಯೋಗ, ಪ್ರಮುಖ ಕ್ಷೇತ್ರಗಳಲ್ಲಿನ ಬೆಳವಣಿಗೆಯ ಕೊರತೆ ಮತ್ತು ಕೃಷಿ ಸಂಕಷ್ಟದ ಬಗ್ಗೆ ವಿಪಕ್ಷಗಳು ಹೆಚ್ಚು ಚರ್ಚೆ ನಡೆಸುತ್ತಿವೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…