ಸುದ್ದಿಗಳು

ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲದ ಬಜೆಟ್ | ತೆರಿಗೆದಾರರಿಗೆ ಯಾವುದೇ ಪರಿಹಾರ ಅಥವಾ ಆತಂಕ ಇಲ್ಲ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಅವಧಿಯ ಕೊನೆಯ ಮಧ್ಯಂತರ ಬಜೆಟ್‌(Interim Budget) ಅನ್ನು ಹಣಕಾಸು ಸಚಿವೆ(Finance Minister) ನಿರ್ಮಲ ಸೀತಾರಾಮನ್‌(Nirmala Sitharaman) ಇಂದು ಸಂಸತ್ತಿನಲ್ಲಿ ಮಂಡಿಸಿದರು. ಅನೇಕ ಜನಪರ ಯೋಜನೆಗಳನ್ನು ಮಂಡಿಸಿದ ಹಣಕಾಸು ಸಚಿವರು, ಆದಾಯ ತೆರಿಗೆ (Income Tax) ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌  ಹೇಳಿದ್ದಾರೆ. 2024-25ನೇ ಸಾಲಿನ ಮಧ್ಯಂತರ ಬಜೆಟ್‌ ಲೋಕಸಭೆಯಲ್ಲಿ ಮಂಡನೆಯಾಗಿದ್ದು, ನೇರ ಮತ್ತು ಪರೋಕ್ಷ ತೆರಿಗೆ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಸರ್ಕಾರ ಮುಂದಾಗಿದೆ.

Advertisement

ಮಧ್ಯಂತರ ಬಜೆಟ್‌ನಲ್ಲಿ  ಆದಾಯ ತೆರಿಗೆ ಸ್ಲ್ಯಾಬ್​ಗಳು ಕಳೆದ ಹಣಕಾಸು ವರ್ಷದ್ದೇ ಆಗಿರುವುದರಿಂದ ತೆರಿಗೆದಾರರಿಗೆ ಯಾವುದೇ ಪರಿಹಾರ ಅಥವಾ ಆತಂಕ ಇಲ್ಲ. ಆದರೆ ಪರಿಹಾರ ನಿರೀಕ್ಷೆ ಮಾಡಿದ್ದವರಿಗೆ ಬೇಸರ ತಂದಿದೆ. ಹಾಲಿ ಸ್ಲ್ಯಾಬ್ ಪ್ರಕಾರ 7 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇರುವುದಿಲ್ಲ.

2023-24ರ ಬಜೆಟ್‌ನಲ್ಲಿ (Union Budget 2023) ವಾರ್ಷಿಕ 7 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿಯನ್ನು ಏರಿಕೆ ಮಾಡುವ ಮೂಲಕ ಸಂಬಳದಾರರಿಗೆ ಸೀತಾರಾಮನ್‌ ಸಿಹಿ ಸುದ್ದಿ ನೀಡಿದ್ದರು. ಈ ಮೊದಲು ವಾರ್ಷಿಕ 5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಸಿಕ್ಕಿತ್ತು.

ಹಾಲಿ ಎಷ್ಟು ಆದಾಯಕ್ಕೆ ಎಷ್ಟು ತೆರಿಗೆಯಿದೆ?
0-3 ಲಕ್ಷ ರೂ. – ಇಲ್ಲ
3- 6 ಲಕ್ಷ ರೂ. – 5%

Advertisement

6- 9 ಲಕ್ಷ ರೂ. – 10%
9-12 ಲಕ್ಷ ರೂ. – 15%

Advertisement

12-15 ಲಕ್ಷ ರೂ. 20%
15 ಲಕ್ಷ ರೂ. 30%

– ಅಂತರ್ಜಾಲ ಮಾಹಿತಿ

Finance Minister Nirmala Sitharaman has said that there is no change in the income tax slab. The interim budget for the year 2024-25 has been presented in the Lok Sabha and the government has decided not to make any changes in the direct and indirect tax system.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

45 minutes ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

7 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

13 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

13 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

14 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

1 day ago