Advertisement
ಸುದ್ದಿಗಳು

ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲದ ಬಜೆಟ್ | ತೆರಿಗೆದಾರರಿಗೆ ಯಾವುದೇ ಪರಿಹಾರ ಅಥವಾ ಆತಂಕ ಇಲ್ಲ

Share

ಈ ಅವಧಿಯ ಕೊನೆಯ ಮಧ್ಯಂತರ ಬಜೆಟ್‌(Interim Budget) ಅನ್ನು ಹಣಕಾಸು ಸಚಿವೆ(Finance Minister) ನಿರ್ಮಲ ಸೀತಾರಾಮನ್‌(Nirmala Sitharaman) ಇಂದು ಸಂಸತ್ತಿನಲ್ಲಿ ಮಂಡಿಸಿದರು. ಅನೇಕ ಜನಪರ ಯೋಜನೆಗಳನ್ನು ಮಂಡಿಸಿದ ಹಣಕಾಸು ಸಚಿವರು, ಆದಾಯ ತೆರಿಗೆ (Income Tax) ಸ್ಲ್ಯಾಬ್‌ನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌  ಹೇಳಿದ್ದಾರೆ. 2024-25ನೇ ಸಾಲಿನ ಮಧ್ಯಂತರ ಬಜೆಟ್‌ ಲೋಕಸಭೆಯಲ್ಲಿ ಮಂಡನೆಯಾಗಿದ್ದು, ನೇರ ಮತ್ತು ಪರೋಕ್ಷ ತೆರಿಗೆ ವ್ಯವಸ್ಥೆಯಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಸರ್ಕಾರ ಮುಂದಾಗಿದೆ.

ಮಧ್ಯಂತರ ಬಜೆಟ್‌ನಲ್ಲಿ  ಆದಾಯ ತೆರಿಗೆ ಸ್ಲ್ಯಾಬ್​ಗಳು ಕಳೆದ ಹಣಕಾಸು ವರ್ಷದ್ದೇ ಆಗಿರುವುದರಿಂದ ತೆರಿಗೆದಾರರಿಗೆ ಯಾವುದೇ ಪರಿಹಾರ ಅಥವಾ ಆತಂಕ ಇಲ್ಲ. ಆದರೆ ಪರಿಹಾರ ನಿರೀಕ್ಷೆ ಮಾಡಿದ್ದವರಿಗೆ ಬೇಸರ ತಂದಿದೆ. ಹಾಲಿ ಸ್ಲ್ಯಾಬ್ ಪ್ರಕಾರ 7 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇರುವುದಿಲ್ಲ.

2023-24ರ ಬಜೆಟ್‌ನಲ್ಲಿ (Union Budget 2023) ವಾರ್ಷಿಕ 7 ಲಕ್ಷ ರೂ.ವರೆಗೆ ಆದಾಯ ತೆರಿಗೆ ವಿನಾಯಿತಿಯನ್ನು ಏರಿಕೆ ಮಾಡುವ ಮೂಲಕ ಸಂಬಳದಾರರಿಗೆ ಸೀತಾರಾಮನ್‌ ಸಿಹಿ ಸುದ್ದಿ ನೀಡಿದ್ದರು. ಈ ಮೊದಲು ವಾರ್ಷಿಕ 5 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಸಿಕ್ಕಿತ್ತು.

ಹಾಲಿ ಎಷ್ಟು ಆದಾಯಕ್ಕೆ ಎಷ್ಟು ತೆರಿಗೆಯಿದೆ?
0-3 ಲಕ್ಷ ರೂ. – ಇಲ್ಲ
3- 6 ಲಕ್ಷ ರೂ. – 5%

6- 9 ಲಕ್ಷ ರೂ. – 10%
9-12 ಲಕ್ಷ ರೂ. – 15%

12-15 ಲಕ್ಷ ರೂ. 20%
15 ಲಕ್ಷ ರೂ. 30%

– ಅಂತರ್ಜಾಲ ಮಾಹಿತಿ

Finance Minister Nirmala Sitharaman has said that there is no change in the income tax slab. The interim budget for the year 2024-25 has been presented in the Lok Sabha and the government has decided not to make any changes in the direct and indirect tax system.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

5 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

5 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

13 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

15 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

21 hours ago

ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!

ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…

21 hours ago