Advertisement
MIRROR FOCUS

ಕೃಷಿ ತಂತ್ರಜ್ಞಾನ ಬೆಳೆದರೂ ಜಾನುವಾರುಗಳಿಗೆ ತಗ್ಗಿಲ್ಲ ಬೇಡಿಕೆ | ಹಾವೇರಿ ಜಾನುವಾರು ಮಾರುಕಟ್ಟೆಯಲ್ಲಿ ಎತ್ತುಗಳಿಗೆ ಭಾರೀ ಬೇಡಿಕೆ |

Share

ಸುಬ್ರಹ್ಮಣ್ಯದ(Subrahmanya) ಕುಲ್ಕುಂದದಲ್ಲಿ ನಡೆಯುವ ಜಾನುವಾರು ಜಾತ್ರೆ(Cattle fair) ಬಗ್ಗೆ ಕೇಳಿದ್ದೇವೆ. ಒಂದು ಕಾಲದಲ್ಲಿ ಇಲ್ಲಿ ಯಥೇಚ್ಛವಾಗಿ ಜಾನುವಾರುಗಳ(Cattle) ಕೊಡುಕೊಳ್ಳುವಿಕೆ ನಡೆಯುತ್ತಿತ್ತು. ಆದರೆ ಇಂದಿನ ದಿನಗಳಲ್ಲಿ ಜಾನುವಾರುಗಳಿಗೆ ಬೇಡಿಕೆ ಕುಸಿದು ಜಾನುವಾರು ಜಾತ್ರೆಯ ಸೊಬಗು ಕ್ಷೀಣಿಸಿದೆ. ಆದರೆ ಉತ್ತರ ಕರ್ನಾಟಕದ(North Karnataka) ಪ್ರಮುಖ ಜಾನುವಾರು ಮಾರುಕಟ್ಟೆಗಳ(Cattle Market) ಪೈಕಿ ಹಾವೇರಿ(Haveri) ಜಾನುವಾರು ಮಾರುಕಟ್ಟೆಯಲ್ಲಿ ಭಾರಿ ಜಾನುವಾರುಗಳ ಮಾರಾಟ ನಡೆಯುತ್ತದೆ.  ಇಲ್ಲಿಗೆ ತೆಲಂಗಾಣ(Telangana), ಆಂಧ್ರ ಪ್ರದೇಶ(Andra Pradesh), ತಮಿಳುನಾಡು(Tamilnadu) ರಾಜ್ಯಗಳಿಂದ ರೈತರು(Farmer) ಜಾನುವಾರು ಮಾರಾಟ ಮತ್ತು ಖರೀದಿಗೆ(Sale and Purchase) ಆಗಮಿಸುತ್ತಾರೆ. ಬೆಳಗಾವಿ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಗಳಿಂದಲೂ ಇಲ್ಲಿ ವಹಿವಾಟು ನಡೆಸಲು ರೈತರು ಬರುತ್ತಾರೆ.

ಪ್ರಸ್ತುತ ವರ್ಷ ಉತ್ತಮವಾಗಿ ಮುಂಗಾರುಪೂರ್ವ ಮಳೆಯಾಗುತ್ತಿರುವುದು ರೈತರಲ್ಲಿ ಸಂತಸ ತಂದಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮಳೆಯಾಗಿದ್ದರಿಂದ ರೈತರು ಇದೀಗ ಎತ್ತುಗಳ ಮಾರಾಟ ಹಾಗು ಖರೀದಿಗೆ ಜಾನುವಾರು ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಆದರೆ, ಮಾರುಕಟ್ಟೆಯಲ್ಲಿ ಎತ್ತುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ರೈತರು ಎತ್ತುಗಳನ್ನು ಖರೀದಿಸದೇ ಮರಳುತ್ತಿರುವ ದೃಶ್ಯ ಕಂಡುಬಂತು.

ರೈತರು ಹೇಳಿದ್ದೇನು?: 15 ದಿನಗಳ ಹಿಂದೆ ಇದೇ ಮಾರುಕಟ್ಟೆಯಲ್ಲಿ 80 ಸಾವಿರ ರೂಪಾಯಿಗೆ ಮಾರಾಟವಾಗುತ್ತಿದ್ದ ಎತ್ತುಗಳ ದರ ಇದೀಗ ಲಕ್ಷ ದಾಟಿದೆ. ಎರಡು ವಾರಗಳಿಂದ ಮಾರುಕಟ್ಟೆಯಲ್ಲಿ ಜಾನುವಾರುಗಳ ದರ ಹೆಚ್ಚಾಗಿದ್ದು, ಇದಕ್ಕೆ ಉತ್ತಮ ಮುಂಗಾರುಪೂರ್ವ ಮಳೆಯಾಗಿದ್ದೇ ಕಾರಣವಾಗಿದೆ. ಶೇ.25ರಷ್ಟು ರೈತರು ಈಗಾಗಲೇ ಬಿತ್ತನೆ ಮಾಡಿದ್ದಾರೆ. ಬೆಳೆ ಮೊಳಕೆಯೊಡೆದು ಬೆಳೆಯುತ್ತಿದ್ದಂತೆ ಎಡೆಕುಂಟಿ ಹೊಡೆಯಲು, ಚಕ್ಕಡಿ ಸಾಗಿಸಲು ಹಾಗು ವಿವಿಧ ಕಾರಣಗಳಿಗಾಗಿ ಎತ್ತುಗಳು ಬೇಕೇ ಬೇಕು. ಹೀಗಾಗಿ ಎತ್ತುಗಳಿಗೆ ಡಿಮ್ಯಾಂಡ್ ಹೆಚ್ಚಾಗಿದೆ ಎಂದು ರೈತರು ತಿಳಿಸಿದರು. ಉತ್ತಮ ಮುಂಗಾರು ಮಳೆಯಾಗಿ ಬೆಳೆ ಸರಿಯಾಗಿ ಬಂದರೆ, ರೈತರು ಎತ್ತುಗಳನ್ನು ಮಾರಾಟ ಮಾಡದೇ ತಾವೇ ಜೋಪಾನ ಮಾಡುತ್ತಾರೆ. ಆದರೆ, ಕಳೆದ ವರ್ಷ ಬರಗಾಲ ಬಂದಿದ್ದರಿಂದ ಎತ್ತುಗಳಿಗೆ ಮೇವು, ನೀರಿಲ್ಲದೆ ಹೆಚ್ಚಿನ ರೈತರು ಕಡಿಮೆ ದರಕ್ಕೆ ಮಾರಾಟ ಮಾಡಿದ್ದರು.

ಎತ್ತುಗಳ ಖರೀದಿ ಹೇಗೆ ಗೊತ್ತೇ?: ಎತ್ತುಗಳನ್ನು ಲಕ್ಷಾಂತರ ರೂಪಾಯಿ ಕೊಟ್ಟು ಖರೀದಿಸುವ ಮುನ್ನ ಅವುಗಳ ಹಲ್ಲುಗಳ ಪರೀಕ್ಷೆ ಮಾಡಲಾಗುತ್ತದೆ. ನಂತರ ಎಡೆಕುಂಟಿ ಹೊಡೆದು ನೋಡಲಾಗುತ್ತದೆ. ಎಡ ಎತ್ತು ಬಲಕ್ಕೆ, ಬಲದ ಎತ್ತು ಎಡಕ್ಕೆ ಕಟ್ಟಿ ಎಡೆಕುಂಟಿ ಹೊಡೆಯಲಾಗುತ್ತದೆ. ಎತ್ತುಗಳ ಮೇಲಿರುವ ಸುಳಿಗಳನ್ನು ನೋಡಿ ಅಂತಿಮವಾಗಿ ಖರೀದಿ ಪ್ರಕ್ರಿಯೆ ನಡೆಯುತ್ತದೆ. ಹಾವೇರಿ ಜಾನುವಾರು ಮಾರುಕಟ್ಟೆ ಪ್ರಸ್ತುತ ರಾಸುಗಳಿಂದ ತುಂಬಿದ್ದು, ಇನ್ನು ಎರಡ್ಮೂರು ತಿಂಗಳು ದರಗಳು ಸ್ಥಿರವಾಗಿರಲಿವೆ. ಮುಂದೆ ಮಳೆಯಾಗುವುದರ ಮೇಲೆ ಎತ್ತುಗಳ, ಆಕಳುಗಳು ಬೇಡಿಕೆ ನಿರ್ಧಾರವಾಗುತ್ತದೆ ಎಂದು ರೈತರು ಹೇಳಿದ್ದಾರೆ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

57 minutes ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

1 hour ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

4 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

13 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

14 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

20 hours ago