Advertisement
ಸುದ್ದಿಗಳು

ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲದ ಬಜೆಟ್ | ತೆರಿಗೆದಾರರಿಗೆ ಯಾವುದೇ ಪರಿಹಾರ ಅಥವಾ ಆತಂಕ ಇಲ್ಲ

Share

ಈ ಅವಧಿಯ ಕೊನೆಯ ಮಧ್ಯಂತರ ಬಜೆಟ್‌(Interim Budget) ಅನ್ನು ಹಣಕಾಸು ಸಚಿವೆ(Finance Minister) ನಿರ್ಮಲ ಸೀತಾರಾಮನ್‌(Nirmala Sitharaman) ಇಂದು ಸಂಸತ್ತಿನಲ್ಲಿ ಮಂಡಿಸಿದರು. ಅನೇಕ ಜನಪರ ಯೋಜನೆಗಳನ್ನು ಮಂಡಿಸಿದ ಹಣಕಾಸು ಸಚಿವರು, ಆದಾಯ ತೆರಿಗೆ (Income Tax) ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌  ಹೇಳಿದ್ದಾರೆ. 2024-25ನೇ ಸಾಲಿನ ಮಧ್ಯಂತರ ಬಜೆಟ್‌ ಲೋಕಸಭೆಯಲ್ಲಿ ಮಂಡನೆಯಾಗಿದ್ದು, ನೇರ ಮತ್ತು ಪರೋಕ್ಷ ತೆರಿಗೆ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಸರ್ಕಾರ ಮುಂದಾಗಿದೆ.

ಮಧ್ಯಂತರ ಬಜೆಟ್‌ನಲ್ಲಿ  ಆದಾಯ ತೆರಿಗೆ ಸ್ಲ್ಯಾಬ್​ಗಳು ಕಳೆದ ಹಣಕಾಸು ವರ್ಷದ್ದೇ ಆಗಿರುವುದರಿಂದ ತೆರಿಗೆದಾರರಿಗೆ ಯಾವುದೇ ಪರಿಹಾರ ಅಥವಾ ಆತಂಕ ಇಲ್ಲ. ಆದರೆ ಪರಿಹಾರ ನಿರೀಕ್ಷೆ ಮಾಡಿದ್ದವರಿಗೆ ಬೇಸರ ತಂದಿದೆ. ಹಾಲಿ ಸ್ಲ್ಯಾಬ್ ಪ್ರಕಾರ 7 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇರುವುದಿಲ್ಲ.

2023-24ರ ಬಜೆಟ್‌ನಲ್ಲಿ (Union Budget 2023) ವಾರ್ಷಿಕ 7 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿಯನ್ನು ಏರಿಕೆ ಮಾಡುವ ಮೂಲಕ ಸಂಬಳದಾರರಿಗೆ ಸೀತಾರಾಮನ್‌ ಸಿಹಿ ಸುದ್ದಿ ನೀಡಿದ್ದರು. ಈ ಮೊದಲು ವಾರ್ಷಿಕ 5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಸಿಕ್ಕಿತ್ತು.

ಹಾಲಿ ಎಷ್ಟು ಆದಾಯಕ್ಕೆ ಎಷ್ಟು ತೆರಿಗೆಯಿದೆ?
0-3 ಲಕ್ಷ ರೂ. – ಇಲ್ಲ
3- 6 ಲಕ್ಷ ರೂ. – 5%

6- 9 ಲಕ್ಷ ರೂ. – 10%
9-12 ಲಕ್ಷ ರೂ. – 15%

12-15 ಲಕ್ಷ ರೂ. 20%
15 ಲಕ್ಷ ರೂ. 30%

– ಅಂತರ್ಜಾಲ ಮಾಹಿತಿ

Finance Minister Nirmala Sitharaman has said that there is no change in the income tax slab. The interim budget for the year 2024-25 has been presented in the Lok Sabha and the government has decided not to make any changes in the direct and indirect tax system.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

23 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

24 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago