Advertisement
MIRROR FOCUS

ಕೃಷಿ ತಂತ್ರಜ್ಞಾನ ಬೆಳೆದರೂ ಜಾನುವಾರುಗಳಿಗೆ ತಗ್ಗಿಲ್ಲ ಬೇಡಿಕೆ | ಹಾವೇರಿ ಜಾನುವಾರು ಮಾರುಕಟ್ಟೆಯಲ್ಲಿ ಎತ್ತುಗಳಿಗೆ ಭಾರೀ ಬೇಡಿಕೆ |

Share

ಸುಬ್ರಹ್ಮಣ್ಯದ(Subrahmanya) ಕುಲ್ಕುಂದದಲ್ಲಿ ನಡೆಯುವ ಜಾನುವಾರು ಜಾತ್ರೆ(Cattle fair) ಬಗ್ಗೆ ಕೇಳಿದ್ದೇವೆ. ಒಂದು ಕಾಲದಲ್ಲಿ ಇಲ್ಲಿ ಯಥೇಚ್ಛವಾಗಿ ಜಾನುವಾರುಗಳ(Cattle) ಕೊಡುಕೊಳ್ಳುವಿಕೆ ನಡೆಯುತ್ತಿತ್ತು. ಆದರೆ ಇಂದಿನ ದಿನಗಳಲ್ಲಿ ಜಾನುವಾರುಗಳಿಗೆ ಬೇಡಿಕೆ ಕುಸಿದು ಜಾನುವಾರು ಜಾತ್ರೆಯ ಸೊಬಗು ಕ್ಷೀಣಿಸಿದೆ. ಆದರೆ ಉತ್ತರ ಕರ್ನಾಟಕದ(North Karnataka) ಪ್ರಮುಖ ಜಾನುವಾರು ಮಾರುಕಟ್ಟೆಗಳ(Cattle Market) ಪೈಕಿ ಹಾವೇರಿ(Haveri) ಜಾನುವಾರು ಮಾರುಕಟ್ಟೆಯಲ್ಲಿ ಭಾರಿ ಜಾನುವಾರುಗಳ ಮಾರಾಟ ನಡೆಯುತ್ತದೆ.  ಇಲ್ಲಿಗೆ ತೆಲಂಗಾಣ(Telangana), ಆಂಧ್ರ ಪ್ರದೇಶ(Andra Pradesh), ತಮಿಳುನಾಡು(Tamilnadu) ರಾಜ್ಯಗಳಿಂದ ರೈತರು(Farmer) ಜಾನುವಾರು ಮಾರಾಟ ಮತ್ತು ಖರೀದಿಗೆ(Sale and Purchase) ಆಗಮಿಸುತ್ತಾರೆ. ಬೆಳಗಾವಿ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಿಂದಲೂ ಇಲ್ಲಿ ವಹಿವಾಟು ನಡೆಸಲು ರೈತರು ಬರುತ್ತಾರೆ.

ಪ್ರಸ್ತುತ ವರ್ಷ ಉತ್ತಮವಾಗಿ ಮುಂಗಾರುಪೂರ್ವ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ತಂದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗಿದ್ದರಿಂದ ರೈತರು ಇದೀಗ ಎತ್ತುಗಳ ಮಾರಾಟ ಹಾಗು ಖರೀದಿಗೆ ಜಾನುವಾರು ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಆದರೆ, ಮಾರುಕಟ್ಟೆಯಲ್ಲಿ ಎತ್ತುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ರೈತರು ಎತ್ತುಗಳನ್ನು ಖರೀದಿಸದೇ ಮರಳುತ್ತಿರುವ ದೃಶ್ಯ ಕಂಡುಬಂತು.

ರೈತರು ಹೇಳಿದ್ದೇನು?: 15 ದಿನಗಳ ಹಿಂದೆ ಇದೇ ಮಾರುಕಟ್ಟೆಯಲ್ಲಿ 80 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದ್ದ ಎತ್ತುಗಳ ದರ ಇದೀಗ ಲಕ್ಷ ದಾಟಿದೆ. ಎರಡು ವಾರಗಳಿಂದ ಮಾರುಕಟ್ಟೆಯಲ್ಲಿ ಜಾನುವಾರುಗಳ ದರ ಹೆಚ್ಚಾಗಿದ್ದು, ಇದಕ್ಕೆ ಉತ್ತಮ ಮುಂಗಾರುಪೂರ್ವ ಮಳೆಯಾಗಿದ್ದೇ ಕಾರಣವಾಗಿದೆ. ಶೇ.25ರಷ್ಟು ರೈತರು ಈಗಾಗಲೇ ಬಿತ್ತನೆ ಮಾಡಿದ್ದಾರೆ. ಬೆಳೆ ಮೊಳಕೆಯೊಡೆದು ಬೆಳೆಯುತ್ತಿದ್ದಂತೆ ಎಡೆಕುಂಟಿ ಹೊಡೆಯಲು, ಚಕ್ಕಡಿ ಸಾಗಿಸಲು ಹಾಗು ವಿವಿಧ ಕಾರಣಗಳಿಗಾಗಿ ಎತ್ತುಗಳು ಬೇಕೇ ಬೇಕು. ಹೀಗಾಗಿ ಎತ್ತುಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ ಎಂದು ರೈತರು ತಿಳಿಸಿದರು. ಉತ್ತಮ ಮುಂಗಾರು ಮಳೆಯಾಗಿ ಬೆಳೆ ಸರಿಯಾಗಿ ಬಂದರೆ, ರೈತರು ಎತ್ತುಗಳನ್ನು ಮಾರಾಟ ಮಾಡದೇ ತಾವೇ ಜೋಪಾನ ಮಾಡುತ್ತಾರೆ. ಆದರೆ, ಕಳೆದ ವರ್ಷ ಬರಗಾಲ ಬಂದಿದ್ದರಿಂದ ಎತ್ತುಗಳಿಗೆ ಮೇವು, ನೀರಿಲ್ಲದೆ ಹೆಚ್ಚಿನ ರೈತರು ಕಡಿಮೆ ದರಕ್ಕೆ ಮಾರಾಟ ಮಾಡಿದ್ದರು.

ಎತ್ತುಗಳ ಖರೀದಿ ಹೇಗೆ ಗೊತ್ತೇ?: ಎತ್ತುಗಳನ್ನು ಲಕ್ಷಾಂತರ ರೂಪಾಯಿ ಕೊಟ್ಟು ಖರೀದಿಸುವ ಮುನ್ನ ಅವುಗಳ ಹಲ್ಲುಗಳ ಪರೀಕ್ಷೆ ಮಾಡಲಾಗುತ್ತದೆ. ನಂತರ ಎಡೆಕುಂಟಿ ಹೊಡೆದು ನೋಡಲಾಗುತ್ತದೆ. ಎಡ ಎತ್ತು ಬಲಕ್ಕೆ, ಬಲದ ಎತ್ತು ಎಡಕ್ಕೆ ಕಟ್ಟಿ ಎಡೆಕುಂಟಿ ಹೊಡೆಯಲಾಗುತ್ತದೆ. ಎತ್ತುಗಳ ಮೇಲಿರುವ ಸುಳಿಗಳನ್ನು ನೋಡಿ ಅಂತಿಮವಾಗಿ ಖರೀದಿ ಪ್ರಕ್ರಿಯೆ ನಡೆಯುತ್ತದೆ. ಹಾವೇರಿ ಜಾನುವಾರು ಮಾರುಕಟ್ಟೆ ಪ್ರಸ್ತುತ ರಾಸುಗಳಿಂದ ತುಂಬಿದ್ದು, ಇನ್ನು ಎರಡ್ಮೂರು ತಿಂಗಳು ದರಗಳು ಸ್ಥಿರವಾಗಿರಲಿವೆ. ಮುಂದೆ ಮಳೆಯಾಗುವುದರ ಮೇಲೆ ಎತ್ತುಗಳ, ಆಕಳುಗಳು ಬೇಡಿಕೆ ನಿರ್ಧಾರವಾಗುತ್ತದೆ ಎಂದು ರೈತರು ಹೇಳಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

20 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

1 day ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago