Advertisement
MIRROR FOCUS

ಕೃಷಿ ತಂತ್ರಜ್ಞಾನ ಬೆಳೆದರೂ ಜಾನುವಾರುಗಳಿಗೆ ತಗ್ಗಿಲ್ಲ ಬೇಡಿಕೆ | ಹಾವೇರಿ ಜಾನುವಾರು ಮಾರುಕಟ್ಟೆಯಲ್ಲಿ ಎತ್ತುಗಳಿಗೆ ಭಾರೀ ಬೇಡಿಕೆ |

Share

ಸುಬ್ರಹ್ಮಣ್ಯದ(Subrahmanya) ಕುಲ್ಕುಂದದಲ್ಲಿ ನಡೆಯುವ ಜಾನುವಾರು ಜಾತ್ರೆ(Cattle fair) ಬಗ್ಗೆ ಕೇಳಿದ್ದೇವೆ. ಒಂದು ಕಾಲದಲ್ಲಿ ಇಲ್ಲಿ ಯಥೇಚ್ಛವಾಗಿ ಜಾನುವಾರುಗಳ(Cattle) ಕೊಡುಕೊಳ್ಳುವಿಕೆ ನಡೆಯುತ್ತಿತ್ತು. ಆದರೆ ಇಂದಿನ ದಿನಗಳಲ್ಲಿ ಜಾನುವಾರುಗಳಿಗೆ ಬೇಡಿಕೆ ಕುಸಿದು ಜಾನುವಾರು ಜಾತ್ರೆಯ ಸೊಬಗು ಕ್ಷೀಣಿಸಿದೆ. ಆದರೆ ಉತ್ತರ ಕರ್ನಾಟಕದ(North Karnataka) ಪ್ರಮುಖ ಜಾನುವಾರು ಮಾರುಕಟ್ಟೆಗಳ(Cattle Market) ಪೈಕಿ ಹಾವೇರಿ(Haveri) ಜಾನುವಾರು ಮಾರುಕಟ್ಟೆಯಲ್ಲಿ ಭಾರಿ ಜಾನುವಾರುಗಳ ಮಾರಾಟ ನಡೆಯುತ್ತದೆ.  ಇಲ್ಲಿಗೆ ತೆಲಂಗಾಣ(Telangana), ಆಂಧ್ರ ಪ್ರದೇಶ(Andra Pradesh), ತಮಿಳುನಾಡು(Tamilnadu) ರಾಜ್ಯಗಳಿಂದ ರೈತರು(Farmer) ಜಾನುವಾರು ಮಾರಾಟ ಮತ್ತು ಖರೀದಿಗೆ(Sale and Purchase) ಆಗಮಿಸುತ್ತಾರೆ. ಬೆಳಗಾವಿ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಿಂದಲೂ ಇಲ್ಲಿ ವಹಿವಾಟು ನಡೆಸಲು ರೈತರು ಬರುತ್ತಾರೆ.

ಪ್ರಸ್ತುತ ವರ್ಷ ಉತ್ತಮವಾಗಿ ಮುಂಗಾರುಪೂರ್ವ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ತಂದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗಿದ್ದರಿಂದ ರೈತರು ಇದೀಗ ಎತ್ತುಗಳ ಮಾರಾಟ ಹಾಗು ಖರೀದಿಗೆ ಜಾನುವಾರು ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಆದರೆ, ಮಾರುಕಟ್ಟೆಯಲ್ಲಿ ಎತ್ತುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ರೈತರು ಎತ್ತುಗಳನ್ನು ಖರೀದಿಸದೇ ಮರಳುತ್ತಿರುವ ದೃಶ್ಯ ಕಂಡುಬಂತು.

ರೈತರು ಹೇಳಿದ್ದೇನು?: 15 ದಿನಗಳ ಹಿಂದೆ ಇದೇ ಮಾರುಕಟ್ಟೆಯಲ್ಲಿ 80 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದ್ದ ಎತ್ತುಗಳ ದರ ಇದೀಗ ಲಕ್ಷ ದಾಟಿದೆ. ಎರಡು ವಾರಗಳಿಂದ ಮಾರುಕಟ್ಟೆಯಲ್ಲಿ ಜಾನುವಾರುಗಳ ದರ ಹೆಚ್ಚಾಗಿದ್ದು, ಇದಕ್ಕೆ ಉತ್ತಮ ಮುಂಗಾರುಪೂರ್ವ ಮಳೆಯಾಗಿದ್ದೇ ಕಾರಣವಾಗಿದೆ. ಶೇ.25ರಷ್ಟು ರೈತರು ಈಗಾಗಲೇ ಬಿತ್ತನೆ ಮಾಡಿದ್ದಾರೆ. ಬೆಳೆ ಮೊಳಕೆಯೊಡೆದು ಬೆಳೆಯುತ್ತಿದ್ದಂತೆ ಎಡೆಕುಂಟಿ ಹೊಡೆಯಲು, ಚಕ್ಕಡಿ ಸಾಗಿಸಲು ಹಾಗು ವಿವಿಧ ಕಾರಣಗಳಿಗಾಗಿ ಎತ್ತುಗಳು ಬೇಕೇ ಬೇಕು. ಹೀಗಾಗಿ ಎತ್ತುಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ ಎಂದು ರೈತರು ತಿಳಿಸಿದರು. ಉತ್ತಮ ಮುಂಗಾರು ಮಳೆಯಾಗಿ ಬೆಳೆ ಸರಿಯಾಗಿ ಬಂದರೆ, ರೈತರು ಎತ್ತುಗಳನ್ನು ಮಾರಾಟ ಮಾಡದೇ ತಾವೇ ಜೋಪಾನ ಮಾಡುತ್ತಾರೆ. ಆದರೆ, ಕಳೆದ ವರ್ಷ ಬರಗಾಲ ಬಂದಿದ್ದರಿಂದ ಎತ್ತುಗಳಿಗೆ ಮೇವು, ನೀರಿಲ್ಲದೆ ಹೆಚ್ಚಿನ ರೈತರು ಕಡಿಮೆ ದರಕ್ಕೆ ಮಾರಾಟ ಮಾಡಿದ್ದರು.

ಎತ್ತುಗಳ ಖರೀದಿ ಹೇಗೆ ಗೊತ್ತೇ?: ಎತ್ತುಗಳನ್ನು ಲಕ್ಷಾಂತರ ರೂಪಾಯಿ ಕೊಟ್ಟು ಖರೀದಿಸುವ ಮುನ್ನ ಅವುಗಳ ಹಲ್ಲುಗಳ ಪರೀಕ್ಷೆ ಮಾಡಲಾಗುತ್ತದೆ. ನಂತರ ಎಡೆಕುಂಟಿ ಹೊಡೆದು ನೋಡಲಾಗುತ್ತದೆ. ಎಡ ಎತ್ತು ಬಲಕ್ಕೆ, ಬಲದ ಎತ್ತು ಎಡಕ್ಕೆ ಕಟ್ಟಿ ಎಡೆಕುಂಟಿ ಹೊಡೆಯಲಾಗುತ್ತದೆ. ಎತ್ತುಗಳ ಮೇಲಿರುವ ಸುಳಿಗಳನ್ನು ನೋಡಿ ಅಂತಿಮವಾಗಿ ಖರೀದಿ ಪ್ರಕ್ರಿಯೆ ನಡೆಯುತ್ತದೆ. ಹಾವೇರಿ ಜಾನುವಾರು ಮಾರುಕಟ್ಟೆ ಪ್ರಸ್ತುತ ರಾಸುಗಳಿಂದ ತುಂಬಿದ್ದು, ಇನ್ನು ಎರಡ್ಮೂರು ತಿಂಗಳು ದರಗಳು ಸ್ಥಿರವಾಗಿರಲಿವೆ. ಮುಂದೆ ಮಳೆಯಾಗುವುದರ ಮೇಲೆ ಎತ್ತುಗಳ, ಆಕಳುಗಳು ಬೇಡಿಕೆ ನಿರ್ಧಾರವಾಗುತ್ತದೆ ಎಂದು ರೈತರು ಹೇಳಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

13 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

22 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

23 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago