Advertisement
ಸುದ್ದಿಗಳು

ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲದ ಬಜೆಟ್ | ತೆರಿಗೆದಾರರಿಗೆ ಯಾವುದೇ ಪರಿಹಾರ ಅಥವಾ ಆತಂಕ ಇಲ್ಲ

Share

ಈ ಅವಧಿಯ ಕೊನೆಯ ಮಧ್ಯಂತರ ಬಜೆಟ್‌(Interim Budget) ಅನ್ನು ಹಣಕಾಸು ಸಚಿವೆ(Finance Minister) ನಿರ್ಮಲ ಸೀತಾರಾಮನ್‌(Nirmala Sitharaman) ಇಂದು ಸಂಸತ್ತಿನಲ್ಲಿ ಮಂಡಿಸಿದರು. ಅನೇಕ ಜನಪರ ಯೋಜನೆಗಳನ್ನು ಮಂಡಿಸಿದ ಹಣಕಾಸು ಸಚಿವರು, ಆದಾಯ ತೆರಿಗೆ (Income Tax) ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌  ಹೇಳಿದ್ದಾರೆ. 2024-25ನೇ ಸಾಲಿನ ಮಧ್ಯಂತರ ಬಜೆಟ್‌ ಲೋಕಸಭೆಯಲ್ಲಿ ಮಂಡನೆಯಾಗಿದ್ದು, ನೇರ ಮತ್ತು ಪರೋಕ್ಷ ತೆರಿಗೆ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಸರ್ಕಾರ ಮುಂದಾಗಿದೆ.

Advertisement
Advertisement

ಮಧ್ಯಂತರ ಬಜೆಟ್‌ನಲ್ಲಿ  ಆದಾಯ ತೆರಿಗೆ ಸ್ಲ್ಯಾಬ್​ಗಳು ಕಳೆದ ಹಣಕಾಸು ವರ್ಷದ್ದೇ ಆಗಿರುವುದರಿಂದ ತೆರಿಗೆದಾರರಿಗೆ ಯಾವುದೇ ಪರಿಹಾರ ಅಥವಾ ಆತಂಕ ಇಲ್ಲ. ಆದರೆ ಪರಿಹಾರ ನಿರೀಕ್ಷೆ ಮಾಡಿದ್ದವರಿಗೆ ಬೇಸರ ತಂದಿದೆ. ಹಾಲಿ ಸ್ಲ್ಯಾಬ್ ಪ್ರಕಾರ 7 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇರುವುದಿಲ್ಲ.

2023-24ರ ಬಜೆಟ್‌ನಲ್ಲಿ (Union Budget 2023) ವಾರ್ಷಿಕ 7 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿಯನ್ನು ಏರಿಕೆ ಮಾಡುವ ಮೂಲಕ ಸಂಬಳದಾರರಿಗೆ ಸೀತಾರಾಮನ್‌ ಸಿಹಿ ಸುದ್ದಿ ನೀಡಿದ್ದರು. ಈ ಮೊದಲು ವಾರ್ಷಿಕ 5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಸಿಕ್ಕಿತ್ತು.

ಹಾಲಿ ಎಷ್ಟು ಆದಾಯಕ್ಕೆ ಎಷ್ಟು ತೆರಿಗೆಯಿದೆ?
0-3 ಲಕ್ಷ ರೂ. – ಇಲ್ಲ
3- 6 ಲಕ್ಷ ರೂ. – 5%

6- 9 ಲಕ್ಷ ರೂ. – 10%
9-12 ಲಕ್ಷ ರೂ. – 15%

12-15 ಲಕ್ಷ ರೂ. 20%
15 ಲಕ್ಷ ರೂ. 30%

– ಅಂತರ್ಜಾಲ ಮಾಹಿತಿ

Finance Minister Nirmala Sitharaman has said that there is no change in the income tax slab. The interim budget for the year 2024-25 has been presented in the Lok Sabha and the government has decided not to make any changes in the direct and indirect tax system.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

20 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

20 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

20 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

20 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago