Advertisement
MIRROR FOCUS

ಕೃಷಿ ತಂತ್ರಜ್ಞಾನ ಬೆಳೆದರೂ ಜಾನುವಾರುಗಳಿಗೆ ತಗ್ಗಿಲ್ಲ ಬೇಡಿಕೆ | ಹಾವೇರಿ ಜಾನುವಾರು ಮಾರುಕಟ್ಟೆಯಲ್ಲಿ ಎತ್ತುಗಳಿಗೆ ಭಾರೀ ಬೇಡಿಕೆ |

Share

ಸುಬ್ರಹ್ಮಣ್ಯದ(Subrahmanya) ಕುಲ್ಕುಂದದಲ್ಲಿ ನಡೆಯುವ ಜಾನುವಾರು ಜಾತ್ರೆ(Cattle fair) ಬಗ್ಗೆ ಕೇಳಿದ್ದೇವೆ. ಒಂದು ಕಾಲದಲ್ಲಿ ಇಲ್ಲಿ ಯಥೇಚ್ಛವಾಗಿ ಜಾನುವಾರುಗಳ(Cattle) ಕೊಡುಕೊಳ್ಳುವಿಕೆ ನಡೆಯುತ್ತಿತ್ತು. ಆದರೆ ಇಂದಿನ ದಿನಗಳಲ್ಲಿ ಜಾನುವಾರುಗಳಿಗೆ ಬೇಡಿಕೆ ಕುಸಿದು ಜಾನುವಾರು ಜಾತ್ರೆಯ ಸೊಬಗು ಕ್ಷೀಣಿಸಿದೆ. ಆದರೆ ಉತ್ತರ ಕರ್ನಾಟಕದ(North Karnataka) ಪ್ರಮುಖ ಜಾನುವಾರು ಮಾರುಕಟ್ಟೆಗಳ(Cattle Market) ಪೈಕಿ ಹಾವೇರಿ(Haveri) ಜಾನುವಾರು ಮಾರುಕಟ್ಟೆಯಲ್ಲಿ ಭಾರಿ ಜಾನುವಾರುಗಳ ಮಾರಾಟ ನಡೆಯುತ್ತದೆ.  ಇಲ್ಲಿಗೆ ತೆಲಂಗಾಣ(Telangana), ಆಂಧ್ರ ಪ್ರದೇಶ(Andra Pradesh), ತಮಿಳುನಾಡು(Tamilnadu) ರಾಜ್ಯಗಳಿಂದ ರೈತರು(Farmer) ಜಾನುವಾರು ಮಾರಾಟ ಮತ್ತು ಖರೀದಿಗೆ(Sale and Purchase) ಆಗಮಿಸುತ್ತಾರೆ. ಬೆಳಗಾವಿ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಿಂದಲೂ ಇಲ್ಲಿ ವಹಿವಾಟು ನಡೆಸಲು ರೈತರು ಬರುತ್ತಾರೆ.

Advertisement

ಪ್ರಸ್ತುತ ವರ್ಷ ಉತ್ತಮವಾಗಿ ಮುಂಗಾರುಪೂರ್ವ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ತಂದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗಿದ್ದರಿಂದ ರೈತರು ಇದೀಗ ಎತ್ತುಗಳ ಮಾರಾಟ ಹಾಗು ಖರೀದಿಗೆ ಜಾನುವಾರು ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಆದರೆ, ಮಾರುಕಟ್ಟೆಯಲ್ಲಿ ಎತ್ತುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ರೈತರು ಎತ್ತುಗಳನ್ನು ಖರೀದಿಸದೇ ಮರಳುತ್ತಿರುವ ದೃಶ್ಯ ಕಂಡುಬಂತು.

ರೈತರು ಹೇಳಿದ್ದೇನು?: 15 ದಿನಗಳ ಹಿಂದೆ ಇದೇ ಮಾರುಕಟ್ಟೆಯಲ್ಲಿ 80 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದ್ದ ಎತ್ತುಗಳ ದರ ಇದೀಗ ಲಕ್ಷ ದಾಟಿದೆ. ಎರಡು ವಾರಗಳಿಂದ ಮಾರುಕಟ್ಟೆಯಲ್ಲಿ ಜಾನುವಾರುಗಳ ದರ ಹೆಚ್ಚಾಗಿದ್ದು, ಇದಕ್ಕೆ ಉತ್ತಮ ಮುಂಗಾರುಪೂರ್ವ ಮಳೆಯಾಗಿದ್ದೇ ಕಾರಣವಾಗಿದೆ. ಶೇ.25ರಷ್ಟು ರೈತರು ಈಗಾಗಲೇ ಬಿತ್ತನೆ ಮಾಡಿದ್ದಾರೆ. ಬೆಳೆ ಮೊಳಕೆಯೊಡೆದು ಬೆಳೆಯುತ್ತಿದ್ದಂತೆ ಎಡೆಕುಂಟಿ ಹೊಡೆಯಲು, ಚಕ್ಕಡಿ ಸಾಗಿಸಲು ಹಾಗು ವಿವಿಧ ಕಾರಣಗಳಿಗಾಗಿ ಎತ್ತುಗಳು ಬೇಕೇ ಬೇಕು. ಹೀಗಾಗಿ ಎತ್ತುಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ ಎಂದು ರೈತರು ತಿಳಿಸಿದರು. ಉತ್ತಮ ಮುಂಗಾರು ಮಳೆಯಾಗಿ ಬೆಳೆ ಸರಿಯಾಗಿ ಬಂದರೆ, ರೈತರು ಎತ್ತುಗಳನ್ನು ಮಾರಾಟ ಮಾಡದೇ ತಾವೇ ಜೋಪಾನ ಮಾಡುತ್ತಾರೆ. ಆದರೆ, ಕಳೆದ ವರ್ಷ ಬರಗಾಲ ಬಂದಿದ್ದರಿಂದ ಎತ್ತುಗಳಿಗೆ ಮೇವು, ನೀರಿಲ್ಲದೆ ಹೆಚ್ಚಿನ ರೈತರು ಕಡಿಮೆ ದರಕ್ಕೆ ಮಾರಾಟ ಮಾಡಿದ್ದರು.

ಎತ್ತುಗಳ ಖರೀದಿ ಹೇಗೆ ಗೊತ್ತೇ?: ಎತ್ತುಗಳನ್ನು ಲಕ್ಷಾಂತರ ರೂಪಾಯಿ ಕೊಟ್ಟು ಖರೀದಿಸುವ ಮುನ್ನ ಅವುಗಳ ಹಲ್ಲುಗಳ ಪರೀಕ್ಷೆ ಮಾಡಲಾಗುತ್ತದೆ. ನಂತರ ಎಡೆಕುಂಟಿ ಹೊಡೆದು ನೋಡಲಾಗುತ್ತದೆ. ಎಡ ಎತ್ತು ಬಲಕ್ಕೆ, ಬಲದ ಎತ್ತು ಎಡಕ್ಕೆ ಕಟ್ಟಿ ಎಡೆಕುಂಟಿ ಹೊಡೆಯಲಾಗುತ್ತದೆ. ಎತ್ತುಗಳ ಮೇಲಿರುವ ಸುಳಿಗಳನ್ನು ನೋಡಿ ಅಂತಿಮವಾಗಿ ಖರೀದಿ ಪ್ರಕ್ರಿಯೆ ನಡೆಯುತ್ತದೆ. ಹಾವೇರಿ ಜಾನುವಾರು ಮಾರುಕಟ್ಟೆ ಪ್ರಸ್ತುತ ರಾಸುಗಳಿಂದ ತುಂಬಿದ್ದು, ಇನ್ನು ಎರಡ್ಮೂರು ತಿಂಗಳು ದರಗಳು ಸ್ಥಿರವಾಗಿರಲಿವೆ. ಮುಂದೆ ಮಳೆಯಾಗುವುದರ ಮೇಲೆ ಎತ್ತುಗಳ, ಆಕಳುಗಳು ಬೇಡಿಕೆ ನಿರ್ಧಾರವಾಗುತ್ತದೆ ಎಂದು ರೈತರು ಹೇಳಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

9 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

1 day ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago